Daily story; Whose pain is bigger..?

ಹರಿತಲೇಖನಿ ದಿನಕ್ಕೊಂದು ಕಥೆ: ಯಾರ ನೋವು ದೊಡ್ಡದು..?

Daily story; ನಾವು-ನೀವು ಎಲ್ಲರೂ ಬದುಕಿನಲ್ಲಿ ಆಗೊಮ್ಮೆ ಈಗೊಮ್ಮೆ ಯಾವ್ಯಾವುದೋ ನೋವಿನಿಂದ ನರಳಿರಬಹುದಲ್ಲವೇ? ಆ ನೋವಿನ ಪ್ರಮಾಣ ಅಥವಾ ಅವಧಿ ಬೇರೆ ಬೇರೆ ಇರಬಹುದು! ಆದರೆ ನೋವೇ ಇಲ್ಲದವರು ಯಾರಾದರೂ ಇದ್ದಾರೆಯೇ? ಇರಲಿಕ್ಕಿಲ್ಲ ಅಲ್ಲವೇ? ನೋವಿನ ಬಗೆಗಿನ ಕತೆಯೊಂದು ಇಲ್ಲಿದೆ.

ಒಬ್ಬ ರಾಜಕುಮಾರ ಇದ್ದರಂತೆ. ವೈಭವೋಪೇತ ಅರಮನೆಯಲ್ಲಿ ವಾಸ. ಇಂತಹದ್ದು ಬೇಕು ಎಂದು ಬಾಯ್ಬಿಡುವ ಮುಂಚೆಯೇ ಅದನ್ನು ತಂದು ಮುಂದಿಡುವ ತಾಯ್ತಂದೆಯರು, ಕೂತು ಉಂಡರೂ ಮುಗಿಯದಷ್ಟು ಸಿರಿವಂತಿಕೆ.

ಇವೆಲ್ಲ ಇದ್ದರೂ ಆ ರಾಜಕುಮಾರರಿಗೆ ಮನಃಶಾಂತಿ ಇರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಅವರು ಬೌದ್ಧ ಧರ್ಮದ ಪ್ರಭಾವಕ್ಕೆ ಒಳಗಾದರು.
ತಮ್ಮ ಎಲ್ಲಾ ತುಡಿತಗಳಿಗೂ ಅಲ್ಲಿ ಉತ್ತರ ಸಿಗಬಹುದು ಎನಿಸಿತು.

ರಾಜ ಪರಿವಾರವನ್ನು ತೊರೆದರು. ಬೌದ್ಧ ಭಿಕ್ಷು ಆದರು. ಆನಂತರ ಅವರು ಕುಟೀರದಲ್ಲಿ ವಾಸಿಸುತ್ತಿದ್ದರು. ಚಾಪೆಯ ಮೇಲೆ ಮಲಗುತ್ತಿದರು. ಭಿಕ್ಷಾಟನೆಯಿಂದ ಸಿಗುತ್ತಿದ್ದ ಅನ್ನಾಹಾರಗಳ ಸೇವನೆ. ಧ್ಯಾನ-ಅಧ್ಯಯನಗಳಲ್ಲಿ ಮಗ್ನ.

ಮೊದಲಿನ ಸಿರಿವಂತ ಬದುಕಿಗೂ ಈಗಿನ ಬಡತನದ ಬದುಕಿಗೂ ಆಕಾಶ ಭೂಮಿಗಳಷ್ಟು ಅಂತರ. ಆದರೂ ಅವರಿಗೆ ಏನೋ ಸಾಧಿಸುತ್ತೇನೆಂಬ ಹುಮ್ಮಸ್ಸು. ಎಲ್ಲರ ಬದುಕಿನಲ್ಲೂ ಆಗುವಂತೆ ಎಲ್ಲವೂ ಚೆನ್ನಾಗಿದೆ ಎಂದು ಅವರು ಅಂದುಕೊಳ್ಳುತ್ತಿರುವ ಸಮಯದಲ್ಲೇ ಅವರಿಗೊಂದು ಸಮಸ್ಯೆ ಎದುರಾಯಿತು.

