Construction of wire fence/compound for agricultural pond is mandatory

ವಿದ್ಯಾರ್ಥಿ ಸಾವಿನ ನಂತರ ಹೆಚ್ಚೆತ್ತ ಅಧಿಕಾರಿಗಳು; ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸುವಂತೆ ಮನವಿ

ಬೆಂ.ಗ್ರಾ.ಜಿಲ್ಲೆ: ಗೆಳೆಯರೊಂದಿಗೆ ತೋಟಕ್ಕೆ ತೆರಳಿದ ಬಾಲಕ ಕೃಷಿಹೊಂಡದಲ್ಲಿ (Krushi Honda) ಈಜಲು ಹೋಗಿ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಇದೇ ತಿಂಗಳ 15 ರಂದು ದೊಡ್ಡಬಳ್ಳಾಪುರ ತಾಲೂಕಿನ ಗಂಟಿಗಾನಹಳ್ಳಿ ಹೊರವಲಯದಲ್ಲಿ ನಡೆದಿದೆ

ಮೃತ ಬಾಲಕನನ್ನು ತೂಬಗೆರೆ ನಿವಾಸಿ ವೀರಾಜು ಅವರ ಪುತ್ರ 14 ವರ್ಷದ ನಾಗೇಶ್ ಎಂದು ಗುರುತಿಸಲಾಗಿದೆ.

ಮೃತನನ್ನು ತೂಬಗೆರೆಯ ಸರ್ಕಾರಿ ಶಾಲೆಯಲ್ಲಿ 09 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಹೆಚ್ಚೆತ್ತ ಕೃಷಿ ಇಲಾಖೆ ಅಧಿಕಾರಿಗಳು

ಈ ಘಟನೆ ಬೆನ್ನಲ್ಲೇ ಹೆಚ್ಚೆತ್ತಿರುವ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ಹೊಂಡದ ಬಳಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ರೈತರಿಗೆ ಮನವಿ ಮಾಡಿದ್ದಾರೆ‌.

ಈ ಕುರಿತು ಪ್ರಕಟಣೆ ನೀಡಿದ್ದು, ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಕೃಷಿ ಇಲಾಖೆ ರೈತರಲ್ಲಿ ಮನವಿ ಮಾಡಿದೆ.

ಕೃಷಿ ಇಲಾಖೆಯ ಬಹುಪಯೋಗಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು 2014-15 ನೇ ಸಾಲಿನಿಂದ ಅನುಷ್ಟಾನ ಮಾಡಲಾಗಿರುತ್ತದೆ.

ಬೇಸಾಯ ಮಾಡುವ ರೈತರಿಗೆ ನೀರಿನ ಸಂಗ್ರಹಣೆಗಾಗಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಲಾಗಿರುತ್ತದೆ. ತದನಂತರ ತೋಟಗಾರಿಕಾ/ನರೇಗಾ ಯೋಜನೆಯಡಿ ಕೂಡ ಕೃಷಿ ಹೊಂಡಗಳ ನಿರ್ಮಾಣವಾಗಿರುತ್ತವೆ.

ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಅಳವಡಿಸದೆ ಇರುವದರಿಂದ ಕೃಷಿ ಹೊಂಡಗಳಲ್ಲಿ ಜೀವ ಹಾನಿಯಾಗುತ್ತಿರುವ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ರೈತರಲ್ಲಿ ಅರಿವು ಮೂಡಿಸುವ ಕ್ರಮವನ್ನು ಕೈಗೊಳ್ಳಲಾಗಿದೆ.

ಕೃಷಿ ಹೊಂಡದ ಸುತ್ತಲು ತಂತಿ ಬೇಲಿ / ನೆರಳು ಪರದೆ / ತಮ್ಮಲ್ಲಿ ಲಭ್ಯವಿರುವ ಸಂಪನ್ಮೂಲಗಳಿಂದ ಬೇಲಿ ಆಳವಡಿಸುವುದು ಕಡ್ಡಾಯವಾಗಿರುತ್ತದೆ. ಕೃಷಿ ಹೊಂಡದ ಮುಂದೆ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕವನ್ನು ಕಡ್ಡಾಯವಾಗಿ ಹಾಕಲು ಈ ಮೂಲಕ ತಿಳಿಸಿದೆ.

ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮವಾಗಿ ಹಗ್ಗದೊಂದಿಗೆ ಟ್ಯೂಬ್‌ಗಳನ್ನು ನಾಲ್ಕೂ ಮೂಲೆಗಳಲ್ಲಿ ಇಳಿ ಬಿಡಲು ತಿಳಿಸಿದೆ.

ಈ ನಿಟ್ಟಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು.

ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮಗಳನ್ನು ಆಳವಡಿಸಿ ಪ್ರಾಣ ಹಾನಿಯನ್ನು ತಪ್ಪಿಸಲು ಸಹಕರಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!