Doddaballapura; ಬಗೆಹರಿಯದ ಸಾರಿಗೆ ಅವ್ಯವಸ್ಥೆ.. ದಿನ ನಿತ್ಯ ಪ್ರಯಾಣಿಕರ ಪರದಾಟ.! Video

Doddaballapura; Unsolved transport chaos..

ದೊಡ್ಡಬಳ್ಳಾಪುರ (Doddaballapura): ಸರ್ಕಾರಿ ಸಾರಿಗೆ ಬಸ್ಸುಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಪ್ರಯಾಣಿಕರು ಪ್ರತಿನಿತ್ಯ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಬೇಕಾದ ಅನಿವಾರ್ಯತೆ ಪ್ರತಿ ದಿನ ಬಸ್ ನಿಲ್ದಾಣದಲ್ಲಿ ಕಂಡು ಬರುತ್ತಿದೆ.

ನಗರದಿಂದ ಬೆಂಗಳೂರು ಕಡೆಗೆ ಸಾಗುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳು ಸಂಖ್ಯೆ ಮಾತ್ರ ಹೆಚ್ಚಾಗುತ್ತಿಲ್ಲ ಎಂಬುದು ಆರೋಪ.

ಕಳೆದ ವರ್ಷ ಬಸ್ ಸಮಸ್ಯೆ ತೀವ್ರವಾಗಿ ಸದ್ದು ಮಾಡಿ, ರಾಜಕೀಯ ಬಣ್ಣ ಪಡೆದು ಆರೋಪ, ಪ್ರತ್ಯಾರೋಪ ನಡೆದು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ದೂರು.. ಅವರಿಂದ ಎರಡು ಹೆಚ್ಚುವರಿ ಬಸ್ ನೀಡುವಿಕೆ ಸೇರಿದಂತೆ ಅನೇಕ ಬೆಳವಣಿಗೆ ನಡೆಯಿತು. ಅಲ್ಲಿಗೆ ಚರ್ಚೆ ಶುಭಂ..

ಆದರೆ ಸಮಸ್ಯೆ ಬಗೆಹರಿಯಿತೇ ಎಂದರೆ ಇಲ್ಲ. ಪ್ರತಿ ನಿತ್ಯ ಬೆಳಗ್ಗೆ ಮತ್ತು ಸಂಜೆ ಸಾರಿಗೆ ಬಸ್ಸುಗಳಲ್ಲಿ ಉಸಿರು ಗಟ್ಟುವ ದುಸ್ಥಿತಿ ಇದೆ. ನಿಗದಿ ಪ್ರಯಾಣಿಕರಿಗಿಂತ ಮೂರು, ನಾಲ್ಕು ಪಟ್ಟು ತುಂಬಿಕೊಂಡು ಬಸ್ಸುಗಳು ತೆರಳುತ್ತಿವೆ.

ಸಮಯಕ್ಕೆ ಸರಿಯಾಗಿ ದೊರಕದ ಬಸ್ಸುಗಳಿಂದಾಗಿ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪ್ರಯಾಣಿಕರು ಸಮಯಕ್ಕೆ ಶಾಲೆ, ಕಾಲೇಜು, ನೌಕರಿ ತೆರಳು ಸಾಧ್ಯವಾಗದೆ ದಿನ ನಿತ್ಯ ಹಿಡಿ ಶಾಪ ಹಾಕುತ್ತಿದ್ದಾರೆ.

ತಾಯಂದಿರಗೆ ಅಗೌರವ

ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಇದೇ ಕಾರಣಕ್ಕೆ ತಾಯಂದಿರನ್ನು ಅಗೌರವದಿಂದ ಕಾಣಲಾಗಿತ್ತಿದೆ.

ಆಧಾರ್ ಕಾರ್ಡ್ ತೋರಿಸಿದರೆ, ರಸ್ತೆ ನಡುವೆ ಬಸ್ ನಿಲ್ಲಿಸುವಂತೆ ಮನವಿ ಮಾಡಿದರೆ ಕೆಲ ಚಾಲಕ, ನಿರ್ವಾಹಕರು ತಾವು ಕೂಡ ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರು ಎಂಬುದನ್ನು ಮರೆತು ಅಮಾಮವೀಯವಾಗಿ ವರ್ತಿಸುತ್ತಿದ್ದಾರೆ ಎಂಬ ಬೇಸರ ಮಹಿಳೆಯರದ್ದಾಗಿದೆ.

ಸಬೂಬು

ಇನ್ನೂ ಈ ಕುರಿತಂತೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸಿಬ್ಬಂದಿಗಳ ಕೊರತೆ ಅದೂ, ಇದೂ ಸಬೂಬು ಹೇಳುತ್ತಾರೆಯೇ ಹೊರತು, ಪ್ರಯಾಣಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಯಾರು ಇಲ್ಲವಾಗಿದೆ ಎಂದು ಪ್ರಯಾಣಿಕ ಶಾಹಿಲ್ ಜೈನ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]