Daily story: Swamiji's skill

ಹರಿತಲೇಖನಿ ದಿನಕ್ಕೊಂದು ಕಥೆ: ಸ್ವಾಮೀಜಿಯ ಕೌಶಲ್ಯ

Daily story; ಒಮ್ಮೆ ಸ್ವಾಮೀ ವಿವೇಕಾನಂದರು ಅಮೇರಿಕಾದ ಚಿಕಾಗೊ ಪಟ್ಟಣದ ನದಿಯ ತೀರದಲ್ಲಿ ವಿಹರಿಸುತ್ತಿದ್ದರು.

ಆಗ ಅವರಿಗೆ ಕೆಲವು ಹುಡುಗರು ಕೋವಿಯನ್ನು ಹಿಡಿದು ನದಿಯಲ್ಲಿ ತೇಲುತ್ತಿರುವ ಮೊಟ್ಟೆಯ ಚಿಪ್ಪನ ಮೇಲೆ ಗುರಿಯಿಡಲು ಪ್ರಯತ್ನಿಸುತ್ತಿರುವುದು ಕಂಡಿತು. ಆದರೆ ಅಲೆಗಳಿಂದ ಮೊಟ್ಟೆಯ ಚಿಪ್ಪು ಮೇಲೆ ಕೆಳಗೆ ತಿರುಗುತ್ತಿದ್ದರಿಂದ ಅವರಿಗೆ ಗುರಿಯಿಡಲು ಸಾಧ್ಯವಾಗಲ್ಲಿಲ್ಲ. ಬಹಳಷ್ಟು ಬಾರಿ ಪ್ರಯತ್ನಿಸಿಯೂ ಅವರಿಂದ ಮೊಟ್ಟೆಯ ಚಿಪ್ಪಿನ ಮೇಲೆ ಗುರಿಯಿಡಲು ಸಾಧ್ಯವಾಗಲಿಲ್ಲ.

ಸ್ವಾಮೀವಿವೇಕಾನಂದರು ಅವರ ಆಟವನ್ನು ಕೂತೂಹಲದಿಂದ ನಿಂತು ನೋಡುತ್ತಿದ್ದರು. ಆಗ ಹುಡುಗರು ಅವರನ್ನು ನೋಡಿ ’ಸರ್, ನೀವು ನಮ್ಮನ್ನು ಆಗಿನಿಂದ ನೋಡುತ್ತಿದ್ದೀರಿ, ನೀವು ಒಂದು ಬಾರಿ ಪ್ರಯತ್ನಿಸುವಿರೇ ?” ಎಂದು ಕೇಳಿದರು.

ಸ್ವಾಮಿ ವಿವೇಕಾನಂದರು ನಗುತ್ತ ತಾನು ಪ್ರಯತ್ನಿಸಲು ಇಚ್ಛಿಸುವುದಾಗಿ ತಿಳಿಸಿದರು. ಸ್ವಾಮಿಗಳು ಬಂದೂಕನ್ನು ಕೈಗೆತ್ತಿಕೊಂಡು ಮೊಟ್ಟೆಯ ಚಿಪ್ಪಿಗೆ ಗುರಿಯಿಟ್ಟು ಅದನ್ನು ಸ್ವಲ್ಪ ಸಮಯ ಏಕಾಗ್ರತೆಯಿಂದ ನೋಡಿದರು.

ಅನಂತರ ಅವರು 12 ಬಾರಿ ಗುಂಡು ಹೊಡೆದಾಗ ಪ್ರತಿಬಾರಿಯೂ ಅದು ಒಂದೊಂದು ಮೊಟ್ಟೆಯ ಚಿಪ್ಪಿಗೆ ತಗುಲಿತು!

ಸ್ವಾಮೀಜಿಯ ಕೌಶಲ್ಯವನ್ನು ಕಂಡು ಮಕ್ಕಳು ಅಚ್ಚರಿಗೊಂಡು ಸ್ವಾಮೀ ವಿವೇಕಾನಂದರ ಬಳಿ ಹೋಗಿ ’ನೀವು ಇದನ್ನು ಹೇಗೆ ಮಾಡಿದಿರಿ ?’ ಎಂದು ಕೇಳಿದರು.

ಅದಕ್ಕೆ ವಿವೇಕಾನಂದರು ನಗುತ್ತ ’ನಾನು ಎಂದಿಗೂ ಬಂದೂಕಿನಿಂದ ಗುರಿ ಇಡಲಿಲ್ಲ’ ಎಂದು ಹೇಳುತ್ತಾರೆ. ಆಗ ಹುಡುಗರು ’ಹಾಗಿದ್ದರೆ ನೀವು ಇಷ್ಟು ಒಳ್ಳೆಯ ರೀತಿಯಲ್ಲಿ ಹೇಗೆ ಗುರಿಇಟ್ಟಿರಿ ?’ ಎಂದು ಕೇಳುತ್ತಾರೆ.

ಅದಕ್ಕೆ ಸ್ವಾಮೀ ವಿವೇಕಾನಂದರು ’ನಿಮಗೆ ಒಂದು ರಹಸ್ಯವನ್ನು ಹೇಳುತ್ತೇನೆ. ನೀವು ಏನೇ ಮಾಡಿದರೂ ಬೇರೆ ಯಾವುದರ ಬಗ್ಗೆಯೂ ಯೋಚಿಸದೇ ನಿಮ್ಮ ಸಂಪೂರ್ಣ ಗಮನವನ್ನು ಅದರ ಮೇಲೆ ಕೇಂದ್ರೀಕರಿಸಿರಿ. ನೀವು ಬಂದೂಕಿನಿಂದ ಗುರಿಯಿಡುತ್ತಿದ್ದಲ್ಲಿ ನಿಮ್ಮ ಮನಸ್ಸನ್ನು ಗುರಿಯ ಮೇಲೆ ಕೇಂದ್ರೀಕರಿಸಿರಿ. ನಿಮ್ಮ ಗುರಿ ತಪ್ಪುವುದಿಲ್ಲ.

ಏಕಾಗ್ರತೆಯಿಂದ ಅದ್ಭುತಗಳನ್ನು ಸಾಧಿಸಬಹುದು. ನಾವು ಓದುವಾಗಲೂ ಕೈಯಲ್ಲಿರುವ ಪಾಠದ ಬಗ್ಗೆಯೇ ವಿಚಾರ ಮಾಡಬೇಕು. ಆಗಲೇ ನೀವು ಓದಿರುವ ವಿಷಯಗಳನ್ನು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳಬಹುದು.’ ಎಂದು ಹೇಳಿದರು.

ಕೃಪೆ: ಹಿಂದು ಜಾಗೃತಿ.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!