Sri Subrahmanyeshwar Brahma Rathotsava

ವಿಜೃಂಭಣೆಯಿಂದ ನಡೆದ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ ಬ್ರಹ್ಮ ರಥೋತ್ಸವ

ಚಿಕ್ಕಬಳ್ಳಾಪುರ: ನಗರ ಹೊರವಲಯದ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ (Sri Subrahmanyeshwar) ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ವಿಜೃಂಭಣೆಯಿಂದ ಸೋಮವಾರ ನೆರವೇರಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವರ ದರ್ಶನವನ್ನು ಪಡೆದು ಹರಕೆಗಳನ್ನು ಸಮರ್ಪಿಸಿದರು.

ಚಿಕ್ಕಬಳ್ಳಾಪುರ ಹೊರ ವಲಯದ ಇತಿಹಾಸ ಪ್ರಸಿದ್ಧ ಚಿತ್ರಾವತಿಯ ಶ್ರೀ ಸುಬ್ರಹ್ಮಣ್ಯೇಶ್ವರನಿಗೆ ಪ್ರತಿ ಮಾಘ ಮಾಸದ ಕುಮಾರಷಷ್ಟಿಯಂದು ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ಅದ್ಧೂರಿಯಾಗಿ ನಡೆಯುತ್ತದೆ.

ಸುಮಾರು 20 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಜಾತ್ರೆಗೆ ಆಗಮಿಸಿ ಹರಕೆ ಸಮರ್ಪಿಸಿ ಅಲ್ಲಿನ ಹುತ್ತಕ್ಕೆ ಹಾಲೆರೆಯುತ್ತಾರೆ.

ಮದ್ಯಾಹ್ನ ನಡೆದ ಬ್ರಹ್ಮ ರಥೋತ್ಸವಕ್ಕೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಚಾಲನೆ ನೀಡಿದರು. ಸಹಸ್ರಾರು ಭಕ್ತರು ರಥ ಎಳೆದರು.

ಮುಂಜಾನೆಯಿಂದ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರು, ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ ದರ್ಶನ ಪಡೆದು ಹರಕೆ ತೀರಿಸಿಕೊಂಡು ಹುತ್ತಕ್ಕೆ ಹಾಲೆರೆದರು.

ಬ್ರಹ್ಮ ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಪನ್ನೀರು ಪತ್ರೆ, ಬಾಳೆಹಣ್ಣು ಎಸೆದು ದೇವರ ಕೃಪೆಗೆ ಪಾತ್ರರಾದರು.

ಜಾತ್ರೆಗೆ ಬಂದ ಭಕ್ತಾದಿಗಳಿಗೆ ಉಪಹಾರ, ಪಾನಕ, ಮಜ್ಜಿಗೆ ಮತ್ತು ಕೋಸಂಬರಿಯನ್ನು ಹೊನ್ನೇನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಏರ್ಪಡಿಸಿದ್ದರು.

ಯಾವುದೇ ಕಳ್ಳತನ ಪ್ರಕರಣಗಳು ನಡೆಯದಂತೆ ಗ್ರಾಮಾಂತರ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕ್ಷಣಕ್ಷಣಕ್ಕೆ ಧ್ವನಿವರ್ಧಕಗಳ ಮುಖಾಂತರ ಮಾಹಿತಿ ಕೊಡುತ್ತಿದ್ದರು.

ಕುಕ್ಕೆ ಸುಬ್ರಮಣ್ಯ, ಘಾಟಿ ಸುಬ್ರಮಣ್ಯ ದೇವಾಲಯಗಳಲ್ಲಿ ಬ್ರಹ್ಮ ರಥೋತ್ಸವ ಕಾರ್ಯಕ್ರಮಗಳು ನಡೆದ ನಂತರ ಪ್ರತಿ ವರ್ಷ ಮಾಘ ಮಾಸದಲ್ಲಿ ಷಷ್ಟಿ ಪ್ರಯುಕ್ತ ನಡೆಯುವ ಚಿತ್ರಾವತಿ ಜಾತ್ರೆಯು ವಿಶೇಷತೆಯನ್ನು ಪಡೆದುಕೊಂಡಿದೆ.

ಜಾತ್ರೆ ಇನ್ನೂ ಒಂದು ವಾರ ಇದೆ ಎನ್ನುವಾಗ ದನಗಳ ಸಂತೆಯೂ ನಡೆಯುತ್ತದೆ. ಇದರಲ್ಲಿ ರಾಜ್ಯ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಸೇರಿದಂತೆ ವಿವಿಧೆಡೆಯಿಂದ ರೈತರು ಭಾಗವಹಿಸುತ್ತಿದ್ದರು.

ಸಂತೆಯಲ್ಲಿ ತಾವು ಚೆನ್ನಾಗಿ ಸಾಕಿದ ದನಗಳನ್ನು ಮಾರಾಟ ಮಾಡಿ ಆರ್ಥಿಕ ಲಾಭವನ್ನು ಪಡೆಯುತ್ತಿದ್ದರು. ಆದರೆ ಈ ಬಾರಿ ದನಗಳ ಜಾತ್ರೆಗೆ ಬಾರದಿರುವುದು ಸ್ವಲ್ಪ ಮಟ್ಟಿಗೆ ಜಾತ್ರೆಯ ಮೇಲೆ ಪ್ರಭಾವ ಬೀರಿದೆ.

