AeroIndia2025 has created a new milestone in defense products: Defense Minister Rajnath Singh

AeroIndia2025 ಯಲಹಂಕದಲ್ಲಿ ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ| Video

ಯಲಹಂಕ (AeroIndia2025): ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು, ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.

ಇಂದು ಯಲಹಂಕದ ವಾಯು ನೆಲೆಯಲ್ಲಿ ಆಯೋಜಿಸಿದ್ದ ಏರೋ ಇಂಡಿಯಾ – 2025ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು‌

ಒಂದು ದಶಕದ ಹಿಂದೆ ಶೇಕಡ 65-70 ರಷ್ಟು ರಕ್ಷಣಾ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, ಈಗ ನಾವೇ ಶೇಕಡ 65-70 ರಷ್ಟು ಉತ್ಪನ್ನಗಳನ್ನು ದೇಶೀಯವಾಗಿ ಉತ್ಪಾದಿಸುತ್ತಿದ್ದೇವೆ. ಪ್ರಧಾನಿಗಳ ಆತ್ಮನಿರ್ಭರ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದೇವೆ ಎಂದು ತಿಳಿಸಿದರು.

ಸ್ಪೂರ್ತಿ ನೀಡಿದ ಏರೋ ಇಂಡಿಯಾ – 2025

ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಏರೋ ಇಂಡಿಯಾ – 2025 ಅಗಾಧ ಶಕ್ತಿ ಹಾಗೂ ಸ್ಫೂರ್ತಿಯನ್ನು ತಂದಿದೆ. ಇದರಿಂದ ಉದ್ದಿಮೆಗಳು, ಸ್ಟಾರ್ಟ್ ಆಪ್ ಕಂಪನಿಗಳು ಮುಂತಾದವುಗಳಿಗೆ ಪ್ರೋತ್ಸಾಹ ದೊರೆತಂತಾಗಿದೆ ಎಂದರು.

ರಕ್ಷಣಾ ಉತ್ಪನ್ನಗಳನ್ನು ಇದೀಗ ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಈ ವಲಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಾವು ಇನ್ನೂ ಹೆಚ್ಚು ಸಾಧನೆ ಮಾಡಬೇಕಿದೆ.

ಹೆಚ್ಚು ಜನ ಭಾಗೀದಾರರನ್ನು ಆಕಷಿಸುವಂತೆ ನಾವು ಮುನ್ನಡೆಯಬೇಕು. ದೇಶದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ದೇಶ ಕಾಯುವ ಸೈನಿಕರನ್ನು ನಾವು ಸಶಕ್ತಿಕರಣಗೊಳಿಸಬೇಕು ಎಂದು ತಿಳಿಸಿದರು.

ನಾವು ಜಾಗತೀಕ ನಾಯಕ ಪಟ್ಟ ಏರಲಿದ್ದೇವೆ

ಏರೋ ಇಂಡಿಯಾ – 2025 ಹಲವು ಕಂಪನಿಗಳು, ಪ್ರಮುಖ ಸಂಸ್ಥೆಗಳು, ಕೈಗಾರಿಕೆಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದೆ. ವಿವಿಧ ರಕ್ಷಣಾ ಸಚಿವರ, ವಿವಿಧ ಕಂಪನಿ ಮುಖ್ಯಸ್ಥರ ಸಮಾವೇಶಗಳು ಇದಕ್ಕೆ ಹೊಸ ಆಯಾಮ ನೀಡಿದೆ. ಆದರೂ ನಾವು ಮಾಡಬೇಕಾದ ಕೆಲಸ ಬಹಳಷ್ಟಿದೆ.

ಇಲ್ಲಿ ಹಲವು ದೇಶಗಳು, ಪ್ರದರ್ಶಕರು, ಗಣ್ಯರುಗಳು ಭಾಗವಹಿಸಿ ಸಮಾವೇಶಕ್ಕೆ ಮೆರಗು ನೀಡಿದ್ದಾರೆ. ಇದರಿಂದ ನಮ್ಮ ಸಾಮರ್ಥ್ಯವನ್ನು ದೇಶ ವಿದೇಶಗಳ ಎದರು ತೋರಿಸಿದಂತಾಗಿದೆ. ಇದರಿಂದ ನಾವು ಜಾಗತೀಕ ನಾಯಕ ಪಟ್ಟ ಏರುವುದರಲ್ಲಿ ಸಂಶಯವಿಲ್ಲ ಎಂದರು.

ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ

ಏರೋ ಇಂಡಿಯಾ – 2025 ರಲ್ಲಿ ಪ್ರದರ್ಶನ ನೀಡಿದ ವೈಮಾನಿಕ ವಿಮಾನಗಳು ಎಲ್ಲರ ಕಣ್ಮನ ಸೆಳೆದವು. ವೈಯಕ್ತಿವಾಗಿ ನನಗೆ ಬಹಳ ಹುರುಪು ನೀಡಿದೆ. ಇಸ್ರೋ, ಹೆಚ್.ಎ.ಎಲ್, ಡಿ.ಆರ್.ಡಿ.ಓ ಮುಂತಾದ ಸಂಸ್ಥೆಗಳ ಸಹಕಾರದಿಂದ ನಾವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುತ್ತೇವೆ ಎಂಬುವುದರಲ್ಲಿ ಸಂಶವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಮಂತ್ರಿಗಳಾದ ಸಂಜಯ್ ಸೇಠ್, ಕೇಂದ್ರ ರಕ್ಷಣಾ ಇಲಾಖೆ (ಉತ್ಪಾದನೆ) ಕಾರ್ಯದರ್ಶಿಗಳಾದ ಸಂಜೀವ್ ಕುಮಾರ್, ನೌಕಪಡೆ ಮುಖ್ಯಸ್ಥರಾದ ಅಡ್ಮೀರಲ್ ದಿನೇಶ್ ಕೆ. ತ್ರಿಪಾತಿ.

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಅನಿಲ್ ಚವ್ಹಾಣ, ಸೇನಾ ಸಿಬ್ಬಂದಿ ಮುಖ್ಯಸ್ಥರಾದ ಉಪೇಂದ್ರ ದ್ವಿವೇದಿ, ಕರ್ನಾಟಕ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿಗಳಾದ ಎನ್. ಮಂಜುಳ ಸೇರಿದಂತೆ ರಕ್ಷಣ ಪಡೆ, ನೌಕಪಡೆ, ವಾಯುಪಡೆಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!