Darshan's open letter to fans

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕುರಿತು ಅಭಿಮಾನಿಗಳಿಗೆ ಮೊದಲೇ ತಿಳಿಸಿದ್ದರು.

ಆದಾಗ್ಯೂ ಅಭಿಮಾನಿಗಳು ದರ್ಶನ್ ಜನ್ಮ ದಿನ್ಮವನ್ನು ಅನ್ನದಾನ, ದಾನ, ಧರ್ಮ ಮೂಲಕ ಸಾರ್ಥಕವಾಗುವಂತೆ ಆಚರಸಿ ಸಂಭ್ರಮಿಸಿದ್ದಾರೆ.

ಫೆಬ್ರವರಿ 16 ರಂದು ರಾಜ್ಯದ ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ಕೂಡ ದರ್ಶನ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುವ ಬ್ಯಾನರ್ ಕಟ್ಟಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಅಭಿಮಾನಿಗಳಿಗೆ ಬಹುರಂಗ ಪತ್ರವನ್ನು ಬರೆದಿದ್ದಾರೆ. ಆ ಪತ್ರ ಈ ರೀತಿಯಲ್ಲಿದೆ.

ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾

ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.

ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾

ನಿಮ್ಮ ದಾಸ ದರ್ಶನ್ ಎಂದಿದ್ದಾರೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!