SSLC Students, Parents read these words of Gururaj Karjagi

SSLC ವಿದ್ಯಾರ್ಥಿಗಳು, ಪೋಷಕರು ದೊಡ್ಡಬಳ್ಳಾಪುರದಲ್ಲಿ ಗುರುರಾಜ ಕರ್ಜಗಿಯವರ ಈ ಉತ್ತೇಜನ ನುಡಿಗಳನ್ನೊಮ್ಮೆ ಓದಿ

ದೊಡ್ಡಬಳ್ಳಾಪುರ (SSLC): ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ದೇವರಾಜ ಅರಸು ವಿದ್ಯಾಸಂಸ್ಥೆಯ ಆರ್.ಎಲ್.ಜಾಲಪ್ಪ ಕಲಾಮಂದಿರದಲ್ಲಿ ನಡೆದ ಎಸ್.ಎಸ್.ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡಿಕೊಳ್ಳದಿದ್ದಾಗ ಭಯ ಬೀಳುವುದು ಸಾಮಾನ್ಯ. ಪರೀಕ್ಷೆಗಳ ಭಯದಿಂದಾಗಿ ಎಷ್ಟೋ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಳ್ಳಬೇಕು.

ಬೆಳಗಿನ ಜಾವ ಓದುವುದು ಉತ್ತಮ ಅಭ್ಯಾಸವಾಗಿದ್ದು, 45 ನಿಮಿಷ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ಓದಿದ್ದನ್ನು ಒಂದು ಬಾರಿ ಬರೆಯಬೇಕು. ಇನ್ನೂ ಮನನವಾಗದಿದ್ದರೆ ಮತ್ತೊಬ್ಬರಿಗೆ ಹೇಳಬೇಕು. ಅಧ್ಯಾಯವಾರುಪಟ್ಟಿ ಮಾಡಿಕೊಂಡು ಓದಬೇಕು ಎಂದರು.

ಪರೀಕ್ಷೆಗಾಗಿ ಓದುವುದಕ್ಕಿಂತ ನಿಯಮಿತವಾಗಿ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದ್ದು, ಇದಕ್ಕೆ ನಮ್ಮ ದೇಹ ಮತ್ತು ಮನಸ್ಸಿಗೆ ವ್ಯಾಯಾಮ ಅಗತ್ಯವಾಗಿದೆ.

ಮೆದುಳಿಗೆ ಆಮ್ಲಜನಕದ ಸರಬರಾಜು ಇಲ್ಲದಿದ್ದರೆ, ಮೆದುಳು ಗ್ರಹಿಸುವ ಶಕ್ತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಎರಡೂ ಕೈಗಳನ್ನು ಜೋಡಿಸುವ ಸಣ್ಣ ಆಕ್ಯೂಪ್ರೆಷರ್ ವ್ಯಾಯಾಮ ಮಾಡಬೇಕು. ನಿತ್ಯ 10 ನಿಮಿಷ ವ್ಯಾಯಾಮ ಮಾಡಬೇಕು ಎಂದರು.

ಪರೀಕ್ಷೆ ವೇಳೆಯಲ್ಲಿ ನಿದ್ದೆಗೆಟ್ಟು ಓದಿ ಹೆಚ್ಚು ಒತ್ತಡಕ್ಕೊಳಗಾಗಬಾರದು. ಲವಲವಿಕೆಯಿಂದ ಪರೀಕ್ಷ ಕೆಂದ್ರಕ್ಕೆ ಹೋಗಬೇಕು. ಓಗುವ ಮುಂದೆ ತಾಯಿ ತಂದೆಗಳ ಆಶೀರ್ವಾದ ಪಡೆದರೆ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇನ್ನು ಪರೀಕ್ಷಾ ಕೇಂದ್ರದಲ್ಲಿ ಓದಿನ ಬಗ್ಗೆ ಅನವಶ್ಯಕವಾಗಿ ಗೆಳೆಯರ ಜೊತೆ ಚರ್ಚೆ ಮಾಡುವುದು ಬೇಡ. ಪರೀಕ್ಷಾ ನಂತರವೂ ಬರೆದ ವಿಷಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ದೇ ಮುಂದಿನ ವಿಷಯಕ್ಕೆ ತಯಾರಿ ಮಾಡಿಕೊಳ್ಳುವುದು ಒಳ್ಳೆಯದು ಎಂದು ಪರೀಕ್ಷೆ ಹಾಗೂ ಓದುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಅಂಕದ ಓದಿಗಿಂತ ಜ್ಞಾನದ ಓದು ಮುಖ್ಯ

ಪರೀಕ್ಷೆಗಾಗಿ ಓದುವುದು, ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ನಾವು ಪರೀಕ್ಷೆಗಾಗಿ ಕಲಿತ ವಿದ್ಯೆ ಬಹಳಷ್ಟು ಕಾಲ ನಿಲ್ಲುವುದಿಲ್ಲ. ಹೃದಯಕ್ಕೆ ನಾಟಿದ ವಿಚಾರಗಳು ಬಹುಕಾಲ ನಿಲ್ಲುತ್ತವ

ಬಾಯಿಪಾಠ ಮಾಡಿಕೊಂಡು ಅರ್ಥ ಮಾಡಿಕೊಳ್ಳದೇ ಯಾವುದೇ ವಿಚಾರ ಕಲಿತರೂ ಅದು ಅಂಕಕ್ಕೆ ಸೀಮಿತವೇ ಹೊರತು ನಮಗೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಕಳೆದು ಹೋದ ಸಮಯ ಬದುಕಲ್ಲಿ ಮತ್ತೆ ಬರುವುದಿಲ್ಲ.

ಮಾಜಿ ರಾಷ್ಟ್ರಪತಿಗಳಾದ ಕೆ.ಆರ್.ನಾರಾಯಣನ್, ಅಬ್ದುಲ್ ಕಲಾಂ ಮೊದಲಾದ ಮಹನೀಯರ ಸಾಧನೆಗಳು ಸ್ಪೂರ್ತಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ಮಾತನಾಡಿ, ಮಾ.21ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಯಾವುದೇ ಅಂಜಿಕೆಯಿಲ್ಲದೇ ಸಜ್ಜಾಗಬೇಕಾಗಿದೆ.

ಈ ದಿಸೆಯಲ್ಲಿ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರ ಮಾತುಗಳು ಮಕ್ಕಳಿಗೆ ಸ್ಪೂರ್ತಿಯಾಗಲಿ ಎಂದು ಈ ಕಾರ್ಯಕ್ರಮ ಅಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಕರ್ಜಗಿಯವರ ಮಾತುಗಳು ಸದಾ ಸ್ಪೂರ್ತಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು, ದೇವರಾಜ ಅರಸು ವಿದ್ಯಾಸಂಸ್ಥೆಯ ಎಇಇ ರಮೇಶ್ ಕುಮಾರ್, ಆರ್.ಎಲ್‍ಜೈಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ತಾಲೂಕು ಅಧ್ಯಕ್ಷ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಆಂಜಿನಪ್ಪ, ಶಿಕ್ಷಣ ಸಂಯೋಜಕರಾದ ಜಯಶ್ರೀ, ಮೈಲಾರಪ್ಪ, ಅಶ್ವಿನಿ, ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

"ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ".

[ccc_my_favorite_select_button post_id="117123"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!