AeroIndia2025 ಯಲಹಂಕದಲ್ಲಿ ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ| Video

AeroIndia2025 has created a new milestone in defense products: Defense Minister Rajnath Singh

ಯಲಹಂಕ (AeroIndia2025): ರಕ್ಷಣಾ ಉತ್ಪನ್ನಗಳನ್ನು ದೇಶೀಯವಾಗಿ ನಾವೇ ಉತ್ಪಾದನೆ ಮಾಡುತ್ತಿದ್ದು, ಹೊಸ ಮೈಲಿಗಲ್ಲನ್ನೇ ಸೃಷ್ಟಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ತಿಳಿಸಿದರು.

ಇಂದು ಯಲಹಂಕದ ವಾಯು ನೆಲೆಯಲ್ಲಿ ಆಯೋಜಿಸಿದ್ದ ಏರೋ ಇಂಡಿಯಾ – 2025ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು‌

ಒಂದು ದಶಕದ ಹಿಂದೆ ಶೇಕಡ 65-70 ರಷ್ಟು ರಕ್ಷಣಾ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದ್ದು, ಈಗ ನಾವೇ ಶೇಕಡ 65-70 ರಷ್ಟು ಉತ್ಪನ್ನಗಳನ್ನು ದೇಶೀಯವಾಗಿ ಉತ್ಪಾದಿಸುತ್ತಿದ್ದೇವೆ. ಪ್ರಧಾನಿಗಳ ಆತ್ಮನಿರ್ಭರ ಪರಿಕಲ್ಪನೆಯನ್ನು ಸಾಕಾರಗೊಳಿಸಿದ್ದೇವೆ ಎಂದು ತಿಳಿಸಿದರು.

ಸ್ಪೂರ್ತಿ ನೀಡಿದ ಏರೋ ಇಂಡಿಯಾ – 2025

AeroIndia2025 ಯಲಹಂಕದಲ್ಲಿ ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ| Video

ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾದ ಏರೋ ಇಂಡಿಯಾ – 2025 ಅಗಾಧ ಶಕ್ತಿ ಹಾಗೂ ಸ್ಫೂರ್ತಿಯನ್ನು ತಂದಿದೆ. ಇದರಿಂದ ಉದ್ದಿಮೆಗಳು, ಸ್ಟಾರ್ಟ್ ಆಪ್ ಕಂಪನಿಗಳು ಮುಂತಾದವುಗಳಿಗೆ ಪ್ರೋತ್ಸಾಹ ದೊರೆತಂತಾಗಿದೆ ಎಂದರು.

ರಕ್ಷಣಾ ಉತ್ಪನ್ನಗಳನ್ನು ಇದೀಗ ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಈ ವಲಯದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಾವು ಇನ್ನೂ ಹೆಚ್ಚು ಸಾಧನೆ ಮಾಡಬೇಕಿದೆ.

ಹೆಚ್ಚು ಜನ ಭಾಗೀದಾರರನ್ನು ಆಕಷಿಸುವಂತೆ ನಾವು ಮುನ್ನಡೆಯಬೇಕು. ದೇಶದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ದೇಶ ಕಾಯುವ ಸೈನಿಕರನ್ನು ನಾವು ಸಶಕ್ತಿಕರಣಗೊಳಿಸಬೇಕು ಎಂದು ತಿಳಿಸಿದರು.

ನಾವು ಜಾಗತೀಕ ನಾಯಕ ಪಟ್ಟ ಏರಲಿದ್ದೇವೆ

ಏರೋ ಇಂಡಿಯಾ – 2025 ಹಲವು ಕಂಪನಿಗಳು, ಪ್ರಮುಖ ಸಂಸ್ಥೆಗಳು, ಕೈಗಾರಿಕೆಗಳನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದೆ. ವಿವಿಧ ರಕ್ಷಣಾ ಸಚಿವರ, ವಿವಿಧ ಕಂಪನಿ ಮುಖ್ಯಸ್ಥರ ಸಮಾವೇಶಗಳು ಇದಕ್ಕೆ ಹೊಸ ಆಯಾಮ ನೀಡಿದೆ. ಆದರೂ ನಾವು ಮಾಡಬೇಕಾದ ಕೆಲಸ ಬಹಳಷ್ಟಿದೆ.

ಇಲ್ಲಿ ಹಲವು ದೇಶಗಳು, ಪ್ರದರ್ಶಕರು, ಗಣ್ಯರುಗಳು ಭಾಗವಹಿಸಿ ಸಮಾವೇಶಕ್ಕೆ ಮೆರಗು ನೀಡಿದ್ದಾರೆ. ಇದರಿಂದ ನಮ್ಮ ಸಾಮರ್ಥ್ಯವನ್ನು ದೇಶ ವಿದೇಶಗಳ ಎದರು ತೋರಿಸಿದಂತಾಗಿದೆ. ಇದರಿಂದ ನಾವು ಜಾಗತೀಕ ನಾಯಕ ಪಟ್ಟ ಏರುವುದರಲ್ಲಿ ಸಂಶಯವಿಲ್ಲ ಎಂದರು.

ಕಣ್ಮನ ಸೆಳೆದ ವೈಮಾನಿಕ ಪ್ರದರ್ಶನ

ಏರೋ ಇಂಡಿಯಾ – 2025 ರಲ್ಲಿ ಪ್ರದರ್ಶನ ನೀಡಿದ ವೈಮಾನಿಕ ವಿಮಾನಗಳು ಎಲ್ಲರ ಕಣ್ಮನ ಸೆಳೆದವು. ವೈಯಕ್ತಿವಾಗಿ ನನಗೆ ಬಹಳ ಹುರುಪು ನೀಡಿದೆ. ಇಸ್ರೋ, ಹೆಚ್.ಎ.ಎಲ್, ಡಿ.ಆರ್.ಡಿ.ಓ ಮುಂತಾದ ಸಂಸ್ಥೆಗಳ ಸಹಕಾರದಿಂದ ನಾವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುತ್ತೇವೆ ಎಂಬುವುದರಲ್ಲಿ ಸಂಶವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಇಲಾಖೆಯ ರಾಜ್ಯ ಮಂತ್ರಿಗಳಾದ ಸಂಜಯ್ ಸೇಠ್, ಕೇಂದ್ರ ರಕ್ಷಣಾ ಇಲಾಖೆ (ಉತ್ಪಾದನೆ) ಕಾರ್ಯದರ್ಶಿಗಳಾದ ಸಂಜೀವ್ ಕುಮಾರ್, ನೌಕಪಡೆ ಮುಖ್ಯಸ್ಥರಾದ ಅಡ್ಮೀರಲ್ ದಿನೇಶ್ ಕೆ. ತ್ರಿಪಾತಿ.

ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಅನಿಲ್ ಚವ್ಹಾಣ, ಸೇನಾ ಸಿಬ್ಬಂದಿ ಮುಖ್ಯಸ್ಥರಾದ ಉಪೇಂದ್ರ ದ್ವಿವೇದಿ, ಕರ್ನಾಟಕ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿಗಳಾದ ಎನ್. ಮಂಜುಳ ಸೇರಿದಂತೆ ರಕ್ಷಣ ಪಡೆ, ನೌಕಪಡೆ, ವಾಯುಪಡೆಯ ಅಧಿಕಾರಿಗಳು, ವಿವಿಧ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!