ಗುಪ್ತ ಗುಪ್ತ ಚರ್ಚೆಗೆ ಬ್ರೇಕ್.. ಗ್ರಾಮಪಂಚಾಯಿತಿ ಸಭೆ ನೇರ ಪ್ರಸಾರಕ್ಕೆ ಆದೇಶ..!

Working women to get one day of paid leave per month..!

ಬೆಂಗಳೂರು: ಬಾಗಿಲು ಮುಚ್ಚಿಕೊಂಡು ಗುಪ್ತ ಗುಪ್ತವಾಗಿ ನಡೆಸುತ್ತಿದ್ದ ಗ್ರಾಮ ಪಂಚಾಯತಿಗಳ (Grama panchayath) ಸಭೆಗಳನ್ನು ಸಾರ್ವಜನಿಕರು ನೋಡಲು ಅವಕಾಶ ಕಲ್ಪಿಸುವ ವೇದಿಕೆ ಸಿದ್ದವಾಗಿದೆ.

ಸರ್ಕಾರದ ಆದೇಶದ ಅನ್ವಯ “ಗ್ರಾಮ ಪಂಚಾಯತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು ಎಂದು ಘೋಷಿಸಲಾಗಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.

ಈ ಪತ್ರದ ಅನ್ವಯ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ರನ್ನಯ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಸಭೆ ಮತ್ತು ಗ್ರಾಮ ಪಂಚಾಯತಿ ಸಭೆಗಳನ್ನು ಆಯೋಜಿಸಬೇಕಾಗಿರುತ್ತದೆ.

ನೇರ ಪ್ರಸಾರ

ಗ್ರಾಮ ಪಂಚಾಯತಿಗಳ ಎಲ್ಲಾ ಸಭೆಗಳ ಆಯೋಚಿಸುವಿಕೆ, ನಡೆಸುವ ವಿಧಾನ, ಹಾಜರಾತಿ ಪಡೆಯುವ ಪ್ರಕ್ರಿಯೆ ಮತ್ತು ಸಭಾ ನಡವಳಿಗಳನ್ನು ಡಿಜಿಟಲ್ ಸಾಧನಗಳ ಮೂಲಕ ತಯಾರಿಸುವ ಪ್ರಕ್ರಿಯೆಗಳಲ್ಲಿ ಸುಧಾರಣೆ, ಶಿಸ್ತು, ಸ್ಥಿರತೆ ಮತ್ತು ಏಕರೂಪತೆ ತರುವ ಉದ್ದೇಶ ಹೊಂದಲಾಗಿದೆ.

ಗ್ರಾಮ ಪಂಚಾಯತಿಗಳ ಸಭೆಗಳಲ್ಲಿ ತೆಗೆದುಕೊಂಡಿರುವ ನಿರ್ಣಯಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಲಾದ ಪಂಚತಂತ್ರ 2.0 ತಂತ್ರಾಂಶದಡಿ “Meeting Management” ಮಾಡ್ಯುಲ್ ಅನ್ನು ಅಭಿವೃದ್ಧಿಪಡಿಸಿ, ಅನುಷ್ಠಾನಗೊಳಿಸಲಾಗಿದೆ.

ಇದರೊಂದಿಗೆ ಗ್ರಾಮ ಪಂಚಾಯತಿಗಳಲ್ಲಿ ಆಯೋಜಿಸಲಾಗುವ ಗ್ರಾಮ ಪಂಚಾಯತಿ ಸಭೆಗಳು ಮತ್ತು ಗ್ರಾಮ ಸಭೆಗಳ ತೆಗೆದುಕೊಂಡಿರುವ ನಿರ್ಣಯಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸದರಿ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲು ನಿರ್ಧರಿಸಿದೆ.

ಅದರಂತೆ, ಉಚಿತವಾಗಿ ಲಭ್ಯವಿರುವ ಮಾಧ್ಯಮಗಳಾದ ಯೂಟ್ಯೂಬ್ (Youtube-Free License) ಮಾಧ್ಯಮದ ಮೂಲಕ ಅಥವಾ ಸ್ಥಳೀಯ cable channel ಗಳ ಮೂಲಕ ಗ್ರಾಮ ಪಂಚಾಯತಿ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡುವಂತೆ ಕ್ರಮವಹಿಸಲು ಸೂಚಿಸಿದ್ದಾರೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]