Aero India 2025: Airshow starts today

Aero India 2025: ಏರ್‌ಶೋಗೆ ಇಂದು ಚಾಲನೆ.. ಟಿಕೆಟ್ ಪಡೆಯುವ ಲಿಂಕ್ ಇಲ್ಲಿದೆ

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ (Aero India 2025) ಸಕಲ ಸಿದ್ದತೆ ನಡೆದಿದ್ದು, ಸೋಮವಾರ ಬೆಳಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಉದ್ಘಾಟನೆಯಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಸಿಗಲಿದೆ.

ಸುಮಾರು ನೂರು ದೇಶಗಳ ಪ್ರತಿನಿಧಿಗಳು, ಅಮೆರಿಕ, ರಷ್ಯಾ, ಐರೋಪ್ಯ ರಾಷ್ಟ್ರಗಳ ಅತ್ಯಾಧುನಿಕ ಯುದ್ಧ ವಿಮಾನಗಳಿಂದ ಪ್ರದರ್ಶನ ಹಾಗೂ ಭಾರತದ ವಾಯುಪಡೆಯ ಬಲಪ್ರದರ್ಶನಕ್ಕೆ (Aero India 2025) ವೇದಿಕೆ ಸಜ್ಜಾಗಿದೆ.

ಒಂದೆಡೆ ಸೋಮವಾರದಿಂದ ಲೋಹದ ಹಕ್ಕಿಗಳ ಕಲರವ, ಇನ್ನೊಂದೆಡೆ ರಾಜ್ಯಕ್ಕೆ ಕೈಗಾರಿಕೋದ್ಯಮಿ ಗಳನ್ನು ಸೆಳೆಯುವ ನಿಟ್ಟಿನಲ್ಲಿ ಮಂಗಳವಾರದಿಂದ ಹೂಡಿಕೆದಾರರ ಸಮ್ಮೇಳನ. ಈ ಎರಡೂ ಸಮಾವೇಶಗಳು ಜತೆಜತೆಗೆ ನಡೆಯುತ್ತಿರುವುದು ಕರ್ನಾಟಕದ ಪಾಲಿಗೆ ‘ಲಾಭ’ವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಐದು ದಿನಗಳ ಕಾಲ ನಡೆಯುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನಿರೀಕ್ಷೆಗಳನ್ನು ಹುಟ್ಟಿಸಿದೆ. ಬೃಹತ್ ಅಂತಾರಾಷ್ಟ್ರೀಯ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದ್ದು, ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ.

ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ ಮಾಡಲು ತುದಿಗಾಲಲ್ಲಿ ನಿಂತಿವೆ. ಈಗಾಗಲೇ 700ಕ್ಕೂ ಪ್ರದರ್ಶಕರು ನೋಂದಣಿ ಮಾಡಿಕೊಂಡಿದ್ದು, ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಲು ತಯಾರಿ ನಡೆಯುತ್ತಿದೆ.

ಏ‌ರ್ ಶೋನಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪಾಲಿಕೆ, ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಟಿಕೆಟ್ ಪಡೆಯುವುದು ಹೇಗೆ?

ಏರೋ ಇಂಡಿಯಾ ಪ್ರದರ್ಶನದ ಮೊದಲ 3 ದಿನ ಎಕ್ಸಿಬಿಷನ್ ಹಾಗೂ ಮಳಿಗೆಗಳ ಭೇಟಿಗೆ ಸಾರ್ವಜನಿಕರಿಗೆ ಅವಕಾಶವಿಲ್ಲ. ಆದರೆ ವೈಮಾನಿಕ ಪ್ರದರ್ಶನದ ಭೇಟಿಗೆ ಅವಕಾಶ ನೀಡಲಾಗಿದೆ.

ವೈಮಾನಿಕ ಪ್ರದರ್ಶನದ ವೀಕ್ಷಣೆಗೆ ಒಂದು ಸಾವಿರ ರು. ನಿಗದಿಯಾಗಿದೆ. ಮಳಿಗೆಗಳ ಭೇಟಿಗೆ 2500 ರು. ಶುಲ್ಕ ನಿಗದಿಪಡಿಸಲಾಗಿದೆ. ಟಿಕೆಟ್ ಇಲ್ಲಿ ಲಭ್ಯವಿದೆ: www.aeroindia.gov.in

ರಾಜಕೀಯ

ಡಿಕೆ ಶಿವಕುಮಾರ್ ಹೇಳಿಕೆ ತಿರುಚಿದವರಿಗೆ ಕಾನೂನು ಸಂಕಷ್ಟ

ಡಿಕೆ ಶಿವಕುಮಾರ್ ಹೇಳಿಕೆ ತಿರುಚಿದವರಿಗೆ ಕಾನೂನು ಸಂಕಷ್ಟ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK

[ccc_my_favorite_select_button post_id="104534"]
3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ (lakshmi hebbalkar) ಅವರು ಸಾಮೂಹಿಕವಾಗಿ 3 ಸಾವಿರ ಗರ್ಭಿಣಿಯರಿಗೆ (ಉಡಿ ತುಂಬುವ

[ccc_my_favorite_select_button post_id="104529"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಮಾ.14 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯೋರ್ವ ಶವದ ಕುರಿತು ತನಿಖೆ ನಡೆಸುತ್ತಿರುವ ತಾಲೂಕಿನ ಹೊಸಹಳ್ಳಿ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು 40 ವರ್ಷದ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಬಂಧಿತನ ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬ

[ccc_my_favorite_select_button post_id="104504"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!