JDS protests against Greater Bangalore Bill

ಗ್ರೇಟರ್‌ ಬೆಂಗಳೂರು ವಿಧೇಯಕ ವಿರುದ್ಧ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು: ರಿಯಲ್‌ ಎಸ್ಟೇಟೆ ದಂಧೆಗೆ, ಕನ್ನಡಿಗರನ್ನು ಒಡೆದು ಆಳಲು ಗ್ರೇಟರ್‌ ಬೆಂಗಳೂರು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ (JDS) ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ ೪೩,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!