Justice for the victims of micro-finance: R. Ashoka Agraha

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಆಗ್ರಹಿಸಿದರು.

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ (R Ashoka) ಭೇಟಿ ನೀಡಿ ಸಾಂತ್ವನ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.

ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರಿಗೆ ಕಣ್ಣಿಲ್ಲ.

ಕೊನ್ನಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ, ನವಚೇತನ, ಸೂರ್ಯೋದಯ, ಯುನಿಟಿ, ಪ್ರಗತಿ ಸೇರಿದಂತೆ 24 ಮೈಕ್ರೋ ಫೈನಾನ್ಸ್‌ಗಳು ಈ ಹಳ್ಳಿಗೆ ಬಂದು ವರ್ಷಕ್ಕೆ 12% ರಂತೆ ಸಾಲ ನೀಡಿವೆ. ಒಬ್ಬರಿಗೆ ಒಂಬತ್ತು ಜನರು ಶೂರಿಟಿ ನೀಡಿದ್ದಾರೆ.

ಒಬ್ಬರು ಸಾಲ ಮರುಪಾವತಿ ಮಾಡಿಲ್ಲವೆಂದರೆ ಉಳಿದವರು ಹೊಣೆಯಾಗುತ್ತಾರೆ. ಸಾಲ ಕಟ್ಟದೆ ಮಾನ ಹೋದಾಗ ನೊಂದವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಪೊಲೀಸರು ಕೂಡ ಇಲ್ಲಿ ಮೈಕ್ರೋ ಫೈನಾನ್ಸ್‌ಗೆಬೆಂಬಲ ನೀಡಿದ್ದಾರೆ. ಮನೆ ವಶಕ್ಕೆ ಪಡೆಯುವ ಸಮಯದಲ್ಲಿ ಪೊಲೀಸರು ಕುಟುಂಬ ಸದಸ್ಯರನ್ನು ಎಳೆದು ಹೊರಗೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ 60 ಮೈಕ್ರೋ ಫೈನಾನ್ಸ್‌ಗಳಿದ್ದು, ಕೇವಲ 18 ಮಾತ್ರ ಅಧಿಕೃತವಾಗಿವೆ. ಉಳಿದವುಗಳಲ್ಲಿ ರೌಡಿಗಳಿದ್ದಾರೆ. ತಹಶೀಲ್ದಾರ್‌ ಹಾಗೂ ಪೊಲೀಸರು ಎಲ್ಲ ಹಳ್ಳಿಗೂ ಹೋಗಿ ಕ್ರಮ ಕೈಗೊಳ್ಳಬೇಕಿತ್ತು.

ಈ ಸಾವುಗಳಿಗೆ ನ್ಯಾಯ ನೀಡಲು ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಬೇಕು. ಅನಧಿಕೃತ ಮೈಕ್ರೋ ಫೈನಾನ್ಸ್‌ಗಳನ್ನು ಪತ್ತೆ ಮಾಡಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಕಾಂಗ್ರೆಸ್ ನ ತುಷ್ಟೀಕರಣ ರಾಜಕೀಯವನ್ನ ಖಂಡಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ನ ತುಷ್ಟೀಕರಣ ರಾಜಕೀಯವನ್ನ ಖಂಡಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆಗಳಲ್ಲಿ ವರದಿಯಾಗಿರುವ ಸುದ್ದಿಗಳು ಸತ್ಯಕ್ಕೆ

[ccc_my_favorite_select_button post_id="104510"]
3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ (lakshmi hebbalkar) ಅವರು ಸಾಮೂಹಿಕವಾಗಿ 3 ಸಾವಿರ ಗರ್ಭಿಣಿಯರಿಗೆ (ಉಡಿ ತುಂಬುವ

[ccc_my_favorite_select_button post_id="104529"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಮಾ.14 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯೋರ್ವ ಶವದ ಕುರಿತು ತನಿಖೆ ನಡೆಸುತ್ತಿರುವ ತಾಲೂಕಿನ ಹೊಸಹಳ್ಳಿ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು 40 ವರ್ಷದ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಬಂಧಿತನ ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬ

[ccc_my_favorite_select_button post_id="104504"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!