Doddaballapura: Regulate Unlicensed Traders - Traders Association

Doddaballapura: ಲೈಸೆನ್ಸ್ ಪಡೆಯದೆ ವ್ಯಾಪಾರ ಮಾಡುವವರ ನಿಯಂತ್ರಿಸಿ – ವ್ಯಾಪಾರಿಗಳ ಸಂಘ

ದೊಡ್ಡಬಳ್ಳಾಪುರ (Doddaballapura): ನಿನ್ನೆ ಪಿಯು ಕಾಲೇಜು ಮುಂದೆ ನಡೆದ ವ್ಯಾಪಾರಿಗಳು ಹಾಗೂ ರೈತರ ನಡುವಿನ ಮಾತಿ‌ನ ಚಕಮಕಿ ತೀವ್ರ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ.

ರೈತರ ವ್ಯಾಪಾರಕ್ಕೆ ಅಡ್ಡಿ ಮಾಡಬೇಡಿ ಎಂದು ಪೊಲೀಸರ ಸೂಚನೆ ಬೆನ್ನಲ್ಲೇ, ಲೈಸೆನ್ಸ್ ಪಡೆಯದೆ ನಗರದಲ್ಲಿ ವ್ಯಾಪಾರ ನಡೆಸುತ್ತಿರುವುದನ್ನು ತಡೆಯುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಪತ್ರ ನೀಡಿದ್ದಾರೆ.

ಈ ಪತ್ರದ ಅನ್ವಯ ಕಳೆದ 30 ರಿಂದ 40 ವರ್ಷಗಳಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಳೆಚಳಿ ಧೂಳು ಬಿಸಿಲಿನಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ, ಹಣ್ಣು, ಹಂಪಲುಗಳ ವ್ಯಾಪಾರ ಮಾಡಿಕೊಂಡು ಇದನ್ನೇ ನಂಬಿ ಬದುಕು ಕಟ್ಟಿಕೊಂಡು, ಈ ವ್ಯಾಪಾರ ಬಿಟ್ಟರೆ ಬೇರೆ ಕಸಬು ತಿಳಿಯದೆ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದೇವೆ.

ಈ ಹಿಂದೆ ಸಾಕಷ್ಟು ಬಾರಿ ನಗರಸಭೆಗೆ ನಮ್ಮ ಸಮಸ್ಯೆಗಳನ್ನು ಬಗೆ ಹರಿಸಲು ಒತ್ತಾಯಿಸಿ ನೂರಾರು ಬೀದಿಬದಿ ವ್ಯಾಪಾರಸ್ಥರನ್ನು ನಗರಸಭೆ ಮುಂದೆ ಸೇರಿಸಿ ಪ್ರತಿಭಟನೆ ನಡೆಸಿ ಮನವಿಯನ್ನು ಸಹಸಲ್ಲಿಸಲಾಗಿದೆ‌. ಆದರೆ ಇಲ್ಲಿಯತನಕ ನಮ್ಮಬಬೇಡಿಕೆಗಳು ಈಡೇರಿಸಿಲ್ಲ ಅದನ್ನು ಗಮನಿಸಬೇಕು.

ನಾವು ವರ್ಷಾ ಪೂರ್ತಿ ತುಂಬಾ ಕಷ್ಟ ಬಿದ್ದು ವ್ಯಾಪಾರವಹಿವಾಟು ನಡೆಸುತ್ತಿರುತ್ತೇವೆ. ಆದರೆ ಕೆಲವರು ಹೊರಗಿನಿಂದ ಬಂದು ಸೀಸನ್ನಲ್ಲಿ ವ್ಯಾಪಾರ ಮಾಡಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆ.

ನಗರಸಭೆಯಿಂದ ಗುರುತಿನ ಚೀಟಿಯನ್ನು ಪಡೆಯದೆ ನಿಯಮಾನುಸರ ವ್ಯಾಪಾರ ಮಾಡುತ್ತಿರುವವರಿಗೆ ತುಂಬಾ ಕಷ್ಟನಷ್ಟ ಆಗುತ್ತಿದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳು ಸೂಕ್ತಕ್ರಮ ಜರುಗಿಸುವುದರೊಂದಿಗೆ ನಿಯಂತ್ರಣ ಮಾಡಬೇಕಾಗಿದೆ.

