Today Mahashivaratri.. Temples ready for celebration

ಇಂದು ಮಹಾಶಿವರಾತ್ರಿ.. ಅಚರಣೆಗೆ ಸಿದ್ದವಾಗಿರುವ ದೇವಾಲಯಗಳು

ದೊಡ್ಡಬಳ್ಳಾಪುರ: ಇಂದು ನಡೆಯಲಿರುವ ಮಹಾಶಿವರಾತ್ರಿ (Mahashivaratri) ಆಚರಣೆಗೆ ತಾಲೂಕಿನಲ್ಲಿ ಸಿದ್ದತೆಗಳು ನಡೆದಿವೆ.

ತಾಲೂಕಿನ ಹಲವಾರು ಶಿವನ ದೇವಾಲಯಗಳು ತನ್ನದೇ ಆದ ಐತಿಹಾಸಿಕ ಹಾಗು ಧಾರ್ಮಿಕ ಮಹತ್ವ ಹೊಂದಿದ್ದು, ಶಿವರಾತ್ರಿ ಹಬ್ಬಕ್ಕೆ ದೇವಾಲಯಗಳಲ್ಲಿ ವಿಶೇಷ ಸಿದ್ದತೆಗಳು ನಡೆದಿವೆ.

ನಗರದ ಬಸವ ಭವನ ಸಮೀಪದ ಸೋಮೇಶ್ವರ (ಸ್ವಯಂಭುಕೇಶ್ವರರ) ದೇವಸ್ಥಾನದಿಂದ ಪ್ರಯಾಣ ಪ್ರಾರಂಭಿಸಿದರೆ ರಾಜಘಟ್ಟ ಈಶ್ವರ ದೇವಸ್ಥಾನ, ಗಂಡರಾಜಪುರದ ಉಮಾಮಹೇಶ್ವರ, ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ, ತೂಬಗೆರೆ ಸಮೀಪದ ಕಾಶಿ ವಿಶ್ವೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ಸೇರಿದಂತೆ ತಾಲೂಕಿನ ವಿವಿಧ ಶಿವ ದೇವಾಲಯಗಳನ್ನು ಸ್ಮರಿಸಬಹುದಾಗಿದೆ.

ಶಿವರಾತ್ರಿ ಹಬ್ಬದ ಜಾಗರಣೆ ಅಂಗವಾಗಿ ಭಜನೆ, ಸಂಗೀತ ಕಛೇರಿ, ಪೌರಾಣಿಕ ನಾಟಕ, ಹಾಸ್ಯೋತ್ಸವ ಕಾರ್‍ಯಕ್ರಮಗಳು ವಿವಿದೆಡೆಗಳಲ್ಲಿ ಆಯೋಜನೆ ಮಾಡಲಾಗಿದೆ.

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಂಪುರ ಸಮೀಪದ ತೋಪನಯ್ಯಸ್ವಾಮಿ (ಶಿವ) ದೇವಸ್ಥಾನದ ಬಳಿ ಬಿಲ್ವಪತ್ರೆಯ ವನವಿದೆ. ಶಿವರಾತ್ರಿಯಂದು ಇಲ್ಲಿ ಪ್ರತಿ ವರ್ಷ ವಿಶೇಷ ಪೂಜಾ ಕಾರ್‍ಯಗಳು ನಡೆಯುತ್ತದೆ.

ಹುಲುಕುಡಿ ಬೆಟ್ಟದ ಮೇಲೆ ಚೋಳರ ಕಾಲದಲ್ಲಿ ಸ್ಥಾಪನೆಯಾಗಿದ್ದು ಎನ್ನಲಾಗುವ ವೀರಭದ್ರಸ್ವಾಮಿ ದೇವಾಲಯವಿದೆ.

ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಗುಹೆಯಲ್ಲಿ ಮುಕ್ಕಣ್ಣೇಶ್ವರಸ್ವಾಮಿಯ ಶಿವಲಿಂಗ ಮೂರ್ತಿ ಇದೆ. ಕಾರ್ತಿಕ ಮಾಸ ಹಾಗೂ ಶಿವರಾತ್ರಿ ಹಬ್ಬದಂದು ಮಾಕಳಿ ಬೆಟ್ಟಕ್ಕೆ ಹತ್ತಿ ಕಾಡು ಮಲ್ಲೇಶ್ವರಸ್ವಾಮಿ ರ‍್ಶನ ಪಡೆಯುವುದರೆಂದರೆ ಕೈಲಾಸ ರ‍್ವತ ಹತ್ತಿದಷ್ಟೇ ಪುಣ್ಯ ಎನ್ನುವುದು ಜನರ ಭಾವನೆ.

ತಾಲೂಕಿನಲ್ಲಿರುವ ಶ್ರವಣೂರು ಗ್ರಾಮದ ನೀಲಕಂಠೇಶ್ವರ ದೇವಾಲಯ ಶತಮಾನದಷ್ಟೇ ಹಿಂದಿನದಾಗಿದೆ. ಹೊಸಹಳ್ಳಿಯ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯ ಇತ್ತೀಚೆಗಷ್ಟೆ ನವೀಕೃತಗೊಂಡು ಶಿವರಾತ್ರಿ ಪೂಜೆಗೆ ಸಜ್ಜಾಗಿದೆ.

ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಗ್ರಾಮಗಳಾದ ಮಾಡೇಶ್ವರ, ಬೈರಾಪುರ, ಮಾಕಳಿ ಬೆಟ್ಟ, ರಾಜಘಟ್ಟ, ತೂಬಗೆರೆ, ಶ್ರವಣೂರು, ಅಂಬಲಗೆರೆ, ಯಲಾದಹಳ್ಳಿ, ರ‍್ಗಾಜೋಗಹಳ್ಳಿ, ಇಸ್ತೂರು, ಹಣಬೆ ಹಾಗೂ ನಗರದಲ್ಲಿನ ನಗರೇಶ್ವರ, ಬಸವಣ್ಣ, ಬೈರಾಪುರ ಗ್ರಾಮದಲ್ಲಿನ ಶ್ರೀಕಂಠೇಶ್ವರ ದೇವಾಲಯ, ಸೋಮೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ದೇವಾಲಯಗಳಲ್ಲಿ ಶಿವಲಿಂಗ ಮೂರ್ತಿಗಳು ಶಿವಭಕ್ತರ ಆರಾಧ್ಯ ದೈವಗಳಾಗಿದ್ದು, ಶಿವರಾತ್ರಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆಯಲಿವೆ.

ಮಾಡೇಶ್ವರ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ವಿಶೇಷ :
ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಮಾಡೇಶ್ವರ ಗ್ರಾಮದ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ಶ್ರೀ ಮುಕ್ಕಣ್ಣೇಶ್ವರ ಜರ‍್ಣೋದ್ಧಾರ ಮತ್ತು ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ದೇವಾಲಯಕ್ಕೆ 1500 ವರ್ಷಗಳ ಇತಿಹಾಸವಿದೆ. ದೇವಾಲಯದ ಹಿಂದಿನ ಗುಹೆಯಲ್ಲಿ 1156ರಲ್ಲಿ ಕೆತ್ತಿರುವ ಶಿಲಾಶಾಸನವಿದೆ. ದೇವಾಲಯದಲ್ಲಿ ಶಿವರಾತ್ರಿ ಹಾಗೂ ಕಾರ್ತಿಕ ಮಾಸಗಳಲ್ಲಿ ವಿಶೇಷ ಅಲಂಕಾರ ಪೂಜಾ ಕಾರ್‍ಯಗಳು ನಡೆಯಲಿದ್ದು, ಇಂದು ಬೆಳಿಗ್ಗೆ 8ಗಂಟೆಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನ ಸಂರ‍್ಪಣೆ, ರಾತ್ರಿ 8.30ರಿಂದ ಅಖಂಡ ಭಜನಾ ಕಾರ್‍ಯಕ್ರಮಗಳಿವೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!