CBI arrests 4 in Tirupati laddu adulteration case

TirupatiLaddu ಕಲಬೆರಕೆ ಪ್ರಕರಣ.. ನಾಲ್ವರ ಬಂಧನ

ತಿರುಪತಿ: ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಸಿದ್ದ ದೇವಾಲಯವಾದ ತಿರುಮಲದ ವೆಂಕಟೇಶ್ವರ ಸ್ವಾಮಿಯ ಲಡ್ಡು (TirupatiLaddu) ಪ್ರಸಾದದಲ್ಲಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಪ್ಪ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ಸಿಬಿಐ ತನಿಖಾ ತಂಡ ಬಂಧಿಸಿದೆ.

ಬಂಧಿತ ವ್ಯಕ್ತಿಗಳಲ್ಲಿ ಎಆರ್ ಡೈರಿ (ತಮಿಳುನಾಡು) ಪರಾಗ್ ಡೈರಿ (ಉತ್ತರ ಪ್ರದೇಶ್, ಪ್ರೀಮಿಯರ್ ಅಗ್ರಿ ಫುಡ್ಸ್ ಮತ್ತು ಅಲ್ಪಾ ಮಿಲ್ಕ್ ಪುಡ್ ಸೇರಿದಂತೆ ತುಪ್ಪ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಬಳಕೆಯ ಆರೋಪದ ತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಐದು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿತು.

ಈ ತಂಡದಲ್ಲಿ ಕೇಂದ್ರ ಸಂಸ್ಥೆಯ ಇಬ್ಬರು ಅಧಿಕಾರಿಗಳು, ಆಂಧ್ರಪ್ರದೇಶ ಪೊಲೀಸರ ಇಬ್ಬರು ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಒಬ್ಬರು ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು.

TirupatiLaddu ಕಲಬೆರಕೆ ಪ್ರಕರಣ.. ನಾಲ್ವರ ಬಂಧನ

ಈ ಬಗ್ಗೆ ತನಿಖೆ ಮಾಡಿದ ಸಿಬಿಐ, ತುಪ್ಪ ಪೂರೈಕೆಯ ಸಮಯದಲ್ಲಿ ಹಲವಾರು ಉಲ್ಲಂಘನೆಗಳು ನಡೆದಿದೆ. ಅಲ್ಲದೇ ಪ್ರತಿ ಹಂತದಲ್ಲೂ ಅಕ್ರಮಗಳು ನಡೆದಿದೆ. ವೈಷ್ಣವಿ ಡೈರಿಯ ಪ್ರತಿನಿಧಿಗಳು ತುಪ್ಪ ಪೂರೈಕೆಗಾಗಿ ಎಆರ್ ಡೈರಿಯ ಹೆಸರಿನಲ್ಲಿ ಟೆಂಡರ್‌ಗಳನ್ನು ಪಡೆದುಕೊಂಡರು.

ವೈಷ್ಣವಿ ಡೈರಿ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ತಯಾರಿಸಿದೆ ಎಂದು ವರದಿ ಮಾಡಿದೆ.

ಭೋಲೆ ಬಾಬಾ ಡೈರಿಯಿಂದ ತುಪ್ಪವನ್ನು ಖರೀದಿಸಲಾಗಿದೆ ಎಂದು ವೈಷ್ಣವಿ ಡೈರಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ವರದಿಯ ಪ್ರಕಾರ, ಇಂದು ಆರೋಪಿಗಳನ್ನು ತಿರುಪತಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.

[ccc_my_favorite_select_button post_id="119569"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!