Do you know how many micro-finances there are in Bengaluru district?

ಬೆಂ.ಗ್ರಾ.ಜಿಲ್ಲೆಯಲ್ಲಿ ಎಷ್ಟು ಮೈಕ್ರೋ ಫೈನಾನ್ಸ್ ಗಳು ಗೊತ್ತಾ..? DC ಕೊಟ್ಟ ಖಡಕ್ ಸೂಚನೆ ಓದಿ

ಬೆಂ.ಗ್ರಾ.ಜಿಲ್ಲೆ: ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು ಜಿಲ್ಲಾಧಿಕಾರಿ (DC) ಎ.ಬಿ ಬಸವರಾಜು ಅವರು ಮೈಕ್ರೋ ಫೈನಾನ್ಸ್ ( micro finances) ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿಗೆ ಸಂಬಂಧಿಸಿದಂತೆ ಸುಖಾಸುಮ್ಮನೆ ಸಾಲಗಾರರ ಮೇಲೆ ಆಪಾದನೆ, ಕಿರುಕುಳ, ದೌರ್ಜನ್ಯ, ಬೈಗುಳ, ಬೆದರಿಕೆ, ಮನೆ ಸೀಜ್ ಮಾಡುವುದು, ಬಲವಂತವಾಗಿ ವಸೂಲಿ ಮಾಡುವುದುನ್ನು ನಿಲ್ಲಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮೈಕ್ರೋ ಫೈನಾನ್ಸ್ಗಳು ಕೆಲಸ ಮಾಡಬೇಕು.

ಸಾಮಾನ್ಯವಾಗಿ ಮಧ್ಯಮ ಹಾಗೂ ಕೆಳ ವರ್ಗದವರು ವೈದ್ಯಕೀಯ ಚಿಕಿತ್ಸೆ, ಮದುವೆ ಇನ್ನಿತರ ಕೆಲಸಗಳಿಗೆ ಸಾಲ ಪಡೆದಿರುತ್ತಾರೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಆಗದಿರಲಿ ಎಂದರು.

ಜಿಲ್ಲೆಯಲ್ಲಿ 348 ಲೇವಾದೇವಿ, ಗಿರವಿ ಸಂಸ್ಥೆಗಳು

2025 ರ ಜನವರಿ ಅಂತ್ಯಕ್ಕೆ 348 ಸಂಸ್ಥೆಗಳು ನೋಂದಣಿಯಾಗಿದ್ದು. ಅದರಲ್ಲಿ 105 ಲೇವಾದೇವಿದಾರರು, 243 ಗಿರವೀದಾರರು ವ್ಯವಹಾರ ನಡೆಸುತ್ತಿದ್ದಾರೆ. ನೆಲಮಂಗಲ ತಾಲ್ಲೂಕಿನಲ್ಲಿ 27 ಲೇವಾದೇವಿ, 45 ಗಿರವಿ ಸಂಸ್ಥೆಗಳು, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 45 ಲೇವಾದೇವಿ, 47 ಗಿರವಿ ಸಂಸ್ಥೆಗಳು, ದೇವನಹಳ್ಳಿ ತಾಲ್ಲೂಕಿನಲ್ಲಿ 16 ಲೇವಾದೇವಿ, 75 ಗಿರವಿ ಸಂಸ್ಥೆಗಳು, ಹೊಸಕೋಟೆಯಲ್ಲಿ 17 ಲೇವಾದೇವಿ ಹಾಗೂ 76 ಗಿರವಿ ಸಂಸ್ಥೆಗಳು ವ್ಯವಹಾರ ನಡೆಸುತ್ತಿವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 184 ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಅದರ ಶಾಖೆಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು.ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು

  • ಸಾಲ ಪಡೆಯಲು ಅರ್ಜಿ ಸಲ್ಲಿಸುವವರ ಆದಾಯದ ಸಾಮರ್ಥ್ಯ ಪರಿಶೀಲಿಸಬೇಕು. ಅವರ ಪ್ರತಿ ತಿಂಗಳು ಹಣ ಕಟ್ಟುವ ಸಾಮರ್ಥ್ಯ ಮೀರಿ ಸಾಲ ವಿತರಣೆ ಮಾಡಬಾರದು.
  • ಸಾಲ ಕೊಡುವಾಗ ಅವರ ಮಾಸಿಕ ವೇತನ ಹಾಗೂ ಆದಾಯದ ಮೂಲ ಆಧರಿಸಿ ನೀಡಬೇಕು. ಅತಿ ಹೆಚ್ಚು ಇ.ಎಂ.ಐ ಪಾವತಿಸಲು ಸೂಚಿಸಬಾರದು.
  • ಮಾಸಿಕ ಆದಾಯ ಅಥವಾ ವೇತನದ ಶೇಕಡ 50ಕ್ಕಿಂತ ಹೆಚ್ಚು ಇರಬಾರದು. ಸಂಜೆ 06 ರಿಂದ ಬೆಳಗ್ಗೆ 09 ರವರೆಗೆ ಸಾಲ ಹಿಂಪಡೆಯುವ ಯಾವುದೇ ಪ್ರಕ್ರಿಯೆಗಳನ್ನು ಮಾಡಬಾರದು.
  • ಬೆಳಗ್ಗೆ 9:00 ರಿಂದ ಸಂಜೆ 06 ರೆವರೆಗೆ ಮಾತ್ರ ಕರೆ ಮಾಡಬೇಕು. ಕರೆ ಮಾಡುವಾಗ ಬೆದರಿಕೆ ಹಾಕಬಾರದು. ಕೆಟ್ಟ ಪದಗಳನ್ನು ಬಳಸಿ ನಿಂದಿಸಬಾರದು.
  • ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳ ಮೂಲಕ ಸಾಲ ವಾಪಸ್ ಗೆ ಕಿರುಕುಳ ಕೊಡುವಂತಿಲ್ಲ. ಸಾಲ ಪಡೆದ ವಿವರವನ್ನು ಗೌಪ್ಯವಾಗಿಡಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಬಹಿರಂಗವಾಗಿ ಪ್ರಚಾರ ಆಗುವಂತೆ ಸಾಲ ತೀರಿಸಲು ಕೇಳಬಾರದು ಅವರ ಕುಟುಂಬಕ್ಕೆ ಆಸ್ತಿಗೆ ಹಾನಿ ಮಾಡಬಾರದು ರೌಡಿಗಳನ್ನು ಗೂಂಡಗಳನ್ನು ಸಾಲ ವಸೂಲಾತಿಗೆ ಕಳುಹಿಸಬಾರದು.
  • ಮೈಕ್ರೋ ಫೈನಾನ್ಸ್ ಗಳು ಮೇಲಿನ ಸರ್ಕಾರದ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ವ್ಯಕ್ತಿಯ ಗೌರವ, ಘನತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಿರಲಿ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಡಿವೈಎಸ್ಪಿ ರವಿ, ಸಹಕಾರ ಸಂಘಗಳ ಡೆಪ್ಯುಟಿ ರಿಜಿಸ್ಟ್ರಾರ್ ಚಂದ್ರಶೇಖರ್, ಸಹಾಯಕ ಡೆಪ್ಯುಟಿ ರಿಜಿಸ್ಟ್ರಾರ್ ರಾಮಾಂಜನೇಯ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಕರ್ ಸೇರಿದಂತೆ ಜಿಲ್ಲೆಯ ಲೇವಾದೇವಿ, ಗಿರವಿ ಸಂಸ್ಥೆಗಳ ಮುಖ್ಯಸ್ಥರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]