Vijayendra demands judicial or CBI probe into honeytrap

ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಇಂದು ಬಿಜೆಪಿ-ಜೆಡಿಎಸ್ ಪಕ್ಷಗಳ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದಾರೆ. ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿದ್ದು ಖಂಡನೀಯ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಬಿಸಿಯೂಟ ಅಡುಗೆ ಮಾಡುವವರ, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುತ್ತಿಲ್ಲ ಎಂದು ಆಕ್ಷೇಪಿಸಿದರು. ಇದನ್ನು ನಿನ್ನೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದಲ್ಲಿ ಪ್ರಸ್ತಾಪಿಸಿದ್ದು, ರಾಜ್ಯಪಾಲರನ್ನೂ ಭೇಟಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು.

ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತವರ ಮಕ್ಕಳನ್ನು ಗ್ಯಾರಂಟಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದನ್ನು ಹೈಕೋರ್ಟಿನಲ್ಲೂ ಪ್ರಶ್ನಿಸಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ, ತಹಸೀಲ್ದಾರ್ ಇಲ್ಲವೇ? ಕಾರ್ಯಕರ್ತರನ್ನು ಬಳಸಿಕೊಳ್ಳಬೇಕೇ ಎಂದು ಕೇಳಿದರು.

ಜ್ವ್ವಲಂತ ಸಮಸ್ಯೆಗಳ ಕುರಿತು ಚರ್ಚೆ
9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ದರಿದ್ರ ಪರಿಸ್ಥಿತಿಗೆ ರಾಜ್ಯ ಸರಕಾರ ಬಂದಿದೆ. ಅನೇಕ ಜ್ವಲಂತ ಸಮಸ್ಯೆಗಳಿವೆ ಎಂದು ಬಿ.ವೈ.ವಿಜಯೇಂದ್ರ ಅವರು ಗಮನ ಸೆಳೆದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 9 ವಿವಿಗಳಲ್ಲಿ ಬಡವರ ಉನ್ನತ ಶಿಕ್ಷಣಕ್ಕೆ ಕತ್ತರಿ ಹಾಕುವ ಕೆಲಸಕ್ಕೆ ಸರಕಾರ ಕೈ ಹಾಕಿದೆ. ಹಿರಿಯ ಐಪಿಎಸ್ ಅಧಿಕಾರಿಯ ಮಗಳು 30-40 ಬಾರಿ ಹೊರದೇಶಕ್ಕೆ ಹೋಗಿ ಬಂದಿರುವುದು, ಬೆಂಗಳೂರಿನಲ್ಲಿ ರಾಜಾತಿಥ್ಯ ಕುರಿತು ಪ್ರಸ್ತಾಪ ಮಾಡುತ್ತೇವೆ ಎಂದರು.

ಒಂದು ಬಾರಿ 14 ಕೆಜಿ ಚಿನ್ನ ತಂದಿದ್ದರೆ, 30-40 ಬಾರಿ ಎಷ್ಟು ಚಿನ್ನ ತಂದಿರಬಹುದು ಎಂದು ಕೇಳಿದರು. ಇದರ ಹಿಂದೆ ಸಚಿವರು, ಘಟಾನುಘಟಿಗಳ ಕೈವಾಡ ಇದೆ ಎಂಬ ಮಾತು ಕೇಳಿಬರುತ್ತಿದೆ ಎಂದರು.

ಶಾಸಕ ಸೋಮಶೇಖರ್ ಅವರು ಯಾಕೆ ಸರಕಾರದ ಪರವಾಗಿ ಹೇಳಿಕೆ ಕೊಡುತ್ತಿದ್ದಾರೆ ಎಂಬುದು ನಿಮಗೂ ಗೊತ್ತಿದೆ. ರಾಜ್ಯ ಬಿಜೆಪಿ ತೀರ್ಮಾನ ಕೈಗೊಂಡು ಕೇಂದ್ರದ ವರಿಷ್ಠರಿಗೆ ಕಳುಹಿಸಿದೆ. ಈ ಸಂಬಂಧ ಉತ್ತರಕ್ಕೆ ಕಾಯುತ್ತಿದ್ದೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್ತಿನ ನಾಯಕ ಬೋಜೆಗೌಡ ಮತ್ತು ಬಿಜೆಪಿ-ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಭಾಗವಹಿಸಿದ್ದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!