Congress government's guarantee of price rise: B.Y. Vijayendra

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ ಎಂದರು.

ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.

ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.

ತಮಿಳುನಾಡಿನ ರಾಜಕಾರಣವು ಕೇಂದ್ರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು ನೋಡುತ್ತ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಈ ಬೆಳವಣಿಗೆ ದೇಶಕ್ಕೆ ಮಾರಕ. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯದಲ್ಲೂ ಇದೇ ಧೋರಣೆಯನ್ನು ರಾಜ್ಯದ ಸರಕಾರ, ತಮಿಳುನಾಡಿನ ಸರಕಾರಗಳು ಅನುಸರಿಸುತ್ತಿವೆ. ಡಿ ಲಿಮಿಟೇಶನ್ ವಿಚಾರದಲ್ಲೂ ಕೇಂದ್ರದ ಗೃಹ ಸಚಿವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಒನ್ ನೇಶನ್ ಒನ್ ಇಲೆಕ್ಷನ್ ಬಗ್ಗೆ ಆಲೋಚಿಸಿದ್ದಾರೆ.

ಡಿ ಲಿಮಿಟೇಶನ್ ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಗಳಿಗೆ ನೈಜ ಕಳಕಳಿ ಇದ್ದರೆ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಅಲ್ಲಿನ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನವನ್ನು ಮಾಡಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ತಮಿಳುನಾಡಿನ ಸಚಿವರು ಬಂದಾಗ ಅವರಿಗೆ ರಾಜಾತಿಥ್ಯ ನೀಡಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಮತ್ತು ಸರಕಾರವು ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತು ಮಾತನಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಡಿ ಲಿಮಿಟೇಶನ್ ವಿಚಾರದಲ್ಲಿ ತಮಿಳುನಾಡಿನ ಸರಕಾರ ದೇಶವಿರೋಧಿ ನಡೆ ಅನುಸರಿಸುತ್ತಿದೆ. ಅದಕ್ಕೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಧ್ವನಿಗೂಡಿಸುವುದು ನಿಜಕ್ಕೂ ದುರ್ದೈವ ಎಂದರು.

ಸಿದ್ದರಾಮಯ್ಯನವರು ಕೇಂದ್ರದ ಜೊತೆ ರಾಜಕೀಯ ಸಂಘರ್ಷಕ್ಕೆ ಇಳಿದಿದ್ದಾರೆ. ಇದರಿಂದ ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು. ಆದರೆ, ಇದು ರಾಜ್ಯದ ಜನತೆಗೆ ಮಾರಕ ಎಂದರಲ್ಲದೆ, ಈಚೆಗೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘನೆ ಮಾಡಿದ್ದಾರೆ.

ಇವತ್ತು ಪ್ರಧಾನಿ ಮತ್ತು ಹಣಕಾಸು ಸಚಿವೆ ಮಧ್ಯಸ್ಥಿಕೆಯಿಂದಾಗಿ ಜಮ್ಮು- ಕಾಶ್ಮೀರಕ್ಕೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಯಾಕೆ ಈ ರೀತಿ ಕೇಂದ್ರ ಸರಕಾರದ ಜೊತೆಗೆ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ? ಅದರಿಂದ ರಾಜ್ಯಕ್ಕೆ ಯಾವ ರೀತಿ ಒಳಿತಾಗಲು ಸಾಧ್ಯ ಎಂದು ಕೇಳಿದರು. ಇದನ್ನೂ ಸದನದಲ್ಲಿ ಮಾತನಾಡುವುದಾಗಿ ತಿಳಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!