SSLC ವಿದ್ಯಾರ್ಥಿಗಳು, ಪೋಷಕರು ದೊಡ್ಡಬಳ್ಳಾಪುರದಲ್ಲಿ ಗುರುರಾಜ ಕರ್ಜಗಿಯವರ ಈ ಉತ್ತೇಜನ ನುಡಿಗಳನ್ನೊಮ್ಮೆ ಓದಿ

SSLC Students, Parents read these words of Gururaj Karjagi

ದೊಡ್ಡಬಳ್ಳಾಪುರ (SSLC): ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ದೇವರಾಜ ಅರಸು ವಿದ್ಯಾಸಂಸ್ಥೆಯ ಆರ್.ಎಲ್.ಜಾಲಪ್ಪ ಕಲಾಮಂದಿರದಲ್ಲಿ ನಡೆದ ಎಸ್.ಎಸ್.ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡಿಕೊಳ್ಳದಿದ್ದಾಗ ಭಯ ಬೀಳುವುದು ಸಾಮಾನ್ಯ. ಪರೀಕ್ಷೆಗಳ ಭಯದಿಂದಾಗಿ ಎಷ್ಟೋ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಳ್ಳಬೇಕು.

ಬೆಳಗಿನ ಜಾವ ಓದುವುದು ಉತ್ತಮ ಅಭ್ಯಾಸವಾಗಿದ್ದು, 45 ನಿಮಿಷ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ಓದಿದ್ದನ್ನು ಒಂದು ಬಾರಿ ಬರೆಯಬೇಕು. ಇನ್ನೂ ಮನನವಾಗದಿದ್ದರೆ ಮತ್ತೊಬ್ಬರಿಗೆ ಹೇಳಬೇಕು. ಅಧ್ಯಾಯವಾರುಪಟ್ಟಿ ಮಾಡಿಕೊಂಡು ಓದಬೇಕು ಎಂದರು.

ಪರೀಕ್ಷೆಗಾಗಿ ಓದುವುದಕ್ಕಿಂತ ನಿಯಮಿತವಾಗಿ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದ್ದು, ಇದಕ್ಕೆ ನಮ್ಮ ದೇಹ ಮತ್ತು ಮನಸ್ಸಿಗೆ ವ್ಯಾಯಾಮ ಅಗತ್ಯವಾಗಿದೆ.

ಮೆದುಳಿಗೆ ಆಮ್ಲಜನಕದ ಸರಬರಾಜು ಇಲ್ಲದಿದ್ದರೆ, ಮೆದುಳು ಗ್ರಹಿಸುವ ಶಕ್ತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಎರಡೂ ಕೈಗಳನ್ನು ಜೋಡಿಸುವ ಸಣ್ಣ ಆಕ್ಯೂಪ್ರೆಷರ್ ವ್ಯಾಯಾಮ ಮಾಡಬೇಕು. ನಿತ್ಯ 10 ನಿಮಿಷ ವ್ಯಾಯಾಮ ಮಾಡಬೇಕು ಎಂದರು.

ಪರೀಕ್ಷೆ ವೇಳೆಯಲ್ಲಿ ನಿದ್ದೆಗೆಟ್ಟು ಓದಿ ಹೆಚ್ಚು ಒತ್ತಡಕ್ಕೊಳಗಾಗಬಾರದು. ಲವಲವಿಕೆಯಿಂದ ಪರೀಕ್ಷ ಕೆಂದ್ರಕ್ಕೆ ಹೋಗಬೇಕು. ಓಗುವ ಮುಂದೆ ತಾಯಿ ತಂದೆಗಳ ಆಶೀರ್ವಾದ ಪಡೆದರೆ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇನ್ನು ಪರೀಕ್ಷಾ ಕೇಂದ್ರದಲ್ಲಿ ಓದಿನ ಬಗ್ಗೆ ಅನವಶ್ಯಕವಾಗಿ ಗೆಳೆಯರ ಜೊತೆ ಚರ್ಚೆ ಮಾಡುವುದು ಬೇಡ. ಪರೀಕ್ಷಾ ನಂತರವೂ ಬರೆದ ವಿಷಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ದೇ ಮುಂದಿನ ವಿಷಯಕ್ಕೆ ತಯಾರಿ ಮಾಡಿಕೊಳ್ಳುವುದು ಒಳ್ಳೆಯದು ಎಂದು ಪರೀಕ್ಷೆ ಹಾಗೂ ಓದುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಅಂಕದ ಓದಿಗಿಂತ ಜ್ಞಾನದ ಓದು ಮುಖ್ಯ

ಪರೀಕ್ಷೆಗಾಗಿ ಓದುವುದು, ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ನಾವು ಪರೀಕ್ಷೆಗಾಗಿ ಕಲಿತ ವಿದ್ಯೆ ಬಹಳಷ್ಟು ಕಾಲ ನಿಲ್ಲುವುದಿಲ್ಲ. ಹೃದಯಕ್ಕೆ ನಾಟಿದ ವಿಚಾರಗಳು ಬಹುಕಾಲ ನಿಲ್ಲುತ್ತವ

ಬಾಯಿಪಾಠ ಮಾಡಿಕೊಂಡು ಅರ್ಥ ಮಾಡಿಕೊಳ್ಳದೇ ಯಾವುದೇ ವಿಚಾರ ಕಲಿತರೂ ಅದು ಅಂಕಕ್ಕೆ ಸೀಮಿತವೇ ಹೊರತು ನಮಗೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಕಳೆದು ಹೋದ ಸಮಯ ಬದುಕಲ್ಲಿ ಮತ್ತೆ ಬರುವುದಿಲ್ಲ.

ಮಾಜಿ ರಾಷ್ಟ್ರಪತಿಗಳಾದ ಕೆ.ಆರ್.ನಾರಾಯಣನ್, ಅಬ್ದುಲ್ ಕಲಾಂ ಮೊದಲಾದ ಮಹನೀಯರ ಸಾಧನೆಗಳು ಸ್ಪೂರ್ತಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ಮಾತನಾಡಿ, ಮಾ.21ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಯಾವುದೇ ಅಂಜಿಕೆಯಿಲ್ಲದೇ ಸಜ್ಜಾಗಬೇಕಾಗಿದೆ.

ಈ ದಿಸೆಯಲ್ಲಿ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರ ಮಾತುಗಳು ಮಕ್ಕಳಿಗೆ ಸ್ಪೂರ್ತಿಯಾಗಲಿ ಎಂದು ಈ ಕಾರ್ಯಕ್ರಮ ಅಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಕರ್ಜಗಿಯವರ ಮಾತುಗಳು ಸದಾ ಸ್ಪೂರ್ತಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು, ದೇವರಾಜ ಅರಸು ವಿದ್ಯಾಸಂಸ್ಥೆಯ ಎಇಇ ರಮೇಶ್ ಕುಮಾರ್, ಆರ್.ಎಲ್‍ಜೈಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ತಾಲೂಕು ಅಧ್ಯಕ್ಷ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಆಂಜಿನಪ್ಪ, ಶಿಕ್ಷಣ ಸಂಯೋಜಕರಾದ ಜಯಶ್ರೀ, ಮೈಲಾರಪ್ಪ, ಅಶ್ವಿನಿ, ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]