ಬೆಂಗಳೂರು ಗ್ರಾಮಾಂತರ ಜಿಲ್ಲೆ ; ಮನಸೋ ಇಚ್ಛೆ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಲ್ಲ. ನೀವೇ ಕೊಟ್ಟಿರುವ ಮಾತನ್ನ ಉಳಿಸಿಕೊಂಡು ಒಂದು ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಬಿ.ಮುನೇಗೌಡ ಅವರು ಒತ್ತಾಯಿಸಿದರು.
ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ಯಾರಂಟಿಗಳು ಎಂದರೆ ಈ ಸರ್ಕಾರಕ್ಕೆ ಚುನಾವಣೆಗಳನ್ನು ಗೆಲ್ಲುವ ವಾಮಮಾರ್ಗ ಎನ್ನುವಂತಾಗಿದೆ. ಚುನಾವಣೆ ಬಂದಾಗ 2 ಸಾವಿರ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದು, ಉಳಿದಂತೆ ಅದನ್ನು ಮುಂದೂಡಿಕೆ ಮಾಡುವುದು ಸರಿಯಲ್ಲ.
ಸಿಎಂ ಸಿದ್ದರಾಮಯ್ಯ ಅವರೇ..ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರೇ. ನಿಮಗೆ ಇಷ್ಟ ಬಂದಾಗ ಗ್ಯಾರಂಟಿ ಹಣ ಕೊಡುವುದಲ್ಲ. ಕ್ಯಾಲೆಂಡರ್ ನಲ್ಲಿ ದಿನಾಂಕ ಗುರುತಿಸಿ ಘೋಷಣೆ ಮಾಡಿ ಎಂದು ಒತ್ತಾಯಿಸಿದರು.
ನಿಮ್ಮ ಬಜೆಟ್ ನಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ ಎಂದು..? ಪ್ರತಿ ತಿಂಗಳು ಹಣ DBT ಮಾಡುವ ದಿನ ಹೇಳಿ ಎಂದು ಆಗ್ರಹಿಸಿದರು.
ಜಿಲ್ಲಾಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಾಣುವುದು ಸ್ಪಷ್ಟವಾಗಿದೆ.
ಅದಕ್ಕಾಗಿಯೇ ಚುನಾವಣೆಯನ್ನು ಮುಂದೂಡಿಕೆ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಹಣದಿಂದ ಕಾಂಗ್ರೆಸ್ಗೆ ಲಾಭವಾಗುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್, ಹುಸ್ಕೂರು ಆನಂದ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಅಧ್ಯಕ್ಷರಾದ ಹೊಸಕೋಟೆ ಶ್ರೀಧರ್, ದೊಡ್ಡಬಳ್ಳಾಪುರ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಶಾಂತಮ್ಮ, ನೆಲಮಂಗಲ ಶೋಭ, ಜಿಲ್ಲಾ ಮಹಿಳಾ ಘಟಕದ ವಕ್ತಾರೆ ಶಶಿಕಲಾ, ನಗರಸಭೆ ಉಪಾಧ್ಯಕ್ಷ ಮಲ್ಲೇಶ.
ದೊಡ್ಡಬಳ್ಳಾಪುರ ನಗರಸಭೆ ಮಾಜಿ ಸದಸ್ಯ ಚಂದ್ರಶೇಖರ್, ಟಿಎಪಿಎಂಸಿಎಸ್ ಕಂಚಿಗನಾಳ ಲಕ್ಷ್ಮೀನಾರಾಯಣ್, ಸದಸ್ಯ ಆನಂದ್, ಮುಖಂಡರಾದ ಅರಳುಮಲ್ಲಿಗೆ ಶ್ರೀನಿವಾಸ್, ದೊಡ್ಡಗುಂಡಪ್ಪನಾಯಕನಹಳ್ಳಿ ರಾಜಕುಮಾರ್, ದೇವನಹಳ್ಳಿ ರವಿ, ಮಾಧ್ಯಮ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸೇರಿದಂತೆ ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು, ಹೋಬಳಿ ಅಧ್ಯಕ್ಷರು, ಕಾರ್ಯಕರ್ತರು ಸೇರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ ಎಂದರು.