Dr. BR Ambedkar's knowledge and study made the Constitution of India great

ಭಾರತದ ಸಂವಿಧಾನ ಶ್ರೇಷ್ಠವಾಗಲು ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಮತ್ತು ಅಧ್ಯಯನ ಕಾರಣ; ಉಪನ್ಯಾಸಕ ಎನ್.ಮಹೇಶ್

ದೊಡ್ಡಬಳ್ಳಾಪುರ (Doddaballapura); ಭಾರತದ ಸಂವಿಧಾನ ಶ್ರೇಷ್ಠವಾಗಲು ಡಾ.ಬಿ.ಆರ್.ಅಂಬೇಡ್ಕರ್ ಅವರ  ಅಪಾರ ಜ್ಞಾನ ಮತ್ತು ಅಧ್ಯಯನ ಕಾರಣವಾಗಿದೆ‌ ಎಂದು ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎನ್.ಮಹೇಶ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು  ಭಾರತೀಯ ಮಹಿಳೆಯರಿಗೆ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು  ಸಂವಿಧಾನಾತ್ಮಕವಾಗಿ ದೊರಕಿಸಿ ಕೊಟ್ಟವರು. ಮಹಿಳೆಯರ ಹಕ್ಕುಗಳಿಗಾಗಿ ತಮ್ಮ ಕಾನೂನು ಮಂತ್ರಿಯ ಪದವಿಗೆ ರಾಜೀನಾಮೆಯನ್ನು ನೀಡಿದವರು ಎಂದರು.

ಡಾ. ಬಿ.ಆರ್.ಅಂಬೇಡ್ಕರ್‌ ಅವರು  ಮಹಿಳಾ ಪರವಾದ ಹಿಂದೂ ಕೋಡ್‌ಬಿಲ್, ಮಹಿಳಾ ಕಾರ್ಮಿಕರ ಕಲ್ಯಾಣ, ಸಮಾನ ವೇತನ, ತಾಯ್ತನದ ಸೌಲಭ್ಯ, ಮಹಿಳಾ ಶಿಕ್ಷಣ ಮುಂತಾದ ಹಕ್ಕುಗಳನ್ನು ದೊರೆಯುವಂತೆ ಮಾಡಲು ಶ್ರಮಿಸಿದರು. ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳ್ಳಬೇಕು ಎಂಬ ವಿಚಾರಗಳನ್ನು ಅಂಬೇಡ್ಕರ್ ಅವರು ಪ್ರಬಲವಾಗಿ ಪ್ರತಿಪಾದಿಸಿದ್ದರು.

ಮಹಿಳೆಯರ ಹಲವು ವಿಚಾರಗಳನ್ನು ಅಂಬೇಡ್ಕರ್ ಅವರ ಬರಹ ಮತ್ತು ಭಾಷಣಗಳಲ್ಲಿ ನಾವು ಕಾಣಬಹುದಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುತ್ತವೆ.   ಸಾಮಾಜಿಕ ನ್ಯಾಯವನ್ನು ಜಾರಿ ಮಾಡುವ ಸಲುವಾಗಿ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ‌ಅಂಶಗಳನ್ನು‌     ಅಳವಡಿಸಿದರು.

ಸಮಸಮಾಜ ನಿರ್ಮಾಣವೇ ಅಂಬೇಡ್ಕರ್ ಅವರ ಮುಖ್ಯ ಗುರಿಯಾಗಿತ್ತು. ವಿಶ್ವದಲ್ಲಿ ನಮ್ಮ ಭಾರತ ದೇಶಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ಲಭಿಸುತ್ತಿರುವುದೇ ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿ,
ಡಾ.ಅಂಬೇಡ್ಕರ್ ಅವರ ಚಿಂತನೆಗಳು, ಬರಹ ಭಾಷಣಗಳು, ಜೀವನ ಚರಿತ್ರೆ  ಎಲ್ಲರಿಗೂ ಸುಲಭವಾಗಿ ತಲುಪುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮ ನಡೆಯುತ್ತಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮಗಳನ್ನು   ಜಿಲ್ಲೆಯ ಕಾಲೇಜುಗಳಲ್ಲಿ ನಡೆಸುತ್ತಿದೆ. 

ವಿಶೇಷ ಉಪನ್ಯಾಸಗಳ ಜೊತೆಗೆ   ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳನ್ನು ನಡೆಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ರಾಧಾಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀನಿವಾಸ್, ರವಿ ಮುಂತಾದವರು ಭಾಗವಹಿಸಿದ್ದರು. 

ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅಂಗವಾಗಿ ನಡೆದ ರಸಪ್ರಶ್ನೆ, ಪ್ರಬಂಧ, ಭಾಷಣ ಮತ್ತು ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ   ಬಹುಮಾನ ವಿತರಣೆ ನಡೆಯಿತು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!