Daily story: Humble lamp

ಹರಿತಲೇಖನಿ ದಿನಕ್ಕೊಂದು: ವಿನಮ್ರ ಹಣತೆ

Daily story: ಬೆಳಕಿನ ವಿಚಾರದಲ್ಲಿನಾನೇ ಶ್ರೇಷ್ಠ, ನಾನೇ ಶ್ರೇಷ್ಠ’ ಅನ್ನುವ ತರ್ಕಗಳು ದಿನೇ ದಿನೇ ದೇವಲೋಕಕ್ಕೆ ಬರತೊಡಗಿದವು. ಸೂರ್ಯ, ಚಂದ್ರ, ನಕ್ಷತ್ರಗಳು ಪ್ರತಿನಿತ್ಯ ಇದೇ ವಿಷಯದ ಬಗ್ಗೆ ಸಂಬಂಧಿಸಿದವರ ಮೂಲಕ ತಮ್ಮನ್ನೇ ಶ್ರೇಷ್ಠರೆಂದು ಗುರುತಿಸಬೇಕು’ ಅನ್ನುವ ಬಲವಂತ ಹೇರತೊಡಗಿದವು.

ಯಾರನ್ನು ತಾನು ಶ್ರೇಷ್ಠನೆಂದು ಗುರುತಿಸಬೇಕೆಂದು ಬ್ರಹ್ಮನಿಗೆ ಗಲಿಬಿಲಿಯುಂಟಾಯಿತು. ಈ ವಿಚಾರದಲ್ಲಿಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿ ತುರ್ತು ಸಭೆ ಕರೆದನು.

ಸಭೆಗೆ ಇಂದ್ರಾದಿಗಳು ಸೇರಿದಂತೆ ಎಲ್ಲಾದೇವತೆಗಳು ಹಾಜರಿದ್ದರು. ಸೂರ್ಯ, ಚಂದ್ರ ಹೀಗೆ ಯಾರಾರ‍ಯರು ಸ್ಪರ್ಧೆಯಲ್ಲಿಇದ್ದರೋ ಅವರಿಗೆಲ್ಲಾಕರೆ ಹೊಯಿತು. ಎಲ್ಲರೂ ಬಂದು ಸೇರಿದಾಗ ಸಭೆ ಆರಂಭವಾಯಿತು.

ಭೂಮಿ ಕಡೆಯಿಂದ ಮಿಂಚುಹುಳ ಸ್ಪರ್ಧೆಗೆ ಹೋಗಿತ್ತು. ಭೂಮಿಯಲ್ಲಿಬೆಳಕಿಗೆ ಪ್ರತಿನಿಧಿ ನೀನು ಒಬ್ಬನೇನಾ, ಮತ್ಯಾರು ಇಲ್ಲವೇ ಹಣತೆ ಯಾಕೆ ಬಂದಿಲ್ಲಅಂತ ಸಭೆಯಲ್ಲಿಕೇಳಲಾಯಿತು. ಆಗ ಮಿಂಚುಹುಳವು ಹಣತೆಯನ್ನು ನಾನು ಕರೆದೆ. ಆದರೆ ಹಣತೆ ನಾನು ಸ್ಪರ್ಧಿಸಲು ಸೂಕ್ತವಾದವನೊ, ಇಲ್ಲವೊ ಗೊತ್ತಿಲ್ಲ. ನೀವು ಹೋಗಿ ಬನ್ನಿ’ ಅಂತ ಹೇಳಿ ಕಳಿಸಿತು ಎಂದಿತು.

ಬ್ರಹ್ಮನಿಗೆ ಈ ಸಭೆಯಲ್ಲಿ ಹಣತೆ ಇರುವುದು ಸೂಕ್ತವೆನ್ನಿಸಿ ತುರ್ತಾಗಿ ಅದನ್ನು ಕರೆಯಿಸಿತು. ಸಭೆಯಲ್ಲಿಮೊದಲು ವಾದಿಸುವ ಮತ್ತು ಹಕ್ಕು ಮಂಡಿಸುವ ಅಧಿಕಾರವನ್ನು ಸೂರ್ಯನಿಗೆ ನೀಡಲಾಯಿತು.

