Congress government's guarantee of price rise: B.Y. Vijayendra

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ ಎಂದರು.

ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.

ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.

ತಮಿಳುನಾಡಿನ ರಾಜಕಾರಣವು ಕೇಂದ್ರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು ನೋಡುತ್ತ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಈ ಬೆಳವಣಿಗೆ ದೇಶಕ್ಕೆ ಮಾರಕ. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯದಲ್ಲೂ ಇದೇ ಧೋರಣೆಯನ್ನು ರಾಜ್ಯದ ಸರಕಾರ, ತಮಿಳುನಾಡಿನ ಸರಕಾರಗಳು ಅನುಸರಿಸುತ್ತಿವೆ. ಡಿ ಲಿಮಿಟೇಶನ್ ವಿಚಾರದಲ್ಲೂ ಕೇಂದ್ರದ ಗೃಹ ಸಚಿವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಒನ್ ನೇಶನ್ ಒನ್ ಇಲೆಕ್ಷನ್ ಬಗ್ಗೆ ಆಲೋಚಿಸಿದ್ದಾರೆ.

ಡಿ ಲಿಮಿಟೇಶನ್ ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಗಳಿಗೆ ನೈಜ ಕಳಕಳಿ ಇದ್ದರೆ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಅಲ್ಲಿನ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನವನ್ನು ಮಾಡಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ತಮಿಳುನಾಡಿನ ಸಚಿವರು ಬಂದಾಗ ಅವರಿಗೆ ರಾಜಾತಿಥ್ಯ ನೀಡಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಮತ್ತು ಸರಕಾರವು ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತು ಮಾತನಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಡಿ ಲಿಮಿಟೇಶನ್ ವಿಚಾರದಲ್ಲಿ ತಮಿಳುನಾಡಿನ ಸರಕಾರ ದೇಶವಿರೋಧಿ ನಡೆ ಅನುಸರಿಸುತ್ತಿದೆ. ಅದಕ್ಕೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಧ್ವನಿಗೂಡಿಸುವುದು ನಿಜಕ್ಕೂ ದುರ್ದೈವ ಎಂದರು.

ಸಿದ್ದರಾಮಯ್ಯನವರು ಕೇಂದ್ರದ ಜೊತೆ ರಾಜಕೀಯ ಸಂಘರ್ಷಕ್ಕೆ ಇಳಿದಿದ್ದಾರೆ. ಇದರಿಂದ ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು. ಆದರೆ, ಇದು ರಾಜ್ಯದ ಜನತೆಗೆ ಮಾರಕ ಎಂದರಲ್ಲದೆ, ಈಚೆಗೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘನೆ ಮಾಡಿದ್ದಾರೆ.

ಇವತ್ತು ಪ್ರಧಾನಿ ಮತ್ತು ಹಣಕಾಸು ಸಚಿವೆ ಮಧ್ಯಸ್ಥಿಕೆಯಿಂದಾಗಿ ಜಮ್ಮು- ಕಾಶ್ಮೀರಕ್ಕೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಯಾಕೆ ಈ ರೀತಿ ಕೇಂದ್ರ ಸರಕಾರದ ಜೊತೆಗೆ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ? ಅದರಿಂದ ರಾಜ್ಯಕ್ಕೆ ಯಾವ ರೀತಿ ಒಳಿತಾಗಲು ಸಾಧ್ಯ ಎಂದು ಕೇಳಿದರು. ಇದನ್ನೂ ಸದನದಲ್ಲಿ ಮಾತನಾಡುವುದಾಗಿ ತಿಳಿಸಿದರು.

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!