Insurance company must pay for drunk driving: High Court

ಕೋರ್ಟ್ ಸುದ್ದಿ: ತಿಳಿಯದೇ ಅಪರಾಧಿಗೆ ಆಶ್ರಯ ನೀಡಿದ್ದಾಗ ಅಪರಾಧವಲ್ಲ..!

ಬೆಂಗಳೂರು: ಕೊಲೆ (Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ (Life imprisonment) ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮದ ಉದಯ್ ಕುಮಾರ್ ಶೆಟ್ಟಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ಪ್ರಕಟಿಸಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಐಪಿಸಿ ಸೆಕ್ಷನ್ 216 ರ (ಅಪರಾಧಿಗೆ ಉದ್ದೇಶಪೂರ್ವಕವಾಗಿ ಆಶ್ರಯ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾದರೆ ಆಶ್ರಯ ನೀಡಿದ ವ್ಯಕ್ತಿಗೆ ಅಪರಾಧಿಯು ಶಿಕ್ಷೆಗೆ ಗುರಿಯಾಗಿರುವುದರ ಸಂಪೂರ್ಣ ಮಾಹಿತಿ ಇರಬೇಕು.

ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸುವಂತಹ ಅಂಶಗಳಿರಬೇಕು ಮತ್ತು ಅದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳಿರಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮೊಬೈಲ್ ಫೋನ್ ದಾಖಲೆಗಳು ಲಭ್ಯವಾಗಿವೆ.

ಅದರಂತೆ ಉದ್ದೇಶಪೂರ್ವಕವಾಗಿ ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಸೂಚಿಸುವ ಯಾವುದೇ ಸಂದೇಶ ಅಥವಾ ಸಂವಹನ ನಡೆದಿಲ್ಲ.

ಅಪರಾಧಿಯನ್ನು ಅರ್ಜಿದಾರರ ಮನೆಯಿಂದ ಬಂಧಿಸಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬ ಅಂಶವನ್ನು ಹೊರತುಪಡಿಸಿ, ಅರ್ಜಿದಾರರಿಗೆ ಅಪರಾಧಿಯ ಶಿಕ್ಷೆಯ ಬಗ್ಗೆ ತಿಳಿದಿತ್ತು ಮತ್ತು ಅವರು ಉದ್ದೇಶಪೂರ್ವಕವಾಗಿ ಅಪರಾಧಿಗೆ ಆಶ್ರಯ ನೀಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ.

ಸಾಕ್ಷ್ಯಾಧಾರಗಳಿಲ್ಲದೆ ಅವರ ವಿರುದ್ಧ ಕಾನೂನು ಕ್ರಮಗಳನ್ನು ಮುಂದುವರಿಸುವುದು ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜತೆಗೆ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ: ಕೊಲೆ ಆರೋಪದ ಪ್ರಕರಣದಲ್ಲಿ ಶರಣ್ ಅಲಿಯಾಸ್ ಶರಣ್ ಪೂಜಾರಿ ಎಂಬಾತನಿಗೆ ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಅಪರಾಧಿ ಶರಣ್ ತಲೆ ಮರೆಸಿಕೊಂಡಿದ್ದರಿಂದ ಆತನನ್ನು ಬಂಧಿಸಲು ಬರ್ಕೆ ಠಾಣಾ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.

ಅಂತಿಮವಾಗಿ ಉದಯ್ ಕುಮಾರ್ ಶೆಟ್ಟಿ ಮನೆಯಲ್ಲಿ ಅಪರಾಧಿಯನ್ನು ಬಂಧಿಸಿದ್ದರು.

ನಂತರ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಆಶ್ರಯ ನೀಡಿದ ಆರೋಪದಡಿ ಉದಯ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಉದಯ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರ ಉದಯ್ ಪರ ವಕೀಲರು ವಾದ ಮಂಡಿಸಿ, ಅಪರಾಧಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದಾರೆ ಎಂದು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳು ಹಾಜರುಪಡಿಸಿಲ್ಲ.

ಅರ್ಜಿದಾರರ ಮನೆಗೆ ಅಪರಾಧಿ ಬಂದಾಗ ಅವರಿಗೆ ಆತನ ವಿರುದ್ಧದ ಪ್ರಕರಣದ ಕುರಿತಂತೆ ಮತ್ತು ಕಾನೂನು ಸಂಘರ್ಷದ ಕುರಿತಂತೆ ಯಾವುದೇ ಮಾಹಿತಿ ಇರಲಿಲ್ಲ. ಹೀಗಾಗಿ ಅವರಿಗೆ ಆಶ್ರಯ ನೀಡಿದ್ದರು ಎಂದು ಪೀಠಕ್ಕೆ ವಿವರಿಸಿದ್ದರು.
(CRIMINAL PETITION NO. 14164 OF 2024)

ಲೇಖಕರು: ಮಂಜೇಗೌಡ ಕೆ.ಜಿ, ವಕೀಲರು, 9980178111

ರಾಜಕೀಯ

ಡಿಕೆ ಶಿವಕುಮಾರ್ ಹೇಳಿಕೆ ತಿರುಚಿದವರಿಗೆ ಕಾನೂನು ಸಂಕಷ್ಟ

ಡಿಕೆ ಶಿವಕುಮಾರ್ ಹೇಳಿಕೆ ತಿರುಚಿದವರಿಗೆ ಕಾನೂನು ಸಂಕಷ್ಟ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK

[ccc_my_favorite_select_button post_id="104534"]
3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

3 ಸಾವಿರ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿದ ಲಕ್ಷ್ಮೀ ಹೆಬ್ಬಾಳ್ಕರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ (lakshmi hebbalkar) ಅವರು ಸಾಮೂಹಿಕವಾಗಿ 3 ಸಾವಿರ ಗರ್ಭಿಣಿಯರಿಗೆ (ಉಡಿ ತುಂಬುವ

[ccc_my_favorite_select_button post_id="104529"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

Doddaballapura: ಗರಿಕೇನಹಳ್ಳಿ ಮಹಿಳೆ ಆತ್ಮಹತ್ಯೆ ಪ್ರಕರಣ.. ಓರ್ವನ ಬಂಧನ.! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ (Doddaballapura): ಮಾ.14 ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯೋರ್ವ ಶವದ ಕುರಿತು ತನಿಖೆ ನಡೆಸುತ್ತಿರುವ ತಾಲೂಕಿನ ಹೊಸಹಳ್ಳಿ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು 40 ವರ್ಷದ ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಬಂಧಿತನ ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂಬ

[ccc_my_favorite_select_button post_id="104504"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!