India's insulted by Modi's ally Trump Govt

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra modi) ಮಿತ್ರ ಡೊನಾಲ್ಡ್ ಟ್ರಂಪ್ (Donald Trump) ಅಮೇರಿಕಾ ಅಧ್ಯಕ್ಷರಾದ ಬಳಿಕ ಕೈಗೊಳ್ಳುತ್ತಿರುವ ನಿರ್ಧಾರದಿಂದಾಗಿ ಭಾರತದ ಆರ್ಥಿಕ ಸ್ಥಿತಿ ಹಾಗೂ ಅಮೇರಿಕಾದಲ್ಲಿ ನೆಲೆಸಿರುವ ಭಾರತೀಯರ ಮೇಲೆ ಪರಿಣಾಮ ಭೀರಿದೆ.

ಅಕ್ರಮ ವಲಸಿಗರು ಎಂಬ ಕಾರಣ ನೀಡಿ ಅಮೆರಿಕ ಬುಧವಾರ 104 ಅಕ್ರಮ ಭಾರತೀಯ ವಲಸಿಗರನ್ನು ಗಡಿಪಾರು ಮಾಡಿದೆ. ಆದರೆ ಅವರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿ ದೇಶದಿಂದ ಹೊರದಬ್ಬಿರುವುದು ಜಾಗತಿಕವಾಗಿ ಚರ್ಚೆಗೆ ಗ್ರಾಸವಾಗಿದೆ.

ಇದು ಭಾರತೀಯರ ಕೆಂಗಣ್ಣಿಗೂ ಕಾರಣವಾಗಿದೆ. ಇದರ ನಡುವೆಯೇ ಅಮೆರಿಕ ಗಡಿಪಾರು ಮಾಡುತ್ತಿರುವ ವಿಡಿಯೊವನ್ನು ಅಲ್ಲಿನ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ.

ಈ ವಿಡಿಯೋ ಭಾರತೀಯರನ್ನು ಕೆರಳಿಸುವಂತೆ ಮಾಡಿದೆ. ಅವರೆಲ್ಲರನ್ನು ವಿಮಾನಗಳ ಮೂಲಕ ಭಾರತಕ್ಕೆ ಗಡಿಪಾರು ಮಾಡಲಾಗಿದೆ.

ಅಮೆರಿಕದಿಂದ ಹೀಗೆ ಗಡೀಪಾರಾಗಿ ಭಾರತದಕ್ಕೆ ಬಂದಿಳಿದ 104 ಭಾರತೀಯರ ಕೈ ಮತ್ತು ಕಾಲಿಗೆ ಬೇಡಿ ಹಾಕಿ ಕೈದಿಗಳ ರೀತಿ ಕರೆತಂದಿದ್ದನ್ನು ಖಂಡಿಸಿ ರಾಜ್ಯಸಭೆಯಲ್ಲಿ ವಿರೋಧಪಕ್ಷಗಳು ಗುರುವಾರ ಭಾರೀ ಪ್ರತಿಭಟನೆ ನಡೆಸಿವೆ.

ಈ ಬಗ್ಗೆ ಅಮೇರಿಕಾದ ವಿರುದ್ಧ ಆಕ್ಷೇಪ ಸಲ್ಲಿಸಬೇಕಾದ ಕೇಂದ್ರದ ಮೋದಿ ಸರ್ಕಾರ ಇದೇನ್ ಹೊಸತಲ್ಲ ಎಂಬಂತೆ ಸಮರ್ಥನೆಗಿಳಿದಿರುವುದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.

ವಿರೋಧ ಪಕ್ಷಗಳ ಈ ಪ್ರತಿಭಟನೆಗೆ ಉತ್ತರದ ರೂಪದಲ್ಲಿ ಈ ಮಾಹಿತಿ ನೀಡಿರುವ ರಾಜ್ಯಸಭೆಗೆ ವಿದೇಶಾಂಗ ಸಚಿವ ಜೈ ಶಂಕರ್, ಈ ಬೆಳವಣಿಗೆ ಇದೇ ಮೊದಲಲ್ಲ. ಕಳೆದ ಹಲವು ವರ್ಷಗಳಿಂದ ಗಡೀಪಾರು ಪ್ರಕ್ರಿಯೆ ನಡೆಯುತ್ತಲೇ ಇದೆ ಎಂದು ಸಮರ್ಥನೆಗಿಳಿದಿದ್ದಾರೆ.

ಇನ್ನು ಈ ಹಿಂದಿನ ಯಾವ ಯಾವ ವರ್ಷಗಳಲ್ಲಿ ಎಷ್ಟೆಷ್ಟು ಭಾರತೀಯರು ಗಡಿಪಾರಾಗಿದ್ದಾರೆ ಎಂದು ಅಂಕಿ-ಅಂಶಗಳನ್ನು ಕೂಡ ರಾಜ್ಯಸಭೆಯ ಮುಂದಿಟ್ಟಿದ್ದಾರೆ.

ಈ ಪ್ರಕಾರ ಕಳೆದ 2009 ರಿಂದ ಇಲ್ಲಿಯ ತನಕ 15 ಸಾವಿರಕ್ಕೂ ಅಧಿಕ ಭಾರತೀಯರು ಅಮೆರಿಕಾದಿಂದ ಗಡೀಪಾರಾಗಿದ್ದಾರೆ.

ಈ ವೇಳೆ ಅಕ್ರಮ ವಲಸಿಗರಿಗೆ ಅವರ ಕಾನೂನು ಪಾಲನೆಯಲ್ಲಿ ಕೋಳ ತೊಡಿಸುವುದು ಸೇರಿದೆ. ಆದರೆ ಮಹಿಳೆ ಮತ್ತು ಮಕ್ಕಳಿಗೆ ಬೇಡಿ ತೊಡಿಸದಂತೆ ಅಲ್ಲಿನ ಪ್ರಾಧಿಕಾರಕ್ಕೆ ತಿಳಿಸಲಾಗಿದೆ ಎಂದಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!