ಅವರ ಆರೋಗ್ಯದಲ್ಲಿ ಏರುಪೇರುಂಟಾಯಿತು. ಅವರನ್ನು ಸಂಧಿವಾತ ನೋವು ಕಾಡತೊಡಗಿತು. ಏನೋ ನೋವು ಬಂದಿದೆ.

ಒಂದೆರಡು ದಿನವಿದ್ದು ಹೊರಟು ಹೋಗುತ್ತದೆಂದು ಭಾವಿಸಿದ್ದ ನೋವು ಅವರಿಗೆ ಒಂದೇ ಸಮನೆ ಬಾಧಿಸತೊಡಗಿತು. ನಡೆಯಲಾಗುತ್ತಿರಲಿಲ್ಲ. ಕುಳಿತುಕೊಳ್ಳಲಾಗುತ್ತಿರಲಿಲ್ಲ. ಮಲಗಲೂ ಆಗುತ್ತಿರಲಿಲ್ಲ. ಅಷ್ಟೊಂದು ನೋವು! ಹೀಗಾಗಿ ಅವರು ಅಧ್ಯಯನ, ಧ್ಯಾನ, ಸಂಚಾರಗಳೆಲ್ಲವನ್ನೂ ಬಿಡಬೇಕಾಗಿ ಬಂದಿತು.

ಯಾವ ಔಷಧಿಯೂ ಅವರ ನೋವನ್ನು ಕಡಿಮೆ ಮಾಡಲಿಲ್ಲ. ಯಾರಿಗೆ ಹೇಳಿಕೊಳ್ಳಲೂ ಸಾಧ್ಯವಿಲ್ಲ. ಹೇಳಿಕೊಂಡರೂ ಪ್ರಯೋಜನವಿಲ್ಲ. ಇನ್ನು ಬದುಕುವುದೇ ಬೇಡವೆನ್ನಿಸುವಷ್ಟು ನೋವು ಅವರನ್ನು ಕಾಡುತ್ತಿತ್ತು.
ಈ ಪರಿಯ ನೋವಿನಿಂದ ನರಳುತ್ತಲಿದ್ದ ಅವರು ಒಂದು ದಿನ ಊರಿನಲ್ಲಿ ಸುತ್ತಾಡುವಾಗ ಮಕ್ಕಳು ಆಡುತ್ತಿರುವುದನ್ನು ಕಂಡರು.

ಮಕ್ಕಳೆಲ್ಲ ಕೇಕೆ ಹೊಡೆದು ಆನಂದದಿಂದ ಕಿರುಚಾಡುತ್ತಾ ಆಟವಾಡುತ್ತಿದ್ದರು. ಸುತ್ತ ಮುತ್ತಲಿನ ಪರಿವೆಯೇ ಇಲ್ಲದೆ ಆನಂದದಿಂದ ಆಡುತ್ತಿದ್ದ ಆ ಮಕ್ಕಳನ್ನು ನೋಡಿ ಈ ಬೌದ್ಧ ಭಿಕ್ಷುವಿಗೆ ಆಶ್ಚರ್ಯವಾಯಿತು. ಅವರು ಮತ್ತೂ ಗಮನವಿಟ್ಟು ಆ ಮಕ್ಕಳನ್ನು ನೋಡಿದರು. ಆಗ ಅವರಿಗೆ ಮಕ್ಕಳ ಗುಂಪಿನ ಮಧ್ಯೆ ಆಡುತ್ತಿದ್ದ ಒಬ್ಬ ಪುಟ್ಟ ಹುಡುಗಿಯು ಅವರ ಗಮನ ಸೆಳೆಯಿತು. ಆಕೆಗೆ ಒಂದು ಕಾಲಿರಲಿಲ್ಲ.