ವಿಷಾದ ವ್ಯಕ್ತಪಡಿಸಿದ ಸಿಐಟಿಯು

ನಿನ್ನೆ ವ್ಯಾಪಾರಿಗಳ ನಡುವೆ ನಡೆದ ಮಾತಿನ ಚಕಮುಖಿಯನ್ನು ಬೀದಿಬದಿ ವ್ಯಾಪಾರಿಗಳ ಸಂಘ(ಸಿಐಟಿಯು) ಗಮನಿಸಿದೆ ಇದಕ್ಕೆ ವಿಷಾದ ವ್ಯಕ್ತಪಡಿಸುತ್ತಿದೆ.

ನಾವು ರೈತರು ಬೆಳೆದ ಪದಾರ್ಥಗಳನ್ನು ತಂದು ವ್ಯಾಪಾರ ನಡೆಸುವವರು ನಮಗೂ ಮತ್ತು ರೈತರ ನಡುವೆ ಸೌಹಾರ್ದ ಸಂಬಂಧವಿದೆ, ರೈತರು ಬೆಳೆದ ಪದಾರ್ಥಗಳನ್ನು ವ್ಯಾಪಾರ ಮಾಡಲು ನಮ್ಮ ವಿರೋಧವಿಲ್ಲ ಆದರೆ ನಿಯಮಾನುಸಾರ ಮಾಡಬೇಕಷ್ಟೆ.

ಸರಿಯಾಗಿ ಬಿಸಿನೆಸ್ ಇಲ್ಲದೆ ಜೀವನ ನಡೆಸಲು ಕಷ್ಟವಾದಾಗ ವ್ಯಾಪಾರಸ್ಥರ ನಡುವೆ ಜಗಳ ನಡೆಯುತ್ತಿರುತ್ತದೆ. ಆದರೆ ದೊಡ್ಡದೊಡ್ಡ ಮಾಲ್ಗಳು ಬಂದು ವ್ಯಾಪಾರಸ್ಥರನ್ನು ನುಂಗಿ ಕುಳಿತಿವೆ. ಈ ನೀತಿಯ ವಿರುದ್ಧ ನಮ್ಮ ಹೋರಾಟ ನಡೆಸಬೇಕಾಗಿದೆ.

ಆದ್ದರಿಂದ ತಾವುಗಳು ನಮ್ಮ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಈ ಮೂಲಕ ಮನವಿ ಸಲ್ಲಿಸುತ್ತೇವೆ ಎಂದಿದೆ.

ಬೇಡಿಕೆಗಳು

  • ಎಲ್ಲಾ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ನೀಡಬೇಕು.
  • ನಗರದಲ್ಲಿ ಅಗತ್ಯವಿರುವ ಕಡೆವ್ಯಾಪಾರಿ ವಲಯ ಸ್ಥಾಪಿಸಬೇಕು. (ಸ್ಟ್ರೀಟ್ವೆಂಡರ್ಸ್ಜೋನ್)
  • ಪರ್ಯಾಯ ವ್ಯವಸ್ಥೆ ಮಾಡದೆ ಬೀದಿಬದಿ’ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.
  • ಅನಗತ್ಯ ಪೊಲೀಸರ ಕಿರುಕುಳ ನಿಲ್ಲಬೇಕು.
  • ವಸತಿ ಯೋಜನೆಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು.
  • ಉಚಿತ ಆರೋಗ್ಯ ಮತ್ತು ಶಿಕ್ಷಣ ನೀಡಬೇಕು. ಎಲ್ಲರಿಗೂ ಬಿ.ಪಿ.ಎಲ್ ಕಾರ್ಡ್ ನೀಡಬೇಕು.
  • ಕಟ್ಟಡ ಕಾರ್ಮಿಕರಿಗೆ ಸಿಗುತ್ತಿರುವ ರೀತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಎಲ್ಲ ರೀತಿಯ ಸೌಲಭ್ಯಗಳು ಸಿಗಬೇಕು.
  • ಶ್ರೀಸಿದ್ಧಲಿಂಗಯ್ಯ ವೃತ್ತದಲ್ಲಿ ಮತ್ತು ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಆಳವಡಿಸಲು ಮನವಿ.
  • ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಣೆ ಮಾಡಲು ಕಾನೂನು ಬದ್ಧವಾಗಿ ರಚಿಸಲ್ಪಟ್ಟಿರುವ ನಮ್ಮ ಸಂಘದೊಂದಿಗೆ ವ್ಯವಹರಿಸಲು ನಗರಸಭಾ ಆಡಳಿತ ಮತ್ತು ತಾಲ್ಲೂಕು ಆಡಳಿತ ಸೂಕ್ತ ಕ್ರಮವನ್ನು ಜರುಗಿಸಬೇಕು.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!