Daily story: Victory

ಹರಿತಲೇಖನಿ ದಿನಕ್ಕೊಂದು ಕಥೆ: ಗೆಲುವು

Daily story: ಸಣ್ಣ ದೇಶಕ್ಕೆ ಒಬ್ಬ ಒಳ್ಳೆಯ ದೊರೆಯಿದ್ದ. ಅವನೆಂದಿಗೂ ಸಿಂಹಾಸನದ ಮೇಲೆ ಕುಳಿತು ರಾಜ್ಯಭಾರ ಮಾಡಲಿಲ್ಲ. ಬದಲಾಗಿ ನೊಂದವರ ಬಳಿಗೆ ಹೋಗಿ ಕಣ್ಣೀರೊರೆಸಿದ.

ಸೋತವರಿಗೆ ನೆರವು ನೀಡಿದ. ಅಸಹಾಯಕರ ಸೇವೆ ಮಾಡಿದ. ಎಲ್ಲರೂ ತನ್ನ ಸಮಾನರೆಂದು ತಿಳಿದ. ಪ್ರಜೆಗಳು ತಮ್ಮ ಪ್ರಾಣಕ್ಕಿಂತ ಹೆಚ್ಚಾಗಿ ಅವನ ಮೇಲೆ ಪ್ರೀತಿಯಿಟ್ಟರು.

ಒಂದು ಸಲ ಚಕ್ರವರ್ತಿ ಆ ದೇಶದ ಬಳಿಗೆ ಕಾರ್ಯ ನಿಮಿತ್ತ ಬಂದ. ತನ್ನನ್ನು ಭೇಟಿಯಾಗುವಂತೆ ದೊರೆಗೆ ಭಟರ ಮೂಲಕ ಕರೆ ಕಳುಹಿಸಿದ.

ಆಗ ದೊರೆ ಒಬ್ಬ ರೋಗಿಷ್ಠನ ಮನೆಗೆ ಬಂದು ಅವನ ಶುಶ್ರೂಷೆ ಮಾಡುವುದರಲ್ಲಿ ನಿರತನಾಗಿದ್ದ. ಭಟರು ‘ಕೂಡಲೇ ಬಂದು ಭೇಟಿಯಾಗಬೇಕೆಂದು ಚಕ್ರವರ್ತಿಗಳು ಕರೆ ಕಳುಹಿಸಿದ್ದಾರೆ ಬನ್ನಿ’ ಎಂದರು.

ದೊರೆ ವಿನೀತನಾಗಿ ‘ಕಷ್ಟದಲ್ಲಿರುವ ಪ್ರಜೆಯೊಬ್ಬನಿಗೆ ನೆರವಾಗುವ ಕೆಲಸದಲ್ಲಿದ್ದೇನೆ. ಇದು ಮುಗಿದ ಕೂಡಲೇ ಬರುವುದಾಗಿ ಹೇಳಿ’ ಎಂದು ತಿಳಿಸಿದ.

ಈ ಮಾತಿನಿಂದ ಚಕ್ರವರ್ತಿಗೆ ಅಸಾಧ್ಯ ಕೋಪ ಬಂತು. ‘ಏನಿದು? ಒಬ್ಬ ಸಣ್ಣ ರಾಜನಿಗೆ ಚಕ್ರವರ್ತಿಯ ಆಜ್ಞೆಯನ್ನು ಧಿಕ್ಕರಿಸುವಂಥ ಪೊಗರೇ? ತಕ್ಷ ಣ ಈ ರಾಜ್ಯದ ಮೇಲೆ ಯುದ್ಧ ಸಾರಿ. ಅವನನ್ನು ಸದೆ ಬಡಿಯಿರಿ’ ಎಂದು ಮಂತ್ರಿಗಳಿಗೆ ಆಜ್ಞಾಪಿಸಿದ.

ದೊರೆಗೆ ಯುದ್ಧದ ವರ್ತಮಾನ ತಲುಪಿತು. ಮಂತ್ರಿಗಳು ಯುದ್ಧದ ಸಿದ್ಧತೆಗೆ ಮುಂದಾದರು. ಆದರೆ ದೊರೆ ಒಪ್ಪಲಿಲ್ಲ. ‘ಯುದ್ಧ ಮಾಡಿದರೆ ನೂರಾರು ಮಂದಿಯ ಸಾವು ನಿಶ್ಚಿತ. ಅದರ ಬದಲು ರಾಜ್ಯವನ್ನು ಚಕ್ರವರ್ತಿಗೆ ಒಪ್ಪಿಸಿದರೆ ಎಲ್ಲರೂ ಬದುಕುತ್ತಾರೆ’ ಎಂದು ನಿರ್ಧರಿಸಿ ಚಕ್ರವರ್ತಿಯ ಭೇಟಿಗೆ ಸಿದ್ಧನಾದ.