ನೂರಾರು ವರ್ಷಗಳಿಂದ ಅದ್ಧೂರಿಯಾಗಿ ನಡೆಯುತ್ತಾ ಬಂದಿರುವ ಚಿತ್ರಾವತಿ ಜಾತ್ರಾ ಮಹೋತ್ಸವಕ್ಕೆ ಜಾನುವಾರುಗಳೇ ಪ್ರಮುಖ ಆಕರ್ಷಣೆ.

ವ್ಯತಿರಿಕ್ತ ಪ್ರಭಾವ

ಚಿತ್ರಾವತಿ ಜಾತ್ರೆ ಜಾನುವಾರುಗಳ (ದನಗಳ) ಜಾತ್ರೆಯಂದೇ ಹೆಸರುವಾಸಿಯಾಗಿತ್ತು. ರಾಜ್ಯ, ಹೊರರಾಜ್ಯಗಳಿಂದ ಲಕ್ಷಾಂತರ ಬೆಲೆಬಾಳುವ ಜಾನುವಾರುಗಳು ಜಾತ್ರೆಯಲ್ಲಿ ಸೇರುತ್ತಿದ್ದರಿಂದ ವ್ಯಾಪಾರ ಭರದಿಂದ ಸಾಗುತ್ತಿತ್ತು.

ಜಾನುವಾರುಗಳನ್ನು ಮಾರುವವರು, ಕೊಳ್ಳುವವರು ಸ್ಥಳೀಯ ಸಾರ್ವಜನಿಕರಿಂದ ಜಾತ್ರೆ ತುಂಬಿ ತುಳುಕುತ್ತಿತ್ತು. ಆದರೆ ಈ ಬಾರಿ ದನಗಳ ಜಾತ್ರೆಗೆ ಜಾನುವಾರುಗಳು ಭಾರದಿರುವುದು ಜಾತ್ರಾ ಮಹೋತ್ಸವದ ಮೇಲೆ ವ್ಯತಿರಿಕ್ತ ಪ್ರಭಾವ ಬೀರಿದೆ.

ಪ್ರತೀ ವರ್ಷ ಜಾತ್ರೆಯಲ್ಲಿ ಸೇರುವ ಜಾನುವಾರುಗಳಿಗೆ ತಾಲೂಕು ಆಡಳಿತದಿಂದಲೇ ಮೇವು, ನೀರಿನ ವ್ಯಸವ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿಯ ಚಿತ್ರಾವತಿ ಜಾತ್ರೆಗೆ ಜಾನುವಾರುಗಳನ್ನು ರೈತರು ತರಲೇ ಇಲ್ಲಾ.

ರಾಸುಗಳ ವ್ಯಾಪಾರ ಸೇರಿದಂತೆ ಜಾತ್ರೆಯಲ್ಲಿ ತಲೆ ಎತ್ತುತ್ತಿದ್ದ ಸಾಲು ಸಾಲು ಸಿಹಿ ತಿನಿಸುಗಳ, ತಂಪುಪಾನೀಯಗಳು, ಮಕ್ಕಳ ಆಟಿಕೆ, ಮನರಂಜನಾ ಆಟಗಳು ಸೇರಿದಂತೆ ಲಕ್ಷಾಂತರ ರೂಪಾಯಿಗಳ ವ್ಯಾಪಾರ ವಹಿವಾಟಾಗುತಿತ್ತು. ಜಾತ್ರೆಗೆ ಒಂದು ವಾರದ ಮುಂಚೆಯಿಂದಲೇ ನೂರಾರು ಅಂಗಡಿಗಳು ಬಂದು ಸೇರುತ್ತಿದ್ದವು.

ಈ ಬಾರಿ ದನಗಳ ಜಾತ್ರಗೆ ಜಾನುವಾರುಗಳು ಬಾರದಿರುವುದರಿಂದ ವ್ಯಾಪಾರ ವಹಿವಾಟುಗೂ ತೀವ್ರ ಪೆಟ್ಟಾಗಿದ್ದು, ವ್ಯಾಪಾರಸ್ಥರಿಗೆ ಬಂದ ದಾರಿಗೆ ಸುಂಕವಿಲ್ಲದಂತಾಗಿದೆ.

ತಾಲೂಕು ಆಡಳಿತ ರಥೋತ್ಸವಕ್ಕೆ ಭರದ ಸಿದ್ಧತೆ ನಡೆಸಿ ಕೊಂಡಿದ್ದು, ಕಲ್ಯಾಣಿ ಹಾಗೂ ಜಾತ್ರಾ ಸ್ಥಳದ ಸ್ವಚ್ಛತೆ, ದೇವಾಲಯಗಳಿಗೆ ಸುಣ್ಣ, ಬಣ್ಣ, ಪೂಜೆ ಪುನಸ್ಕಾರಗಳು, ರಥ ನಿರ್ವಹಣೆ, ಭಾಗವಹಿಸುವ ಜನರಿಗೆ ಭದ್ರತೆ, ಕುಡಿವ ನೀರಿನ ವ್ಯವಸ್ಥೆ ಸೇರಿದಂತೆ ನಾನಾ ರೀತಿಯಲ್ಲಿ ಸಿದ್ಧತೆಗಳು ಮಾಡಿ ಕೊಂಡಿತ್ತು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!