Drink & Drive: Driver fined Rs. 12,500!

ಕೋರ್ಟ್ ಸುದ್ದಿ: ತಿಳಿಯದೇ ಅಪರಾಧಿಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ..!

ಬೆಂಗಳೂರು: ಕೊಲೆ (Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ (Life imprisonment) ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮದ ಉದಯ್ ಕುಮಾರ್ ಶೆಟ್ಟಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ಪ್ರಕಟಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಐಪಿಸಿ ಸೆಕ್ಷನ್ 216 ರ (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದರೆ ಆಶ್ರಯ ನೀಡಿದ ವ್ಯಕ್ತಿಗೆ ಅಪರಾಧಿಯು ಶಿಕ್ಷೆಗೆ ಗುರಿಯಾಗಿರುವುದರ ಸಂಪೂರ್ಣ ಮಾಹಿತಿ ಇರಬೇಕು.

ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸುವಂತಹ ಅಂಶಗಳಿರಬೇಕು ಮತ್ತು ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳಿರಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ ದಾಖಲೆಗಳು ಲಭ್ಯವಾಗಿವೆ.

ಅದರಂತೆ ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸೂಚಿಸುವ ಯಾವುದೇ ಸಂದೇಶ ಅಥವಾ ಸಂವಹನ ನಡೆದಿಲ್ಲ.

ಅಪರಾಧಿಯನ್ನು ಅರ್ಜಿದಾರರ ಮನೆಯಿಂದ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ, ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಸಾಕ್ಷ್ಯಾಧಾರಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜತೆಗೆ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಕೊಲೆ ಆರೋಪದ ಪ್ರಕರಣದಲ್ಲಿ ಶರಣ್ ಅಲಿಯಾಸ್ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಅಪರಾಧಿ ಶರಣ್ ತಲೆ ಮರೆಸಿಕೊಂಡಿದ್ದರಿಂದ ಆತನನ್ನು ಬಂಧಿಸಲು ಬರ್ಕೆ ಠಾಣಾ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಅಂತಿಮವಾಗಿ ಉದಯ್ ಕುಮಾರ್ ಶೆಟ್ಟಿ ಮನೆಯಲ್ಲಿ ಅಪರಾಧಿಯನ್ನು ಬಂಧಿಸಿದ್ದರು.

ನಂತರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಆಶ್ರಯ ನೀಡಿದ ಆರೋಪದಡಿ ಉದಯ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಉದಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರ ಉದಯ್ ಪರ ವಕೀಲರು ವಾದ ಮಂಡಿಸಿ, ಅಪರಾಧಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳು ಹಾಜರುಪಡಿಸಿಲ್ಲ.

ಅರ್ಜಿದಾರರ ಮನೆಗೆ ಅಪರಾಧಿ ಬಂದಾಗ ಅವರಿಗೆ ಆತನ ವಿರುದ್ಧದ ಪ್ರಕರಣದ ಕುರಿತಂತೆ ಮತ್ತು ಕಾನೂನು ಸಂಘರ್ಷದ ಕುರಿತಂತೆ ಯಾವುದೇ ಮಾಹಿತಿ ಇರಲಿಲ್ಲ. ಹೀಗಾಗಿ ಅವರಿಗೆ ಆಶ್ರಯ ನೀಡಿದ್ದರು ಎಂದು ಪೀಠಕ್ಕೆ ವಿವರಿಸಿದ್ದರು.
(CRIMINAL PETITION NO. 14164 OF 2024)

ಲೇಖಕರು: ಮಂಜೇಗೌಡ ಕೆ.ಜಿ, ವಕೀಲರು, 9980178111

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!