ಊರುಗೋಲಿನ ಸಹಾಯದಿಂದ, ಇರುವ ಒಂದೇ ಕಾಲಿನ ಆಸರೆಯಿಂದ, ಆಕೆ ಇತರ ಮಕ್ಕಳೊಂದಿಗೆ ಆಡುತ್ತಿದ್ದಳು. ಕುಣಿಯುತ್ತಿದ್ದಳು. ಕುಪ್ಪಳಿಸುತ್ತಿದ್ದಳು. ಆಕೆಯನ್ನು ನೋಡಿದ ತಕ್ಷಣ ಬೌದ್ಧ ಭಿಕ್ಷುವಿಗೆ ‘ಈ ಪುಟ್ಟ
ಹುಡುಗಿಗೆ ಒಂದು ಕಾಲೇ ಇಲ್ಲ. ಆದರೆ ಅದರ ಪರಿವೆಯೇ ಇಲ್ಲದೆ ಆನಂದದಿಂದ ಆಡುತ್ತಿದ್ದಾಳೆ.

ನನಗೆ ಎರಡೂ ಕಾಲುಗಳಿವೆ, ಕೈಗಳಿವೆ. ಆದರೆ ಸ್ವಲ್ಪ ನೋವಿದೆ. ಆ ನೋವನ್ನು ತಡೆಯಲಾಗದೆ ಬದುಕುವುದೇ ಬೇಡ ಎಂದುಕೊಳ್ಳುತ್ತಿದ್ದೇನಲ್ಲಾ ನಾನೆಂಥ ದಡ್ಡ?’ ಎಂಬ ಯೋಚನೆ ಮೂಡಿತು.

ತಕ್ಷಣ ಅವರ ಮುಖದಲ್ಲಿ ನಗು ಅರಳಿತು. ಆ ಕ್ಷಣವೇ ಅವರ ಆಚಾರ- ವಿಚಾರಗಳು ಬದಲಾದವು. ಆಶ್ಚರ್ಯವೆಂದರೆ ಕೆಲವೇ ದಿನಗಳಲ್ಲಿ ಅವರ ನೋವು ಅವರನ್ನು ಬಾದಿಸುತ್ತಿರಲಿಲ್ಲ! ಎಂದೋ ಓದಿದ್ದ ಈ ಪುಟ್ಟ ಕತೆಯೊಂದಿಗೆ ಮತ್ತೊಂದು ಮಾತೂ ನೆನಪಿಗೆ ಬರುತ್ತಿದೆ.

ಬದುಕಿನಲ್ಲಿ ನೋವುಗಳನ್ನು ಎದುರಿಸಬೇಕಾಗಿ ಬಂದಾಗ ನಮಗಿಂತ ಹೆಚ್ಚು ನೋವಿನಿಂದ ನರಳುತ್ತಿರುವವರನ್ನು ನೋಡಿ, ನಮಗೆ ನಾವೇ ಸಾಂತ್ವನ ಹೇಳಿಕೊಳ್ಳಬೇಕಂತೆ! ಹಾಗೆಯೇ ನಲಿವು ಬಂದಾಗ ನಮಗಿಂತ ಕಡಿಮೆ ನಲಿವಿನಲ್ಲಿಯೂ ನಗು-ನಗುತ್ತಿರುವವರನ್ನು ನೋಡಿ ಸಮಾಧಾನ ಮಾಡಿಕೊಳ್ಳಬೇಕಂತೆ! ಅದಿರಲಿ. ನೋವು-ನಲಿವುಗಳು ದೈಹಿಕವೋ? ಮಾನಸಿಕವೋ? ಯಾರ ನೋವು ದೊಡ್ಡದು? ನಮ್ಮದೋ? ಅವರದ್ದೋ?

ಕೃಪೆ: ಎಸ್.ಷಡಕ್ಷರಿ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!