Exclusive Roundtable on KWIN-City Project

ಜಾಗತಿಕ ಹೂಡಿಕೆದಾರರ ಸಮಾವೇಶ: ದೊಡ್ಡಬಳ್ಳಾಪುರ ಬಳಿಯ `ಕ್ವಿನ್ ಸಿಟಿ’ ಕುರಿತು ಮಹತ್ವದ ಮಾಹಿತಿ ಇಲ್ಲಿದೆ..!

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ (KWIN-City )ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್‌ ಟೇಬಲ್‌ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ತಿಳಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಕೂಡ ಇದೆ.

ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ.

ಯುಜಿಸಿ (UGC) ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿ.ವಿ.ಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’ ಎಂದಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕೈಗಾರಿಕೋದ್ಯಮಗಳಲ್ಲಿನ ಹೂಡಿಕೆ ಬಗ್ಗೆ ಮಾತ್ರ ಗಮನವಿರುವುದಿಲ್ಲ. ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಯೂ ಸೇರಿದಂತೆ ಸಂಶೋಧನೆ ಮತ್ತು ಅದಕ್ಕೆ ಪೂರಕವಾಗಿರುವ ವಲಯಗಳಿಗೂ ಆದ್ಯತೆ ಇರಲಿದೆ.

ಕ್ವಿನ್ ಸಿಟಿ (KWIN-City) ಯೋಜನೆಯು ಭವಿಷ್ಯದ ನಗರಾಭಿವೃದ್ಧಿಯ ಪರಿಕಲ್ಪನೆ ಮತ್ತು ಜಾಗತಿಕ ಗುಣಮಟ್ಟದ ಉದ್ಯಮಶೀಲತೆ, ಕೌಶಲ ಮುಂತಾದವನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಒಂದೂವರೆ ಗಂಟೆ ಕಾಲದ ಈ ಗೋಷ್ಠಿಯಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಪರಿಷ್ಟಿತ ವಿಶ್ವವಿದ್ಯಾಲಯಗಳಿಗೆ ಆಹ್ವಾನ

ಅಜೀಂ ಪ್ರೇಂಜಿ, ಪಿಇಎಸ್, ಎಂ ಎಸ್ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿವಿ, ದಯಾನಂದ ಸಾಗರ್, ಚಾಣಕ್ಯ, ಸೆಂಟ್ ಜೋಸೆಫ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಅಮಿಟಿ, ಬಿಎಲ್ ಡಿಇ, ಕ್ರೈಸ್ಟ್, ಜೈನ್, ಕೆಎಲ್ಇ ಸೇರಿದಂತೆ ಇನ್ನೂ ಅನೇಕ ಪರಿಷ್ಟಿತ ವಿಶ್ವವಿದ್ಯಾಲಯಗಳಿಗೆ ಆಹ್ವಾನ ನೀಡಲಾಗಿದೆ.

ಜತೆಗೆ ಐಐಎಸ್ಸಿ, ಜವಾಹರಲಾಲ್ ನೆಹರು ಉನ್ನತ ವಿಜ್ಞಾನ ಸಂಶೋಧನಾ ಕೇಂದ್ರ, ನಿಮ್ಹಾನ್ಸ್, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ನ್ಯೂಯಾರ್ಕಿನ ಸೆಂಟ್ ಜಾನ್ ಯೂನಿವರ್ಸಿಟಿ, ಇಂಗ್ಲೆಂಡಿನ ಯೂನಿವರ್ಸಿಟಿ ಆಫ್ ಯಾರ್ಕ್, ವೆಲ್ಲೂರಿನ ವಿಐಟಿ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು, ಪಿಲಾನಿಯ ಬಿರ್ಲಾ ತಂತ್ರಜ್ಞಾನ ಮತ್ತು ವಿಜ್ಞಾನ ಸಂಸ್ಥೆ (ಬಿಟ್ಸ್), ಶಾಸ್ತ್ರ ಯೂನಿವರ್ಸಿಟಿ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗಳ ಪರಿಣತರೂ ಭಾಗವಹಿಸಲು ವಿಶ್ವಾಸ ಇದೆ ಎಂದು ಅವರು ನುಡಿದಿದ್ದಾರೆ.

ಮಿಗಿಲಾಗಿ ಅಜೀಂ ಪ್ರೇಂಜಿ, ಇನ್ಫೋಸಿಸ್, ರಿಲಯನ್ಸ್, ಅದಾನಿ, ಭಾರತಿ, ವಿಪ್ರೋ, ಬಯೋಕಾನ್, ಕೊಟಕ್ ಎಜುಕೇಶನ್, ಶಿವ ನಾಡಾರ್, ಬಜಾಜ್ ಮತ್ತು ಮಹೀಂದ್ರ ಪ್ರತಿಷ್ಠಾನಗಳು, ಟಾಟಾ ಟ್ರಸ್ಟ್, ಎಚ್.ಡಿ.ಎಫ್.ಸಿ. ಬ್ಯಾಂಕ್ ಪರಿವರ್ತನ್, ಆದಿತ್ಯ ಬಿರ್ಲಾ ಗ್ರೂಪ್ ಸಿಎಸ್ಆರ್ ಹಾಗೂ ಏಷ್ಯನ್ ಪೇಂಟ್ಸ್ ಸಿಎಸ್ಆರ್ ಸಂಸ್ಥೆಗಳ ಉನ್ನತ ಮಟ್ಟದ ಪ್ರತಿನಿಧಿಗಳು ಕೂಡ ಇದರಲ್ಲಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ ಎಂದು ಪಾಟೀಲ ವಿವರಿಸಿದ್ದಾರೆ.

ದೊಡ್ಡಬಳ್ಳಾಪುರ- ದಾಬಸ್‌ಪೇಟೆ ಮಧ್ಯೆ ಸುಮಾರು 5000 ಎಕರೆ ಪ್ರದೇಶದಲ್ಲಿ ಕ್ವಿನ್‌ ಸಿಟಿ (KWIN-City) ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಶಿಕ್ಷಣ, ಆರೋಗ್ಯ, ಸಂಶೋಧನೆ ಮತ್ತು ನಾವೀನ್ಯತೆ ಕುರಿತಾದ ಪ್ರತಿಷ್ಠಿತ ಸಂಸ್ಥೆಗಳು ತಲೆ ಎತ್ತಲಿವೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!