ಅರಸೀಕೆರೆ: ಪ್ರೇಮಿಗಳ ದಿನಕ್ಕೆ ಕೇವಲ ನಾಲ್ಕು ದಿನ ಮಾತ್ರ ಉಳಿದಿದೆ. ಆದರೆ ಪ್ರೀತಿಸಿದವಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು 22 ವರ್ಷದ ದರ್ಶನ್ ಎಂದು ಗುರುತಿಸಲಾಗಿದೆ.
ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೇವಿನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನಂತೆ.
ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿ. ಬಿಎ ಮುಗಿಸಿ ವ್ಯವಸಾಯ ಮಾಡುತ್ತಿದ್ದ ದರ್ಶನ್ ಯುವತಿಗೆ ಮದುವೆಯಾಗೋಣ ಎಂದಿದ್ದನಂತೆ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.
ಇದ್ರಿಂದ ಯುವಕನಿಗೆ ಆಕಾಶವೇ ತಲೆ ಮೇಲೆ ಕಳಚಿಬಿದ್ದಂತಾಗಿದೆ. ಮನನೊಂದು ವಿಷ ಸೇವಿಸಿ ಅತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ನೇಹಿತರು ಅರಸೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದರ್ಶನ್ ಕೊನೆಯುಸಿರೆಳೆದಿದ್ದಾನೆ.