ದೊರೆ ಒಬ್ಬ ಸೇವಕನ ಜೊತೆಗೆ ಕುದುರೆಯ ಮೇಲೆ ಕುಳಿತುಕೊಂಡು ಚಕ್ರವರ್ತಿಯ ಬಳಿಗೆ ಹೊರಟ. ಕಡು ಬಿಸಿಲಿಗೆ ಕಾಲು ಸುಡುತ್ತಿತ್ತು.

ತಾನು ಕುದುರೆಯ ಮೇಲೆ ಸಾಗುವಾಗ ಸೇವಕ ಕುದುರೆಯ ಹಗ್ಗ ಹಿಡಿದುಕೊಂಡು ನಡೆದು ಬರುತ್ತಿದ್ದ. ಅವನು ನಡೆಯಲಾಗದೆ ಕಷ್ಟಪಡುತ್ತಿದ್ದ. ಅವನಿಗೆ ಆಯಾಸವಾಗುತ್ತಿದೆಯೆಂದು ದೊರೆಗೆ ಅರ್ಥವಾಯಿತು.

ಕುದುರೆಯ ಮೇಲಿಂದ ಕೆಳಗಿಳಿದ. ಸೇವಕನನ್ನು ಕರೆದು ‘ನೀನು ತುಂಬ ಬಳಲಿದ್ದಿ. ನೀನೀಗ ಕುದುರೆ ಮೇಲೆ ಕುಳಿತುಕೋ. ನಾನು ಸ್ವಲ್ಪ ದೂರ ಹಗ್ಗ ಹಿಡಿದುಕೊಂಡು ನಡೆದು ಬರುತ್ತೇನೆ.

ನಿನ್ನ ಬಳಲಿಕೆ ತೀರಿದ ಮೇಲೆ ನಾನು ಕುಳಿತುಕೊಳ್ಳುತ್ತೇನೆ. ನಾವಿಬ್ಬರೂ ಹೀಗೆ ಸರದಿ ಬದಲಾಯಿಸಿಕೊಂಡು ಮುಂದೆ ಸಾಗೋಣ’ ಎಂದ.

ಸೇವಕ ಗಾಬರಿಯಿಂದ ‘ಎಲ್ಲಾದರೂ ಉಂಟೇ? ನೀವು ನಡೆದು ನಾನು ಕುದುರೆಯ ಮೇಲೇರುವುದೆ!’ ಎಂದು ದೂರ ನಿಂತ. ಆದರೆ ದೊರೆ ಒತ್ತಾಯದಿಂದ ಅವನನ್ನೂ ಕುದುರೆಯಲ್ಲಿ ಕೂಡಿಸಿ ಮುಂದೆ ಸಾಗಿದ.

ಒಮ್ಮೆ ಸೇವಕ, ಒಮ್ಮೆ ತಾನು ಕುದುರೆಯ ಮೇಲೇರುತ್ತ ಕಡೆಗೂ ಚಕ್ರವರ್ತಿಯ ಶಿಬಿರ ತಲಪಿದ. ಆಗ ಸೇವಕ ಕುದುರೆಯ ಮೇಲಿದ್ದ. ಅವನನ್ನೇ ದೊರೆಯೆಂದು ಭಾವಿಸಿ ಮಾತನಾಡಿಸಲು ಬಂದ ಚಕ್ರವರ್ತಿಯ ಬಳಿ ಸೇವಕ ಕುದುರೆಯಿಂದ ಕೆಳಗಿಳಿದು ಕೈ ಜೋಡಿಸಿ ‘ದೊರೆಗಳು ಅವರು! ನಾನು ಸೇವಕ’ ಎಂದು ವಿನಯದಿಂದ ಹೇಳಿದ.

ಚಕ್ರವರ್ತಿ ನಡೆದ ವಿಷಯ ತಿಳಿದುಕೊಂಡ. ಮರುಕ್ಷ ಣವೇ ಪಶ್ಚಾತ್ತಾಪದಿಂದ ತಲೆ ತಗ್ಗಿಸಿದ. ‘ಛೇ! ಸೇವಕನನ್ನೂ ತನ್ನ ಸಮಾನನೆಂದು ಭಾವಿಸಿ ಕುದುರೆಯ ಮೇಲೆ ಕರೆ ತರುವ ದೊರೆ ಈ ಭರತಖಂಡದಲ್ಲೇ ಇರಲಿಕ್ಕಿಲ್ಲ.

ಇಂತಹವನೊಂದಿಗೆ ಯುದ್ಧವೆಸಗಿದರೆ ಪ್ರಜೆಗಳು ದಂಗೆಯೆದ್ದು ನನ್ನನ್ನೇ ಕೊಂದಾರು. ಋುಷಿ ಸದೃಶನಾದ ದೊರೆಯ ರಾಜ್ಯವನ್ನು ಸ್ವತಂತ್ರಗೊಳಿಸುತ್ತೇನೆ’ ಎಂದ ಹೇಳಿದ.

ಕೃಪೆ: ಸಾಮಾಜಿಕ ಜಾಲತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!