Bad effect of greed!

ಹರಿತಲೇಖನಿ ದಿನಕ್ಕೊಂದು ಕಥೆ: ದುರಾಸೆಯ ದುಷ್ಪರಿಣಾಮ !

ಓರ್ವ ಭಿಕ್ಷುಕನಿದ್ದನು. ದೇವರ ಮೇಲೆ ಶ್ರದ್ಧೆ ಇದ್ದ ಕಾರಣ ಅವನು ದಿನಪೂರ್ತಿ ನಾಮಜಪ ಮಾಡುತ್ತಿದ್ದನು. ಭಗವಂತನು ಅವನ ನಾಮಜಪದಿಂದ ಪ್ರಸನ್ನನಾಗಿ ಒಂದು ದಿನ ಅವನೆದುರು ಪ್ರಕಟವಾದನು.

ಭಗವಂತನು ‘ನಾನು ನಿನ್ನ ನಾಮಜಪದಿಂದ ಬಹಳ ಪ್ರಸನ್ನನಾಗಿದ್ದೇನೆ, ನಿನಗೆ ಬೇಕಾದದ್ದನ್ನು ಕೇಳು’ ಎಂದು ಹೇಳಿದನು. ಆಗ ಭಿಕ್ಷುಕನು ದುರಾಸೆಯಿಂದ ಚಿನ್ನದ ನಾಣ್ಯಗಳನ್ನು ಕೇಳಿದನು. ಭಗವಂತನು ‘ಚಿನ್ನದ ನಾಣ್ಯಗಳನ್ನು ಯಾವ ಪಾತ್ರೆಯಲ್ಲಿ ತೆಗೆದುಕೊಳ್ಳುವೆ ?’ ಎಂದು ಕೇಳಿದಾಗ ಭಿಕ್ಷುಕನು ತನ್ನ ಅಂಗಿಯನ್ನು ಮುಂದೆಮಾಡಿದನು.

ಭಗವಂತನು ಚಿನ್ನದ ನಾಣ್ಯಗಳನ್ನು ಕೊಡುವ ಮೊದಲು ‘ಎಲ್ಲಿಯ ವರೆಗೆ ನೀನು ಚಿನ್ನದ ನಾಣ್ಯಗಳನ್ನು ಕೇಳುವುದು ಬಿಡುವುದಿಲ್ಲ ಅಲ್ಲಿಯ ವರೆಗೆ ನಾನು ನಿನ್ನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕುತ್ತಲೇ ಇರುವೆನು ಆದರೆ ಭೂಮಿಯ ಮೇಲೆ ಚಿನ್ನದ ನಾಣ್ಯಗಳು ಬೀಳಬಾರದು. ನೆಲದ ಮೇಲೆ ಬಿದ್ದರೆ ಈ ನಾಣ್ಯಗಳು ಮಣ್ಣಾಗುವವು’ ಎಂದು ಹೇಳಿದನು. ಭಿಕ್ಷುಕನು ಒಪ್ಪಿಕೊಂಡ.

ಭಗವಂತನು ಭಿಕ್ಷುಕನ ಅಂಗಿಯಲ್ಲಿ ಚಿನ್ನದ ನಾಣ್ಯಗಳನ್ನು ಹಾಕತೊಡಗಿದ. ಅಂಗಿಯು ತುಂಬುತ್ತ ಹೋಯಿತು ಹಾಗೂ ಭಿಕ್ಷುಕನ ದುರಾಸೆಯು ಹೆಚ್ಚುತ್ತ ಹೋಯಿತು. ಅವನು ‘ಸಾಕು’ ಎಂದು ಹೇಳಲಿಲ್ಲ, ದೇವರು ಕೊಡುವುದನ್ನು ನಿಲ್ಲಿಸಲಿಲ್ಲ. ಕೊನೆಯಲ್ಲಿ ಚಿನ್ನದ ನಾಣ್ಯಗಳ ಭಾರವನ್ನು ಆ ಅಂಗಿಯು ತಡೆದುಕೊಳ್ಳಲಿಲ್ಲ, ಅಂಗಿಯು ಹರಿದು ಹೋಯಿತು. ಇದರಿಂದ ಎಲ್ಲ ನಾಣ್ಯಗಳು ನೆಲದ ಮೇಲೆ ಬಿದ್ದು ಮಣ್ಣಾದವು.

ಮನಸ್ಸಿನಲ್ಲಿ ದುರಾಸೆ ಇರುವುದರಿಂದ ಇಷ್ಟೊಂದು ನಾಣ್ಯಗಳು ದೊರೆತರೂ ಭಿಕ್ಷುಕನು ಬಡವನಾಗಿಯೇ ಉಳಿದನು.

ಮಿತ್ರರೇ, ಈ ಕಥೆಯಿಂದ ಭಿಕ್ಷುಕನು ಎಲ್ಲಿ ತಪ್ಪಿದನು ಎಂಬುದು ತಮ್ಮ ಗಮನಕ್ಕೆ ಬಂದಿರಬಹುದು. ಅವನು ದುರಾಸೆ ಬಿಟ್ಟು, ಅವನ ಜೀವನಕ್ಕೆ ಬೇಕಾಗುವಷ್ಟು ನಾಣ್ಯಗಳಲ್ಲಿ ಸಂತುಷ್ಟನಾಗಿದ್ದರೆ ಅವನಿಗೆ ಅಷ್ಟೂ ಚಿನ್ನದ ನಾಣ್ಯಗಳು ದೊರೆಯುತ್ತಿದ್ದವು.

ಭಗವಂತನು ನೀಡಿದ್ದರಲ್ಲಿ ಸಂತೋಷದಿಂದ ಇರಬೇಕು. ದುರಾಸೆಯು ಬಹಳ ಕೆಟ್ಟದ್ದಾಗಿದೆ. ದುರಾಸೆಯಿಂದ ನಮಗೆ ಏನೂ ದೊರೆಯುವುದಿಲ್ಲ. ತಮಗೆ ಯಾವಾಗಲೂ ಆನಂದದಿಂದ ಇರಬೇಕಿದ್ದರೆ ಸಿಕ್ಕಿರುವುದರಲ್ಲಿ ಸಂತೋಷದಿಂದ ಇರಲು ಕಲಿಯಿರಿ.

ಕೃಪೆ; ಹಿಂದೂ ಜಾಗೃತಿ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!