Lokayukta files suo motu complaint against Doddaballapura AC, Tahsildar

Doddaballapura: ನಕಲಿ ಸಹಿ ಪ್ರಕರಣದ ಸುತ್ತ ಹಲವು ಅನುಮಾನದ ಹುತ್ತ..! K2 ಅಂದ್ರೇನು ಗೊತ್ತಾ..? ಎಂಬ ಪ್ರಶ್ನೆ

ದೊಡ್ಡಬಳ್ಳಾಪುರ (Doddaballapura); ತಾಲ್ಲೂಕು ಕಚೇರಿಯಲ್ಲಿನ ಮುಜರಾಯಿ ಇಲಾಖೆಗೆ ಸೇರಿರುವ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತಹಶೀಲ್ದಾರ್ ಅವರ ಸಹಿ ನಕಲಿ ಮಾಡಿ ವರ್ಗಾವಣೆ ಮಾಡಿರುವ ಆರೋಪದ ಮೇಲೆ ಸಾಸಲು ಹೋಬಳಿ ಕಂದಾಯ ನಿರೀಕ್ಷಕ ಹೇಮಂತ್ ಕುಮಾರ್ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಲೆಕ್ಕಪತ್ರಗಳ ಪರಿಶೀಲನೆ ವೇಳೆ ಮುಜರಾಯಿ ಇಲಾಖೆಯ ಖಾತೆಯಲ್ಲಿ ಹಣ ಇಲ್ಲದೆ ಇರುವ ಬಗ್ಗೆ ಅನುಮಾನಗೊಂಡ ತಹಶೀಲ್ದಾರ್ ವಿಭಾವಿದ್ಯಾರಾಥೋಡ್ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಮೇರೆಗೆ ತನಿಖೆ ನಡೆಸಿದ್ದ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಬೆಂಗಳೂರಿನ ಮಹಾಲಕ್ಷ್ಮೀಪುರನ ಕೆನರಾ ಬ್ಯಾಂಕ್ ಕುರುಬರಹಳ್ಳಿ ಶಾಖೆಯಲ್ಲಿನ ಸುಶೀಲಮ್ಮ ಎಂಬುವವರ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಬಂಧನವಾಗಿದೆ.

ಅನುಮಾನದ ಹುತ್ತ

ಮುಜರಾಯಿ ಇಲಾಖೆಗೆ ಸೇರಿರುವ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತಹಶೀಲ್ದಾರ್ ಅವರ ಸಹಿ ನಕಲಿ ಮಾಡಿ ವರ್ಗಾವಣೆ ಮಾಡಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಚೆಕ್ ಬಳಕೆ ಬಹುತೇಕ ನಿಲ್ಲಿಸಲಾಗಿದ್ದು, K2 ಚಲನ್ ಜಾರಿಗೆ ಬಂದು ಹಲವು ವರ್ಷವಾಗಿದೆ.

ಇದರ ಅನ್ವಯ ಸರ್ಕಾರಿ ಕಚೇರಿಯ ಯಾವುದೇ ಇಲಾಖೆಯ ಹಣ ವರ್ಗಾವಣೆಯಾಗುವುದು ಇದರ ಮೂಲಕವೇ. ಆದರೆ ಈ ಪ್ರಕರಣದಲ್ಲಿ ಮುಜರಾಯಿ ಇಲಾಖೆಯ ಹಣವನ್ನು ಲಪಟಾಯಿಸಲು ಚೆಕ್ ಬಳಸಿರುವುದು, ತಹಶಿಲ್ದಾರ್ ನಕಲಿ ಸಹಿ ಮಾಡಿರುವುದು ಹೇಗೆ..? ಈ ಇಲಾಖೆ K2ಗೆ ಒಳಪಟ್ಟಿಲ್ಲವೇ ಎಂಬ ಅನುಮಾನ ವ್ಯಾಪಕವಾಗಿದೆ.

ಅಲ್ಲದೆ ಪ್ರತಿ ತಿಂಗಳು, ಮೂರು ತಿಂಗಳಿಗೊಮ್ಮೆ ಶಾಸಕರು, ಸಚಿವರು, ಸಂಸದರು, ಡಿಸಿ ನೇತೃತ್ವದಲ್ಲಿ ಇಲಾಖೆವಾರು ಪ್ರಗತಿ ಪರಿಶೀಲನೆ ನಡೆಯುತ್ತದೆ. ಈ ಸಭೆಯಲ್ಲಿ ವಿವಿಧ ಇಲಾಗೆ ಸರ್ಕಾರದಿಂದ ದೊರೆತಿರುವ ಅನುದಾನ, ಖರ್ಚು, ಅಭಿವೃದ್ಧಿ, ಸಮಸ್ಯೆಗಳ ಕುರಿತು ಚರ್ಚೆ ಮಾಡಲಾಗುತ್ತದೆ.

ಮತ್ತೆ ಈ ಪ್ರಕರಣದಲ್ಲಿ 2023ರಿಂದ ಮುಜರಾಯಿ ಇಲಾಖೆಯ ಹಣಕಾಸಿನ ಕುರಿತು ಯಾವುದೇ ಪರಿಶೀಲನೆ ನಡೆದಿಲ್ಲವೇ..? ಇದರ ಲೋಪ ಯಾರದ್ದು..? ಎಂಬ ಪ್ರಶ್ನೆ ಸಾರ್ವಜನಿಕರದ್ದಾಗಿದೆ.

ಮುಚ್ಚಿಡಲು ಯತ್ನ..?

ಇನ್ನೂ ಈ ಪ್ರಕರಣ ಸಾರ್ವಜನಿಕರಿಗೆ ತಿಳಿಯಬಾರದೆಂದು, ಮಾಹಿತಿ ಮಾಧ್ಯಮಗಳಿಗೆ ಸೋರಿಕೆಯಾಗದಂತೆ ತಡೆಯಲು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬಹುಳಷ್ಟು ಒತ್ತಡ ಹೇರಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿದೆ‌.

ವಿವಿಧ ಆಯಾಮಾಗಳಲ್ಲಿ ತನಿಖೆ

ಸರ್ಕಾರಿ ಇಲಾಖೆಯ ಲಕ್ಷಾಂತರ ಹಣ ದುರ್ಬಳಕೆ ಕುರಿತು ವಸ್ತು ನಿಷ್ಠ ತನಿಖೆ ಅಗತ್ಯವಿದೆ.

ಈ ಕುರಿತು ಕಟ್ಟುನಿಟ್ಟಿನ ಅಧಿಕಾರಿಯಾದ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿರಬಹುದಾದ ಅಧಿಕಾರಿಗಳನ್ನು ಪತ್ತೆಹಚ್ಚಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!