ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಈ ಕುರಿತು ಅಭಿಮಾನಿಗಳಿಗೆ ಮೊದಲೇ ತಿಳಿಸಿದ್ದರು.
ಆದಾಗ್ಯೂ ಅಭಿಮಾನಿಗಳು ದರ್ಶನ್ ಜನ್ಮ ದಿನ್ಮವನ್ನು ಅನ್ನದಾನ, ದಾನ, ಧರ್ಮ ಮೂಲಕ ಸಾರ್ಥಕವಾಗುವಂತೆ ಆಚರಸಿ ಸಂಭ್ರಮಿಸಿದ್ದಾರೆ.
ಫೆಬ್ರವರಿ 16 ರಂದು ರಾಜ್ಯದ ಚಿಕ್ಕ ಚಿಕ್ಕ ಹಳ್ಳಿಗಳಲ್ಲಿ ಕೂಡ ದರ್ಶನ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುವ ಬ್ಯಾನರ್ ಕಟ್ಟಿ ಅಭಿಮಾನಿಗಳು ನೆಚ್ಚಿನ ನಟನ ಜನ್ಮದಿನವನ್ನು ಸಂಭ್ರಮಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅವರು ಅಭಿಮಾನಿಗಳಿಗೆ ಬಹುರಂಗ ಪತ್ರವನ್ನು ಬರೆದಿದ್ದಾರೆ. ಆ ಪತ್ರ ಈ ರೀತಿಯಲ್ಲಿದೆ.
ಪ್ರೀತಿಯ ಸೆಲೆಬ್ರಿಟಿಸ್ ಗಳೇ 🙏🏾
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ.
ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ.
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ 🙏🏾
ನಿಮ್ಮ ದಾಸ ದರ್ಶನ್ ಎಂದಿದ್ದಾರೆ.