ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

Na.Ra.Lokesh met H.D. Kumaraswamy

ನವದೆಹಲಿ: ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ (Na.Ra.Lokesha) ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (HD Deve Gowda) ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ ಅವರು ಬಹುಮುಖ್ಯವಾಗಿ ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆ ಹಾಗೂ ಭವಿಷ್ಯದಲ್ಲಿ ಕಾರ್ಖಾನೆಯನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂಬ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಮಾಡಿದ್ದು, ಅದರಂತೆ ನಾವು ಉಕ್ಕು ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಬೇಕಿದೆ.

ಅದರಲ್ಲಿಯೂ ಪರಿಸರ ಪೂರಕವಾದ ಗ್ರೀನ್ ಸ್ಟೀಲ್, ಸ್ಪೆಶಾಲಿಟಿ ಸ್ಟೀಲ್ ತಯಾರಿಕೆಯಲ್ಲಿ ಭಾರತ ಮುಂಚೂಣಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ವೈಜಾಗ್ ಸ್ಟೀಲ್ ಗೆ ಶಕ್ತಿ ತುಂಬಲು ಕೇಂದ್ರ ಸರಕಾರ ನಿರ್ಧರಿಸಿತು ಎಂದು ಲೋಕೇಶ್ ಅವರಿಗೆ ಸಚಿವರು ಹೇಳಿದರು.

ಪ್ಯಾಕೇಜ್ ಪರಿಣಾಮಕಾರಿ ಬಳಕೆ ಹಾಗೂ ನಿಗದಿತ ಗುರಿಯಂತೆ ಕಾರ್ಖಾನೆಯ ಮೂರು ಬ್ಲಾಸ್ಟ್ ಫರ್ ನೆಸ್ (ಊದು ಕುಲುಮೆ)ಗಳ ಮೂಲಕ ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ತಯಾರು ಮಾಡುವುದು ಕೇಂದ್ರದ ಗುರಿಯಾಗಿದೆ.

ಈ ಗುರಿ ಸಾಧನೆಗೆ ಆಂಧ್ರ ಪ್ರದೇಶದ ಸರಕಾರ ಹಾಗೂ ಕಾರ್ಮಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದು ಸಚಿವರು ಲೋಕೇಶ್ ಅವರಲ್ಲಿ ಒತ್ತಿ ಹೇಳಿದರು.

ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕೇಶ್ ಅವರು ಕೇಂದ್ರ ಸಚಿವರಿಗೆ ಭರವಸೆ ನೀಡಿದರು.

ಕಾರ್ಖಾನೆಯ ಪುನಶ್ಚೇತನ ವಿಷಯದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೋರಿದ ಬದ್ಧತೆಯ ಶ್ಲಾಘಿಸಿದ ಕೇಂದ್ರ ಸಚಿವರು, ತಮ್ಮ ಸಚಿವಾಲಯಗಳ ವತಿಯಿಂದ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಲೋಕೇಶ್ ಅವರಿಗೆ ಹೇಳಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರು ಹಾಗೂ ಲೋಕೇಶ್ ಅವರು ಸಮಾಲೋಚನೆ ನಡೆಸಿದರು. ತದ ನಂತರ ಮಾಜಿ ಪ್ರಧಾನಿ ದೇವೇಗೌಡರ ಜತೆಯಲ್ಲಿ ಎಲ್ಲರೂ ಮಧ್ಯಾಹ್ನದ ಭೋಜನ ಸ್ವೀಕರಿಸಿದರು. ಲೋಕೇಶ್, ರಾಮ್ ಮೋಹನ್ ನಾಯ್ಡು ಸೇರಿದಂತೆ ಎಲ್ಲ ಸಂಸದರನ್ನು ಮಾಜಿ ಪ್ರಧಾನಿಗಳು ಹಾಗೂ ಸಚಿವರು ಆತ್ಮೀಯವಾಗಿ ಸತ್ಕರಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ. ಸಿ.ಎನ್.ಮಂಜುನಾಥ್, ಕೋಲಾರ ಸಂಸದ ಮಲ್ಲೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]