Bird flu: Mass killing of chickens

ಹಕ್ಕಿಜ್ವರ; ಕೋಳಿಗಳ ಸಾಮೂಹಿಕ ಹತ್ಯೆ..!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರವನ್ನು (Bird flu) ಹತೋಟಿಗೆ ತರಲು ತಾಲೂಕಿನ ವರದಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿಯಂತ್ರಣ ಕ್ರಮಗಳನ್ನು ಸಮರೋಪಾಧಿಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ಜನರು ಹೆಚ್ಚಿನ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು(SOP) ಪಾಲಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಮನವಿ ಮಾಡಿದರು.

ಹಕ್ಕಿ ಜ್ವರ ನಿಯಂತ್ರಣದ ಕುರಿತು ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ಹಕ್ಕಿಜ್ವರ ಸೋಂಕು ನಿಯಂತ್ರಿಸುವ ಮೂಲಕ ರೋಗ ಬೇರೆಡೆಗೆ ಹರಡದಂತೆ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ.

ಈಗಾಗಲೇ ವರದಹಳ್ಳಿಯಲ್ಲಿ ಸಾವನ್ನಪಿದ ಕೋಳಿಗಳಲ್ಲಿ ಹಕ್ಕಿಜ್ವರದ ಸೋಂಕು ಪತ್ತೆಯಾಗಿ ದೃಢಪಟ್ಟಿರುವ ಕಾರಣ ಈ ಗ್ರಾಮವನ್ನು ಕೇಂದ್ರವಾಗಿಸಿಕೊಂಡು ಸುತ್ತಲೂ 10 ಕಿ.ಮೀ ವ್ಯಾಪ್ತಿಯಲ್ಲಿ ಕೋಳಿ ಸಾಗಾಣಿಕೆ ಮೇಲೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಹೊರಗಡೆಯಿಂದ ವರದಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಕೋಳಿಗಳನ್ನು ತರದಂತೆ ನಾಕಾಬಂಧಿ ಹಾಕಲಾಗಿದೆ.

ವರದಹಳ್ಳಿಯಲ್ಲಿನ ಕೋಳಿಗಳ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ರೋಗ ನಿಯಂತ್ರಣದ ಮುಂಜಾಗ್ರತಾ ಕ್ರಮದ ಭಾಗವಾಗಿ ಅವುಗಳನ್ನೆಲ್ಲಾ ಸರ್ಕಾರದ ಮಾರ್ಗಸೂಚಿಯಂತೆ ಸಾಮೂಹಿಕವಾಗಿ ವಿಲೇವಾರಿ ಮಾಡಲು ಸೂಚಿಸಲಾಗಿದೆ.

ಹಕ್ಕಿಜ್ವರ; ಕೋಳಿಗಳ ಸಾಮೂಹಿಕ ಹತ್ಯೆ..!

ಗ್ರಾಮದಲ್ಲಿನ ಕೋಳಿಗಳನ್ನು ಪಡೆಯುವ ಪ್ರಕ್ರಿಯೆ ಆರಂಭವಾಗಿದೆ. ಇದುವರೆಗೆ ಗ್ರಾಮದ ಜನರಲ್ಲಿ ಯಾವುದೇ ಕೆಮ್ಮು, ಶೀತ, ನೆಗಡಿ, ಜ್ವರದಂತಹ ಪ್ರಕರಣಗಳು ಕಂಡುಬಂದಿಲ್ಲ. ಆದರೂ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಪ್ರತಿ ಕುಟುಂಬದ ಆರೋಗ್ಯದ ಮೇಲೂ ನಿಗಾ ಇಡಲಾಗಿದೆ ಎಂದರು.

