DK Shivakumar added fuel to the burning fire

ಇಶಾದಲ್ಲಿ ಭಕ್ತಿ, ಭಾವ ಪರವಶ; ಉರಿಯುವ ಬೆಂಕಿಗೆ ತುಪ್ಪ ಸುರಿದ ಡಿಕೆ ಶಿವಕುಮಾರ್| Video ನೋಡಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇತ್ತೀಚಿಗೆ ಒಂದರ ನಂತರ ಒಂದು ಎಂಬಂತೆ ಹಲವು ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಹಿಂದೂ ವಿರೋಧಿಗಳಿಗೆ ಸೆಡ್ಡು ಹೊಡೆದಿದ್ದರೆ, ಹಿಂದೂ ಧರ್ಮವನ್ನು ದತ್ತು ಪಡೆದಂತೆ ವರ್ತಿಸುವ ಬಿಜೆಪಿಗರಲ್ಲಿ ಆತಂಕವನ್ನು ಸೃಷ್ಠಿಸುತ್ತಿದ್ದಾರೆ.

ಮಹಾಕುಂಭ ಮೇಳದ (Maha Kumbha Mela) ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ವ್ಯತಿರಿಕ್ತ ಹೇಳಿಕೆ ನೀಡಿದ್ದ ಬೆನ್ನಲ್ಲೇ, ಡಿಕೆ ಶಿವಕುಮಾರ್ (DK Shivakumar) ತಮ್ಮ ಪತ್ನಿ ಸಮೇತ ಕುಂಭಮೇಳಕ್ಕೆ ಹೋಗಿ, ಪುಣ್ಯಸ್ನಾನ ಮಾಡಿ ಬಂದಿದ್ದರು.

DCM DK Shivakumar couple at Kumbh Mela
DCM DK Shivakumar couple at Kumbh Mela

ಇದರ ಬೆನ್ನಲ್ಲೇ ನಿನ್ನೆ ಶಿವರಾತ್ರಿ ಅಂಗವಾಗಿ ಕೊಯಮತ್ತೂರಿನಲ್ಲಿನ ಸದ್ಗುರು ಅವರ ಇಶಾ ಫೌಂಡೇಶನ್‌ನ (Isha Foundation) ಮಹಾಶಿವರಾತ್ರಿ (Maha Shivaratri) ಉತ್ಸವದಲ್ಲಿ ಭಾಗಿಯಾಗಿದ್ದರು.

ಅದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅಮಿತ್ ಶಾ (Amith Shah) ಕೂಡ ಇದ್ದರು. ಇದು ಕಾಂಗ್ರೆಸ್ ನಾಯಕರ ತಳಮಳಕ್ಕೆ ಕಾರಣವಾಗಿದೆ.

ಮಹಾ ಶಿವರಾತ್ರಿ ಉತ್ಸವದಲ್ಲಿ ಡಿಕೆಶಿ ಪಾಲ್ಗೊಂಡಿದ್ದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿವಿ ಮೋಹನ್ ಅಕ್ಷೇಪ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಯಾರು ಎಂದವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಅಲ್ಲದೆ ಕೆಲ ಖಾಸಗಿ ಸುದ್ದಿವಾಹಿನಿಗಳು ಡಿಕೆ ಶಿವಕುಮಾರ್ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇ ತಡೆ, ಡಿಕೆ ಶಿವಕುಮಾರ್ ಬಿಜೆಪಿ ಸೇರುತ್ತಾರೇ.. ಎಂಬಂತೆ ವರದಿಗಳ ಮೇಲೆ ವರದಿ ಮಾಡುತ್ತಾ.. ಬಿಜೆಪಿ ಮುಖಂಡರ ಅಭಿಪ್ರಾಯ ಪಡೆಯುತ್ತಾ.. ರಾಜ್ಯ ಸರ್ಕಾರ ಬಿದ್ದೇ ಹೋಗಲಿದೆ, ರಾಜಕೀಯ ಪರ್ವ ಆರಂಭವಾಗಲಿದೆ ಎಂಬಂತೆ ಕಿರುಚಾಡುತ್ತಿದ್ದಾರೆ.

ಇದೆಲ್ಲದರ ನಡುವೆ ಡಿಕೆ ಶಿವಕುಮಾರ್ ಅವರು ಸದ್ಗುರು ಸನ್ನಿಧಿಯ ಶಿವರಾತ್ರಿ ಅನುಭವದ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೋ ಪೋಸ್ಟ್ ಮಾಡಿದ್ದಾರೆ‌

ಇಶಾದಲ್ಲಿ ಭಕ್ತಿ, ಭಾವ ಪರವಶ! 🔱✨

ಎಲ್ಲೆಲ್ಲೂ ಶಿವನಾಮದ ಝೇಂಕಾರ,
ಆದಿಯೋಗಿ ಸನ್ನಿಧಿಯಲ್ಲಿ ಆತ್ಮ ಸಾಕ್ಷಾತ್ಕಾರ!

ಭಸ್ಮಭೂಷಿತನ ಸ್ಮರಣೆಯಲ್ಲಿ ಮಿಂದೆದ್ದರು ಜನ, ನಟರಾಜನ ನಾದದಲ್ಲಿ ಸಮ್ಮಿಳಿತವಾಯಿತು ತನು-ಮನ! ಎಂದು ಡಿಕೆ ಶಿವಕುಮಾರ್ ಬರೆಯುವ ಮೂಲಕ ರಾಜಕೀಯ ವಲಯದಲ್ಲಿ ಉರಿಯುತ್ತಿರುವ ಬೆಂಕಿಗೆ ತುಪ್ಪವನ್ನು ಸುರಿದಿದ್ದಾರೆ.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!