Doddaballapura: Pisces for early establishment of Kongadiyappa Putthali.. Warning of protest

Doddaballapura: ಕೊಂಗಾಡಿಯಪ್ಪ ಪುತ್ಥಳಿ ಸ್ಥಾಪನೆಗೆ ಮೀನಾಮೇಷ.. ಪ್ರತಿಭಟನೆಯ ವಾರ್ನಿಂಗ್

ದೊಡ್ಡಬಳ್ಳಾಪುರ (Doddaballapura): ದೊಡ್ಡಬಳ್ಳಾಪುರದ ಅಭಿವೃದ್ದಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪನವರ ಕೊಡುಗೆ ಅಪಾರವಾಗಿದ್ದು, ಅವರ ನಿಸ್ವಾರ್ಥ ಸೇವೆ, ಶ್ರಮದಿಂದಾಗಿ ಇಂದು ದೊಡ್ಡಬಳ್ಳಾಪುರ ರಾಜ್ಯದಲ್ಲಿಯೇ ಹೆಸರುವಾಸಿಯಾಗಲು ಕಾರಣವಾಗಿದೆ. ಇಂತಹ ಮಹನೀಯರ ಪುತ್ಥಳಿಯನ್ನು ನಗರಸಭೆ ಕಾರ್ಯಾಲಯದ ಮುಂಭಾಗ ಸ್ಥಾಪಿಸಲು ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ದೇವಾಂಗ ಮಂಡಲಿ ಮುಖಂಡರು ಎಚ್ಚರಿಕೆ ನೀಡಿದರು.

ಲೋಕಸೇವಾನಿರತ ಡಿ.ಕೊಂಗಾಡಿಯಪ್ಪನವರ 165ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಮುಖ್ಯರಸ್ತೆಯ ಮಾರುಕಟ್ಟೆ ಶಾಲೆಯ ಮುಂಭಾಗದಲ್ಲಿನ ಕೊಂಗಾಡಿಯಪ್ಪನವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಮುಖಂಡರು, ನೇಕಾರಿಕೆಯಲ್ಲಿ ಪ್ರಸಿದ್ದವಾಗಿರುವ ದೊಡ್ಡಬಳ್ಳಾಪುರಕ್ಕೆ ಹೆಸರು ಬರಲು ಕೊಂಗಾಡಿಯಪ್ಪನವರ ಪರಿಶ್ರಮ ಕಾರಣವಾಗಿದೆ. ಇಂತಹ ಮಹನೀಯರ ನಿಂತಿರುವ ಭಂಗಿಯ ಪುತ್ಥಳಿಯನ್ನು ಸ್ಥಾಪಿಸಲು ಹಲವಾರು ಒತ್ತಾಯಗಳನ್ನು ಮಾಡಲಾಗಿದೆ. ಆದರೆ ಫಲಪ್ರದವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ.

ಕೊಂಗಾಡಿಯಪ್ಪನವರ ಪರಿಶ್ರಮದಿಂದಾಗಿ ನಮ್ಮ ಊರಿನಲ್ಲಿ ಅಂದಿನ ಕಾಲದಲ್ಲಿಯೇ ವಿದ್ಯುತ್, ಕೊಳವೆ ಬಾವಿ, ಪ್ರೌಢಶಾಲೆ, ಆಸ್ಪತ್ರೆ, ಪಶು ವೈದ್ಯಶಾಲೆ, ಕೈಮಗ್ಗ ಮತ್ತು ಗೃಹ ಕೈಗಾರಿಕಾ ತರಬೇತಿ ಕೇಂದ್ರಗಳು ಸ್ಥಾಪನೆಯಾಗಿದ್ದವು. ಅಧಿಕಾರಿಗಳ ಬಳಿಗೆ ತೆರಳಿ ಊರಿಗೆ ಆಗಬೇಕಾದ ಕೆಲಸಗಳನ್ನು ನಿವೇದನೆ ಮಾಡಿ ಆಗುವವರೆಗೂ ಬೆಂಬಿಡದೇ ಮಾಡಿಸುತ್ತಿದ್ದರು.

ಕೊಂಗಾಡಿಯಪ್ಪನವರು ಊರಿನ ಯಾವ ಸಮಸ್ಯೆಯನ್ನಾಗಲೀ ಬಗೆಹರಿಸಲು ದುಡಿಯುತ್ತಿದ್ದರು. ಶಿಕ್ಷಣ, ಪರಿಸರ, ಸಮಾಜ ಸೇವೆಗಳಿಗೆ ಒತ್ತು ನೀಡಿದ್ದ ಅವರ ಬದುಕು ಹಾಗೂ ಜೀವನ ಕ್ರಮ ಇಂದಿನ ಪೀಳಿಗೆಗೆ ತಿಳಿಯಬೇಕು ಎಂದರು.

ಈ ಸಂದರ್ಭದಲ್ಲಿ ದೇವಾಂಗ ಮಂಡಲಿ ಅಧ್ಯಕ್ಷ ಎಂ.ಜಿ.ಶ್ರೀನಿವಾಸ್, ಗೌರವ ಕಾರ್ಯದರ್ಶಿ ಎಂ.ಜಿ.ಅಮರನಾಥ್, ಉಪಾಧ್ಯಕ್ಷರಾದ ಬಿ.ಜಿ.ಅಮರನಾಥ್, ಪಿ.ಗೋಪಾಲ್, ಸಹ ಕಾರ್ಯದರ್ಶಿ ಎ.ನಟರಾಜ್, ಖಜಾಂಚಿ ಎಚ್.ವಿ.ಅಖಿಲೇಶ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಸೇರಿದಂತೆ ನಗರಸಭೆ ಸದಸ್ಯರು, ದೇವಾಂಗ ಮಂಡಲಿ ನಿರ್ದೇಶಕರು ಭಾಗವಹಿಸಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!