ಸೂರ್ಯ, ನನಗೆ ಪ್ರತಿಸ್ಪರ್ಧಿಯೇ ಇಲ್ಲ. ಈ ಸಭೆಯ ಅವಶ್ಯಕತೆಯೂ ಇರಲಿಲ್ಲ. ನಾನು ಇಲ್ಲದ ಜಗತ್ತೇ ಇಲ್ಲ. ಜೀವನ ನಡೆಯುವುದು ನನ್ನ ಬೆಳಕಿನಿಂದನೇ’ ಎಂದು ಹೇಳಿ ಅಹಂನಿಂದ ಎಲ್ಲರ ಕಡೆ ನೋಡಿತು.

ಆನಂತರ ಚಂದ್ರ, ಈ ಸೂರ್ಯ ಎಲ್ಲಾಕಾಲದಲ್ಲೂಇರವವನಲ್ಲ. ಹಗಲು ಮಾತ್ರ ಅವನ ಕೆಲಸ. ರಾತ್ರಿ ನಾನು ಇಲ್ಲದೆ ಬದುಕಿಲ್ಲ. ಕವಿಗಳಿಗೆ, ಪ್ರೇಮಿಗಳಿಗೆ ನನ್ನಷ್ಟು ಸಹಾಯ ಮಾಡಿದವರು ಯಾರೂ ಇಲ್ಲ. ನಾನು ಸೂರ್ಯನಷ್ಟು ಪ್ರಖರವಾದ ಬಿಸಿಲು ನೀಡಿ ಜನರಿಗೆ ತೊಂದರೆ ಕೊಡುವುದಿಲ್ಲ’ ಎಂದು ವಾದಿಸಿತು.

ನಕ್ಷತ್ರಗಳು ಸೂರ್ಯನ ಬೆಳಕು ಹಗಲು ಮಾತ್ರ ಮತ್ತು ಚಂದ್ರ ತಿಂಗಳಲ್ಲಿಕೆಲವು ದಿನ ಮಾತ್ರ. ಆದರೆ ನಾವು ರಾತ್ರಿಯಲ್ಲಿಯಾವತ್ತೂ ಇರ್ತೀವಿ. ನಮ್ಮ ಬೆಳಕು ಅವರಿಗೆ ಚಿಕ್ಕದಿರಬಹುದು. ಆದರೆ ಅಷ್ಟರಲ್ಲೇ ಅವರಿಗೆ ಹಾದಿ ತೋರಿಸುತ್ತೀವಿ. ಮಕ್ಕಳಿಗೂ ನಮ್ಮನ್ನು ಕಂಡರೆ ಅಕ್ಕರೆ’ ಅಂತ ಹೇಳಿದವು.

ಮಿಂಚುಹುಳ ಕೂಡ ನಾನು ಸಣ್ಣವನಾದರೂ ಯಾರ ಸಹಾಯವಿಲ್ಲದೆ ಇಡೀ ಕತ್ತಲೆಯಲ್ಲಿಒಂದು ಬೆಳಕಿನ ಸೊಬಗು ಮೂಡಿಸುವೆ ಎಂದು ಹೇಳಿತು.

ತನ್ನ ವಾದ ಮಂಡಿಸಲು ಮುಂದಾದ ಹಣತೆ ನನಗೆ ವಾದ ಮಂಡಿಸಲು ಆಸೆಯೇನೂ ಇಲ್ಲ. ನಾನು ಶ್ರೇಷ್ಠನೆಂದೂ ಭಾವಿಸಿಲ್ಲ. ಕನಿಷ್ಠನೆಂದೂ ಭಾವಿಸಿಲ್ಲ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ತನ್ನನ್ನು ತಾನು ಸುಟ್ಟುಕೊಂಡು ಬೆಳಕು ನೀಡುವುದರಲ್ಲಿನನಗೆ ಖುಷಿ ಇದೆ.

