Daily story: Swamiji's skill

ಹರಿತಲೇಖನಿ ದಿನಕ್ಕೊಂದು ಕಥೆ: ಸ್ವಾಮೀಜಿಯ ಕೌಶಲ್ಯ

Daily story; ಒಮ್ಮೆ ಸ್ವಾಮೀ ವಿವೇಕಾನಂದರು ಅಮೇರಿಕಾದ ಚಿಕಾಗೊ ಪಟ್ಟಣದ ನದಿಯ ತೀರದಲ್ಲಿ ವಿಹರಿಸುತ್ತಿದ್ದರು.

ಆಗ ಅವರಿಗೆ ಕೆಲವು ಹುಡುಗರು ಕೋವಿಯನ್ನು ಹಿಡಿದು ನದಿಯಲ್ಲಿ ತೇಲುತ್ತಿರುವ ಮೊಟ್ಟೆಯ ಚಿಪ್ಪನ ಮೇಲೆ ಗುರಿಯಿಡಲು ಪ್ರಯತ್ನಿಸುತ್ತಿರುವುದು ಕಂಡಿತು. ಆದರೆ ಅಲೆಗಳಿಂದ ಮೊಟ್ಟೆಯ ಚಿಪ್ಪು ಮೇಲೆ ಕೆಳಗೆ ತಿರುಗುತ್ತಿದ್ದರಿಂದ ಅವರಿಗೆ ಗುರಿಯಿಡಲು ಸಾಧ್ಯವಾಗಲ್ಲಿಲ್ಲ. ಬಹಳಷ್ಟು ಬಾರಿ ಪ್ರಯತ್ನಿಸಿಯೂ ಅವರಿಂದ ಮೊಟ್ಟೆಯ ಚಿಪ್ಪಿನ ಮೇಲೆ ಗುರಿಯಿಡಲು ಸಾಧ್ಯವಾಗಲಿಲ್ಲ.

ಸ್ವಾಮೀವಿವೇಕಾನಂದರು ಅವರ ಆಟವನ್ನು ಕೂತೂಹಲದಿಂದ ನಿಂತು ನೋಡುತ್ತಿದ್ದರು. ಆಗ ಹುಡುಗರು ಅವರನ್ನು ನೋಡಿ ’ಸರ್, ನೀವು ನಮ್ಮನ್ನು ಆಗಿನಿಂದ ನೋಡುತ್ತಿದ್ದೀರಿ, ನೀವು ಒಂದು ಬಾರಿ ಪ್ರಯತ್ನಿಸುವಿರೇ ?” ಎಂದು ಕೇಳಿದರು.

ಸ್ವಾಮಿ ವಿವೇಕಾನಂದರು ನಗುತ್ತ ತಾನು ಪ್ರಯತ್ನಿಸಲು ಇಚ್ಛಿಸುವುದಾಗಿ ತಿಳಿಸಿದರು. ಸ್ವಾಮಿಗಳು ಬಂದೂಕನ್ನು ಕೈಗೆತ್ತಿಕೊಂಡು ಮೊಟ್ಟೆಯ ಚಿಪ್ಪಿಗೆ ಗುರಿಯಿಟ್ಟು ಅದನ್ನು ಸ್ವಲ್ಪ ಸಮಯ ಏಕಾಗ್ರತೆಯಿಂದ ನೋಡಿದರು.

ಅನಂತರ ಅವರು 12 ಬಾರಿ ಗುಂಡು ಹೊಡೆದಾಗ ಪ್ರತಿಬಾರಿಯೂ ಅದು ಒಂದೊಂದು ಮೊಟ್ಟೆಯ ಚಿಪ್ಪಿಗೆ ತಗುಲಿತು!

ಸ್ವಾಮೀಜಿಯ ಕೌಶಲ್ಯವನ್ನು ಕಂಡು ಮಕ್ಕಳು ಅಚ್ಚರಿಗೊಂಡು ಸ್ವಾಮೀ ವಿವೇಕಾನಂದರ ಬಳಿ ಹೋಗಿ ’ನೀವು ಇದನ್ನು ಹೇಗೆ ಮಾಡಿದಿರಿ ?’ ಎಂದು ಕೇಳಿದರು.

ಅದಕ್ಕೆ ವಿವೇಕಾನಂದರು ನಗುತ್ತ ’ನಾನು ಎಂದಿಗೂ ಬಂದೂಕಿನಿಂದ ಗುರಿ ಇಡಲಿಲ್ಲ’ ಎಂದು ಹೇಳುತ್ತಾರೆ. ಆಗ ಹುಡುಗರು ’ಹಾಗಿದ್ದರೆ ನೀವು ಇಷ್ಟು ಒಳ್ಳೆಯ ರೀತಿಯಲ್ಲಿ ಹೇಗೆ ಗುರಿಇಟ್ಟಿರಿ ?’ ಎಂದು ಕೇಳುತ್ತಾರೆ.

ಅದಕ್ಕೆ ಸ್ವಾಮೀ ವಿವೇಕಾನಂದರು ’ನಿಮಗೆ ಒಂದು ರಹಸ್ಯವನ್ನು ಹೇಳುತ್ತೇನೆ. ನೀವು ಏನೇ ಮಾಡಿದರೂ ಬೇರೆ ಯಾವುದರ ಬಗ್ಗೆಯೂ ಯೋಚಿಸದೇ ನಿಮ್ಮ ಸಂಪೂರ್ಣ ಗಮನವನ್ನು ಅದರ ಮೇಲೆ ಕೇಂದ್ರೀಕರಿಸಿರಿ. ನೀವು ಬಂದೂಕಿನಿಂದ ಗುರಿಯಿಡುತ್ತಿದ್ದಲ್ಲಿ ನಿಮ್ಮ ಮನಸ್ಸನ್ನು ಗುರಿಯ ಮೇಲೆ ಕೇಂದ್ರೀಕರಿಸಿರಿ. ನಿಮ್ಮ ಗುರಿ ತಪ್ಪುವುದಿಲ್ಲ.

ಏಕಾಗ್ರತೆಯಿಂದ ಅದ್ಭುತಗಳನ್ನು ಸಾಧಿಸಬಹುದು. ನಾವು ಓದುವಾಗಲೂ ಕೈಯಲ್ಲಿರುವ ಪಾಠದ ಬಗ್ಗೆಯೇ ವಿಚಾರ ಮಾಡಬೇಕು. ಆಗಲೇ ನೀವು ಓದಿರುವ ವಿಷಯಗಳನ್ನು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳಬಹುದು.’ ಎಂದು ಹೇಳಿದರು.

ಕೃಪೆ: ಹಿಂದು ಜಾಗೃತಿ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!