ವರದಹಳ್ಳಿಯ ಒಂದು‌ ಕಿ.ಮೀ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಉಲ್ಬಣವಾಗಿ ಹೊರಹೋಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಉಳಿದೆಡೆಗಳಲ್ಲಿ ಯಾವುದೇ ರೀತಿ ಸಮಸ್ಯೆ ಕಂಡು ಬರದ ಕಾರಣ ಸಾರ್ವಜನಿಕರು ಶುಚಿತ್ವವನ್ನೂ ಗಮನದಲ್ಲಿಟ್ಟುಕೊಂಡು ಆರೋಗ್ಯವಾಗಿರುವ ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸಿ ಎಂದಿನಂತೆ ತಿನ್ನಲು ಬಳಸಬಹುದು.

ಯಾವುದೇ ರೀತಿಯ ಗೊಂದಲ,ಆತಂಕ ಬೇಡ. ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಮರೋಪಾದಿಯ ಕ್ರಮಗಳನ್ನು ಕೈಗೊಂಡಿದೆ. ಹೊರಗಿನಿಂದ ವಾಹನಗಳ ಮೂಲಕ ಜಿಲ್ಲೆಗೆ ಬರುವ ಕೋಳಿಗಳ ಮಾದರಿಗಳನ್ನೂ ಪರೀಕ್ಷೆಗೆ ಒಳಪಡಿಸಿ ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

ಆರೋಗ್ಯ ಇಲಾಖೆ, ಪಶುವೈದ್ಯಕೀಯ ಸೇವಾ ಇಲಾಖೆ,ಅರಣ್ಯ ಇಲಾಖೆ,ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಭೆಗಳನ್ನು ಕಾಲಕಾಲಕ್ಕೆ ನಡೆಸಿ ಜಿಲ್ಲಾಡಳಿತ ವರದಿ ಪಡೆದು ನಂತರದ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿ ಗ್ರಾಮಕ್ಕೆ ಹಕ್ಕಿ ಸಾಗಾಣಿಕೆ ವಾಹನಗಳು ಹಾಗೂ ಹೊರಗಡೆಯಿಂದ ಕೋಳಿಗಳನ್ನು ಗ್ರಾಮಕ್ಕೆ ತರುವುದನ್ನು ನಿರ್ಬಂಧಿಸಲಾಗಿದೆ.

ವಿಪತ್ತು ನಿರ್ವಹಾಣಾ ಕಾಯ್ದೆಯನ್ವಯ ಆದೇಶ ಹೊರಡಿಸಿ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತಲ ಕೋಳಿ ಸಾಗಾಣಿಕಾ ವಾಹನಗಳನ್ನು, ಕೋಳಿಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ ಜೊತೆಗೆ ವರದಹಳ್ಳಿಯಲ್ಲಿರುವ ಕೋಳಿಗಳನ್ನು ಸಾಮೂಹಿಕ ಹತ್ಯೆ ಮಾಡಿ ವೈರಸ್ ನಿಯಂತ್ರಣ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ.

ಸ್ವಚ್ಛತೆಯನ್ನು ಕಾಪಾಡಲು ಪಿ.ಡಿ.ಓ ಅವರಿಗೆ ನಿರ್ದೇಶನ ನೀಡಿದ್ದೇವೆ ಹಾಗೂ ಪ್ರತಿದಿನದ ನಿಯಂತ್ರಣ ಕ್ರಮದ ವರದಿಯನ್ನು ಪಶು ಇಲಾಖೆಯ ಉಪನಿರ್ದೇಶಕರಿಂದ ಪಡೆದು ಕಾಲೋಚಿತವಾಗಿ ನಿಯಂತ್ರಣ ಕ್ರಮಗಳನ್ನು ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಅವರು ಈ ಬಗ್ಗೆ ಮಾಹಿತಿ ನೀಡಿ ಮಾತನಾಡುತ್ತಾ ಹಕ್ಕಿ ಜ್ವರವು H5N1 ವೈರಸ್‌ನಿಂದ ಹರಡುವ ರೋಗವಾಗಿದ್ದು, ಇದು ಟರ್ಕಿ, ಕೋಳಿ, ಗಿನಿ ಕೋಳಿ, ಬಾತುಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಬರುವ ಸಾಂಕ್ರಾಮಿಕ ಖಾಯಿಲೆಯಾಗಿದೆ. ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ.

ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

ರೋಗ ಪೀಡಿತ ಕೋಳಿ ಅಥವಾ ಹಕ್ಕಿಯ ಮಾಂಸವನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಹಾಗೂ ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ತ್ಯಾಜ್ಯಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ. ಮತ್ತು ಕೆಲವು ಸಂದರ್ಭದಲ್ಲಿ ಗಾಳಿಯ ಮೂಲಕವು ಮನುಷ್ಯರಿಗೆ ಹರಡುವ ಸಾಧ್ಯತೆ ಇರುತ್ತದೆ.

ರೋಗ ಲಕ್ಷಣಗಳು

ಈ ರೋಗ ಪೀಡಿತರಲ್ಲಿ ಜ್ವರ, ಕೆಮ್ಮು, ಶಿತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು ಉಸಿರಾಟದಲ್ಲಿ ತೊಂದರೆ ಈ ಲಕ್ಷಣಗಳು ಕಾಣಿಸಿದ ಕೂಡಲೇ ಹತ್ತಿರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ತಿಳಿಸಿದರು.

ತೆಗೆದುಕೊಳ್ಳಬೇಕಾದ ಮುನ್ನೆಚರಿಕೆ ಕ್ರಮಗಳು

ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತುಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರವಹಿಸುವುದು. ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ಶಂಕಿತ ಹಕ್ಕಿಜ್ವರ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು.

ಹಕ್ಕಿಜ್ವರ ಶಂಕಿತ ಅಥವಾ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು. ಹಕ್ಕಿಜ್ವರ ಹರಡಿರುವ ಫಾರಂನ ವಾತಾವರಣದ ಸಂಪರ್ಕಕ್ಕೆ ಬಂದಲ್ಲಿ ತಕ್ಷಣ ತಮ್ಮ ಕೈಕಾಲು ಮತ್ತು ಮುಖವನ್ನು ತೊಳೆದುಕೊಂಡು ಬಟ್ಟೆಯನ್ನು ಬದಲಾಯಿಸಿಕೊಳ್ಳುವುದು. ಮತ್ತು ಮುಂದಿನ 4 ದಿನಗಳವರೆಗೆ ತಮ್ಮ ದೇಹದ ಉಷ್ಣಾಂಶದಲ್ಲಿ ಆಗುವ ಬದಲಾವಣೆಗಳನ್ನು ಗಮನಿಸುವುದು.

ಒಂದು ವೇಳೆದ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸುವುದು. ಸೋಂಕಿರುವ ಪ್ರದೇಶದಲ್ಲಿ ಯಾವುದೇ ವಸ್ತುವನ್ನು ಮುಟ್ಟಿದಾಗ ಯಾವಾಗಲೂ ಕೈಗಳನ್ನು ಸೋಪಿನಿಂದ ತೊಳೆಯಬೇಕು ಎಂದು ಸಲಹೆ ನೀಡಿದರು.

ಸರಿಯಾಗಿ ಬೇಯಿಸಿದ ಕೋಳಿ ಮಾಂಸದ ಸೇವೆನೆಯಿಂದ ಹಕ್ಕಿಜ್ವರ ಬರುವುದಿಲ್ಲ

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವಷ್ಟೇ ಸೇವಿಸಬೇಕು. ಅಡುಗೆಗಾಗಿ ಕೋಳಿ ಮಾಂಸವನ್ನು ಸಿದ್ಧಪಡಿಸಿದ ನಂತರ ಕೈಗಳನ್ನು ನಂಜುನಾಶಕದಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು.

ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು. ಹಕ್ಕಿಜ್ವರವು ಮುನ್ನೆಚರಿಕೆಯಿಂದ ತಡೆಯಬಲ್ಲ ಖಾಯಿಲೆ ಆದ್ದರಿಂದ ಖಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಪಶು ವೈದ್ಯಕೀಯ ಆಸ್ಪತ್ರೆಗಳಿಗೆ ಮಾಹಿತಿಯನ್ನು ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆಮಾಡಿ ಎಂದು ತಿಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!