Karnataka has a great connection with Shivaji Maharaja: Basavaraja Bommai

ಕರ್ನಾಟಕಕ್ಕೂ ಶಿವಾಜಿ ಮಹಾರಾಜರಿಗೂ ಬಹಳ ಸಂಬಂಧ ಇದೆ: ಬಸವರಾಜ ಬೊಮ್ಮಾಯಿ

ಹಾವೇರಿ( ಶಿಗ್ಗಾವಿ): ಶಿವಾಜಿ ಮಹಾರಾಜರು ರಾಷ್ಟ್ರ ಭಕ್ತರು, ಅವರು ಯಾವುದೇ ಪ್ರದೇಶ, ಭಾಷೆಗೆ ಸೀಮಿತವಾದವರಲ್ಲ, ದೇಶ ಭಕ್ತರಿಗೆ ಜಾತಿ, ಮತ, ಪ್ರದೇಶದ ಮಿತಿ ಇರುವುದಿಲ್ಲ. ಶಿವಾಜಿ ಮಹಾರಾಜರು ಇದೆಲ್ಲವನ್ನೂ ಮೀರಿದವರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಸಮಾಜ ತಾಲೂಕ ಹಾಗೂ ಶಹರ ಘಟಕದ ವತಿಯಿಂದ ಏರ್ಪಡಿಸಿದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 398 ನೇಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕರ್ನಾಟಕಕ್ಕೂ ಶಿವಾಜಿ ಮಹಾರಾಜರಿಗೂ ಬಹಳ ಸಂಬಂಧ ಇದೆ: ಬಸವರಾಜ ಬೊಮ್ಮಾಯಿ

ಭಾರತ ದೇಶದಲ್ಲಿ ಹುಟ್ಟಿರುವ ನಾವೆಲ್ಲ ಪುಣ್ಯವಂತರು, ಯಾರು ಇತಿಹಾಸ ತಿಳಿಯುವರೋ ಅವರು ಭವಿಷ್ಯ ಬರೆಯುತ್ತಾರೆ. ಯಾರಿಗೆ ಇತಿಹಾಸ ಇಲ್ಲ ಅವರಿಗೆ ಭವಿಷ್ಯವಿಲ್ಲ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ನೋಡಿದಾಗ ಅವರು ಭಾರತ ಮಾತೆಯ ರಕ್ಷಣೆಗೆ ಹುಟ್ಟಿದ್ದರು.

ಭವಾನಿ ತಾಯಿ ಪ್ರತ್ಯಕ್ಷವಾಗಿ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರಿಗೆ ದಿವ್ಯ ಶಕ್ತಿ ಹಾಗೂ ದೈವಿ ಶಕ್ತಿ ಇತ್ತು. ಯಾರಿಗೆ ದೈವಿ ಶಕ್ತಿ ಇರುತ್ತದೆಯೋ ಅವರು ಜೀವನದಲ್ಲಿ ಇಡೀ ಜಗತ್ತನ್ನು ಎದುರು ಹಾಕಿಕೊಳ್ಳಲು ಸಿದ್ದರಿರುತ್ತಾರೆ ಎನ್ನುವುದಕ್ಕೆ ಶಿವಾಜಿ ಮಹಾರಾಜರು ಉದಾಹರಣೆ ಎಂದರು.

ನಾನು ಪುಣಾದ ಸಿಂಹಗಢಕ್ಕೆ ಭೇಟಿ ನೀಡಿದ್ದೆ ಶಿವಾಜಿ ಮಹಾರಾಜರ ಹೋರಾಟ ಅಲ್ಲಿಂದ ಪ್ರಾರಂಭವಾಗಿ ದೈತ್ಯ ಮೊಗಲ್ ಸಾಮ್ರಜ್ಯ ಎದುರಿಸಿದ್ದರು. ಮೊಗಲ್ ಸಾಮ್ರಾಜ್ಯ ಪರ್ಷಿಯಾದಿಂದ ಹಿಡಿದು ಭೂತಾನ್ ವರೆಗೂ ಇತ್ತು.

ಆಗ ದಕ್ಚಿಣದಲ್ಲಿ ಬಹುಮನಿ ಸಾಮ್ರಾಜ್ಯ ಇತ್ತು. ಅವರವರ ನಡುವೆ ಸಂಘರ್ಷವಾದಾಗ ಮೊಗಲರ ಕೈಮೇಲಾಯಿತು. ಅವರು ದಕ್ಚಿಣದಲ್ಲಿ ಸಾಮ್ರಜ್ಯ ವಿಸ್ತರಿಸಲು ತೀರ್ಮಾನಿಸಿದಾಗ ಅವರನ್ನು ಒಬ್ಬ ಯುವಕ ತಡೆಯುತ್ತಾನೆ ಎಂದು ಮೊಗಲರು ಎಂದೂ ಊಹಿಸಿರಲಿಲ್ಲ.

ಶಿವಾಜಿ ಮಹಾರಾಜರು ವಿನೂತನ ಯುದ್ದ ತಂತ್ರ ಅನುಸಿರಿಸಿ ಅವರು ವಿಂದ್ಯ ಪರ್ವತ, ನರ್ಮಾದಾ ನದಿ ಕೆಳಗೆ ಮೊಗಲರು ಬಾರದಂತೆ ನೋಡಿಕೊಂಡರು. ಆದ್ದರಿಂದ ಅವರಿಗೆ ದೊಡ್ಡ ಬೆಂಬಲ ಸಿಕ್ಕಿತ್ತು ಎಂದು ಹೇಳಿದರು.