ಅದು ಕೇವಲ ಸ್ವಲ್ಪವೇ ಬೆಳಕಾಗಲಿ, ನನ್ನನ್ನು ನಂಬಿ ಹಚ್ಚಿದವರಿಗೆ ನಾನು ಮೋಸ ಮಾಡಲ್ಲ. ಅವರು ಬಯಸುವವರೆಗೂ ಬೆಳಕು ಕೊಡುತ್ತೇನೆ. ಅವರು ಬೇಡವೆಂದರೆ ನನ್ನ ಬೆಳಗುವಿಕೆ ನಿಲ್ಲಿಸುತ್ತೇನೆ. ಸೂರ್ಯನಾಗಲಿ, ಚಂದ್ರನಾಗಲಿ, ನಕ್ಷತ್ರಗಳಾಗಲಿ ಬೇಡವೆಂದರೆ ನಿಲ್ಲಿಸಿಯಾರೆ? ಜನರಿಗೆ ಬೇಕೋ ಬೇಡ್ವೊ ಗೊತ್ತಿಲ್ಲದೆ ತಮ್ಮ ಪಾಡಿಗೆ ತಾವು ಉರಿಯುತ್ತಲೇ ಇರುತ್ತಾರೆ.

ನಾನು ಇಲ್ಲದೆ ಹೋಗಿದ್ದರೆ ಮನುಷ್ಯರ ಜಗತ್ತು ಹೇಗಿರುತ್ತಿತ್ತು ಎಂದು ಊಹಿಸಿ. ಆದರೆ ನನಗೆ ಅದರಲ್ಲಿಹೆಗ್ಗಳಿಕೆ ಇಲ್ಲ. ಅದು ನನ್ನ ಕೆಲಸ, ನನ್ನ ಪಾಡಿಗೆ ನಾನು ಉರಿದು ಬೆಳಕು ಕೊಡುವುದು ಕರ್ತವ್ಯ. ಕರ್ತವ್ಯದಲ್ಲಿಶ್ರೇಷ್ಠತೆಯ ಲೆಕ್ಕ ಹಾಕುವುದು ನನಗೆ ಸರಿ ಬರುವುದಿಲ್ಲ. ಅದಕ್ಕಾಗಿ ನಾನು ಮೊದಲೇ ಸಭೆಗೆ ಬಂದಿರಲಿಲ್ಲ. ಕ್ಷಮಿಸಿ’ ಎಂದು ಕೈ ಮುಗಿಯಿತು.

ಹಣತೆಯ ಮಾತು ಮುಗಿಯುತ್ತಲೇ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿದರು. ಆಗ ಬ್ರಹ್ಮ, ಯಾರು ಶ್ರೇಷ್ಠರು ಎಂಬುದನ್ನು ನಾನು ತೀರ್ಮಾನಿಸುವ ಅಗತ್ಯ ಇಲ್ಲ. ಇಡೀ ಸಭೆಯೇ ಅದನ್ನು ಗುರುತಿಸಿದೆ.

ಶ್ರೇಷ್ಠತೆ ಬರುವುದು ಬರೀ ಬಲದಿಂದಲ್ಲ, ತನ್ನ ಶಕ್ತಿಯಿಂದಲ್ಲ, ಅದರ ಜೊತೆಗೆ ನಡವಳಿಕೆಯಿಂದಲೂ. ಸಣ್ಣ ಬೆಳಕು ಕೊಟ್ಟರೂ ಹಣತೆಯ ವ್ಯಕ್ತಿತ್ವ ಗುರುತರವಾದದ್ದು’ ಎಂದ. ಎಲ್ಲರೂ ಹಣತೆಗೆ ಜಯಕಾರ ಹಾಕಿದರು. ಸೂರ್ಯ, ಚಂದ್ರ, ನಕ್ಷತ್ರಗಳಿಗೆ ತಮ್ಮ ತಪ್ಪಿನ ಅರಿವಾಯಿತು.

ಕೃಪೆ: ಸದಾಶಿವ್‌ ಸೊರಟೂರು

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!