Increase in milk price; R. Ashoka said that BJP will fight

ಮುಡಾ ಹಗರಣ.. ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಹೇಳಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ.

ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ.

ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ.

ಬೆಳಗಾವಿಯಲ್ಲಿ ಅಷ್ಟು ದೊಡ್ಡ ಅಧಿವೇಶನ ಮಾಡಲು ದುಡ್ಡು ಎಲ್ಲಿಂದ ಬಂತು? ಬ್ಯಾನರ್‌, ಬಸ್‌, ಊಟಕ್ಕೆ ದುಡ್ಡು ಎಲ್ಲಿಂದ? 60 ಪರ್ಸೆಂಟ್ ಕಮಿಷನ್ ಪಡೆದಿರುವುದನ್ನು ಸರ್ಕಾರ ಅಧಿವೇಶನಕ್ಕೆ ಬಳಕೆ ಮಾಡಿದೆ. ಆರು ತಿಂಗಳಿಗೊಮ್ಮೆ ಬಜೆಟ್ ಮಾಡಿ ಮತ್ತೆ ಬೆಲೆ ಏರಿಕೆ ಮಾಡುತ್ತಾರೆ ಎಂದು ದೂರಿದರು.

ಬಿಜೆಪಿ ಅವಧಿಯಲ್ಲಿ 25 ಸಾವಿರ ಕೋಟಿಯಷ್ಟು ಸಾಲ ಪಡೆಯಲು ಅವಕಾಶ ಇದ್ದರೂ ಜನರ ಮೇಲೆ ಹೊರೆ ಬರಬಾರದು ಎಂದು ಸಾಲ ತೆಗೆದುಕೊಂಡಿಲ್ಲ. ಆದರೆ ಇವರು ಸಾಲಗಾರರ ರಾಜ್ಯ ಮಾಡಲು ಹೊರಟಿದ್ದಾರೆ. ಹೀಗೆ ಮಾಡಿದರೆ ಕೇರಳದಂತೆ ಭಿಕ್ಷೆ ಬೇಡುವ ಸ್ಥಿತಿ ರಾಜ್ಯಕ್ಕೆ ಬರಲಿದೆ.

ಸಿಎಂ ಸಿದ್ದರಾಮಯ್ಯ ನವೆಂಬರ್‌ನಲ್ಲಿ ಸಿಎಂ ಸ್ಥಾನ ಬಿಡಬೇಕಾಗಬಹುದು. ಹಾಗಾಗಿ ಅವರಿಗೂ ಆಸಕ್ತಿ ಇಲ್ಲ. ಆಡಳಿತ ಪಕ್ಷ ಅಧ್ವಾನವಾದರೆ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ಪಕ್ಷದ ಆಂತರಿಕ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡಬೇಕು. ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಿದರೆ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದಾಗಿತ್ತು.

ಹದಿನೈದು-ಇಪ್ಪತ್ತು ದಿನಗಳಲ್ಲಿ ಇದಕ್ಕೆ ಅಂತಿಮ ತೀರ್ಮಾನವನ್ನು ಕೇಂದ್ರದ ನಾಯಕರು ಕೊಡುತ್ತಾರೆ. ಒಟ್ಟಾಗಿ ಹೋಗಬೇಕು ಎನ್ನುವುದು ನನ್ನ ಅಭಿಪ್ರಾಯ.

ಕೆಲವು ಸಲ ಪ್ರಜಾಪ್ರಭುತ್ವದ ಮಾತಿನ ಸ್ವಾತಂತ್ರ್ಯದಲ್ಲಿ ಎಲ್ಲರೂ ಮಾತಾಡಲು ಶುರು ಮಾಡುತ್ತಾರೆ. ಪ್ರಾರಂಭದಲ್ಲೇ ಇದು ಕಡಿಮೆ ಆಗಿರುತ್ತಿದ್ದರೆ ಒಳ್ಳೆಯದಿತ್ತು. ಸರಿ ಪಡಿಸಿಕೊಂಡು ಹೋಗುವುದೇ ದೊಡ್ಡ ಗುಣ ಎಂದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!