ಕರ್ನಾಟಕಕ್ಕೂ ಸಂಬಂಧವಿದೆ

ಶಿವಾಜಿ ಮಹಾರಾಜರು ಕೇವಲ ಮಹಾರಾಷ್ಟ್ರಕ್ಕೆ ಸೀಮಿತವಾಗಿರಲಿಲ್ಲ. ಅವರ ಸಾಮ್ರಾಜ್ಯ ಕರ್ನಾಟಕ ಹಾಗೂ ತಮಿಳುನಾಡಿನ ತಂಜಾವೂರಿನವರೆಗೂ ವಿಸ್ತರಿಸಿದ್ದರು. ಕೆಲವೇ ಕೆಲವು ಜನರನ್ನು ಇಟ್ಟುಕೊಂಡು ಹೊರಾಟದ ಮುಖಾಂತರ ದೊಡ್ಡ ಸಾಮ್ರಾಜ್ಯ ಕಟ್ಟಿದರು.

ಕರ್ನಾಟಕಕ್ಕೂ ಶಿವಾಜಿ ಮಹಾರಾಜರಿಗೂ ಬಹಳ ಸಂಬಂಧ ಇದೆ. ಬೆಂಗಳೂರಿನಲ್ಲಿ ಅವರು ಇದ್ದದ್ದು. ಅವರ ಕುಟುಂಬದವರು ಇಲ್ಲಿ ಇದ್ದರು ಎನ್ನುವುದಕ್ಕೆ ಇತಿಹಾಸದಲ್ಲಿ ದಾಖಲೆ ಇದೆ ಎಂದರು.

ಶಿವಾಜಿಹಾಜರಾರು ರಾಷ್ಟ್ರ ಭಕ್ತರು, ಯಾವುದೇ ಪ್ರದೇಶ ಭಾಷೆಗೆ ಸೀಮಿತವಾದವರಲ್ಲ, ದೇಶ ಭಕ್ತರಿಗೆ ಜಾತಿ, ಮತಣ, ಪ್ರದೇಶದ ಮಿತಿ ಇರುವುದಿಲ್ಲ. ಶಿವಾಜಿ ಮಹಾರಾಜರು ಇದೆಲ್ಲವನ್ನು ಮೀರಿದವರು. ಈಗಲೂ ನಮ್ಮ ದೇಶಕ್ಕೆ ಹಲವಾರು ಕಂಟಕಗಳಿವೆ ಭಾರತವನ್ನು ಗುಲಾಮಗಿರಿಯಲ್ಲಿ ಇಡಬೇಕು ಎನ್ನುವ ಮನಸ್ಥಿತಿ ಇನ್ನೂ ಇದೆ. ಅದಕ್ಕೆ ನಮ್ಮ ಕೇಂದ್ರ ಸರ್ಕಾರ ಉತ್ತರ ಕೊಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರು ಗುಲಾಮಗಿರಿಯಿಂದ ಹೊರ ಬನ್ನಿ ಎಂದು ಹೇಳಿದ್ದಾರೆ. ಒಂದು ವರ್ಗ ಯಾವಾಗಲೂ ಗುಲಾಮಗಿರಿ‌ ಮನಸ್ಥಿತಿಯಲ್ಲಿದ್ದಾರೆ‌ ಎಂದರು.

ನಮ್ಮ ದೇಶದ ಅಖಂಡತೆಗೆ ಸಮಗ್ರತೆಗೆ ಶಿವಾಜಿ ಮಹಾರಾಜರು ಪ್ರೇರಣೆಯಾಗಿದ್ದಾರೆ. ಅವರ ಜಯಂತಿ ಆಚರಣೆ ಮಾಡುವ ಉದ್ದೇಶವೇ ಅದು. ನಮ್ಮ ದೇಶದ ಪರಂಪರೆ, ಸಂಸ್ಕೃತಿ, ಆಧ್ಯಾತ್ಮಿಕ ಚಿಂತನೆ, ಎಲ್ಲರನ್ನು ಒಳಗೊಳ್ಳುವ ಮಾನವೀಯತೆ, ಅನ್ಯಾಯದ ವಿರುದ್ದ ಹೋರಾಡುವ ಮನಸ್ಥಿತಿ ಶಿವಾಜಿ ಮಹಾರಾಜರಲ್ಲಿ ಏನಿತ್ತೊ ಅದು ನಮ್ಮನ್ನು ಈಗಲೂ ಕಾಪಾಡುತ್ತಿದೆ.

ಎಲ್ಲ ದೇಶಕ್ಕೂ ಒಂದು ಕುರುಹು, ಗುರುತು, ಸ್ವಭಿಮಾನದ ಸಂಕೇತ ಇರುತ್ತದೆ. ವಿವಿಧತೆಯಲ್ಲಿ ಏಕತೆಯಲ್ಲಿ ನಮ್ಮ ದೇಶದ ಶಕ್ತಿ ಇದೆ. ಆ ಶಕ್ತಿಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಲು ಶಿವಾಜಿ ಮಹಾರಾಜರು ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಚಂದ್ರಪ್ಪಜ್ಜ ಕಾಳೆ, ಸುಭಾಸ ಚವ್ಹಾಣ ಸೇರಿದಂತೆ ಮರಾಠ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಉತ್ತರ

ಆಯ್ತ್ ಆಯ್ತೂ.. ಏನು ಮಾಡಬೇಕೋ ಮಾಡುತ್ತೇವೆ; ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆಗೆ

"ಯಾರೇ ಆದರೂ ಕಾನೂನು ಕೈಗೆತ್ತಿಕೊಳ್ಳಲು ಆಗುವುದಿಲ್ಲ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಸದ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

[ccc_my_favorite_select_button post_id="119538"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!