ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿಯಲ್ಲಿನ ಉಪ ನೊಂದಣಾಧಿಕಾರಿ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.
ಉಪಲೋಕಾಯುಕ್ತ ನೇತೃತ್ವದಲ್ಲಿ ನಾಲ್ಕೈದು ಕಾರುಗಳು ಬಂದಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ ಕಚೇರಿಗೆ ಸಾರ್ವಜನಿಕರು ಬಳ ಹೆಚ್ಚಿನ ಹಣ ಇಟ್ಟುಕೊಂಡವರ ವಿಚಾರಣೆ ನಡೆಸುತ್ತಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಇಂದು ಬೆಳಗ್ಗೆಯಿಂದ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ.
ವಿಜಯಪುರದ ಕರ್ನಾಟಕ ಹೌಸಿಂಗ್ ಬೋರ್ಡ್ ಎಫ್ ಡಿ ಎ ಶಿವಾನಂದ ಕೆಂಭಾವಿ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಕೇಸ್ ನಲ್ಲಿ ಕೆಂಭಾವಿ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಶೋಧ ಕಾರ್ಯಾಚರಣೆಗಿಳಿದಿದ್ದಾರೆ
ವಿಜಯಪುರದ ತಿಡಗುಂದಿ ಗ್ರಾಮದ ಬಳಿಯ ಶಿವಾನಂದ ಕೆಂಭಾವಿರವರ ಫಾರ್ಮ್ ಹೌಸ್ ಹಾಗೂ ಜಿಲ್ಲೆಯ ಸುಕೂನ್ ಕಾಲೋನಿಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದರೊಂದಿಗೆ ತುಮಕೂರು, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ
ತುಮಕೂರಿನ ಶಿರಾ ತಾಲೂಕಿನ ತಾವರೇಕೆರೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರಾದ ಡಾ.ಜಗದೀಶ್ ವೈದ್ಯ ಡಾ. ಜಗದೀಶ್ ಮನೆ ಸೇರಿ ಒಟ್ಟು 6 ಕಡೆಗಳಲ್ಲಿ ಲೋಕಾ ದಾಳಿ ನಡೆಸಿದ್ದಾರೆ.