Counterfeit medicine.. Minister Dinesh Gundurao's important promise

ನಕಲಿ ಔಷಧಿ.. ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಭರವಸೆ

ಬೆಂಗಳೂರು: ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತಚತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17 ಬಿ, (b), (c) (d) ಮತ್ತು (e) ರ ಔಷಧ ಮತ್ತು ಕಾಂತಿ ವರ್ಧಕ ಅಧಿನಿಯಮ 1940 ಮತ್ತು ನಿಯಮಗಳಡಿಯಲ್ಲಿ ಸೂಕ್ತ ಕ್ರಮಕೈಗೊಂಡು ವಿವಿಧ ನ್ಯಾಯಾಲಯಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.

ಕಳೆದ 3 ವರ್ಷಗಳಲ್ಲಿ ಒಟ್ಟು 20 ನಕಲಿ ಔಷಧ ತಯಾರಿಕಾ ಕಂಪನಿ ಮತ್ತು 01 ಔಷಧ ಮಾರಾಟಗಾರರ ಪ್ರಕರಣಗಳನ್ನು ಪತ್ತೆ ಮಾಡಿ ಮೊಕ್ಕದ್ದಮೆ ಹೂಡಲಾಗಿದೆ. 2022-23 ನೇ ಸಾಲಿನಲ್ಲಿ ಒಟ್ಟು 06, 2023-24ನೇ ಸಾಲಿನಲ್ಲಿ ಒಟ್ಟು 10 ನಕಲಿ ಔಷಧ ತಯಾರಕರು ಮತ್ತು 2024-25 ನೇ ಸಾಲಿನಲ್ಲಿ 04 ನಕಲಿ ಔಷಧ ತಯಾರಕರ ಮತ್ತು 01 ನಕಲಿ ಔಷಧ ಮಾರಾಟಗಾರರ ವಿರುದ್ಧ ವಿವಿಧ ಮಾನ್ಯ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

ಕಾನೂನು ರೀತ್ಯಾ ಅಗತ್ಯ ಕ್ರಮಗಳನ್ನು ಸಹ ಜರುಗಿಸಲಾಗಿದೆ. ಈ ಬಗ್ಗೆ ಕೂಡಲೇ Drug Recall policy ಜಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ಎರಲು ಸೇವೆಯಲ್ಲಿರುವವರನ್ನು ವಾಪಸ್ಸು ಪಡೆಯಲಾಗುವುದು. ವೈದ್ಯರ ಅಗತ್ಯತೆ ಇಲಾಖೆ ಇದೆ. ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 130 ಅಧಿಕಾರಿ ನೌಕರರು ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದು, ಅವರನ್ನು ಇಲಾಖೆಗೆ ವಾಪಸ್ಸು ಪಡೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶರವಣ ಟಿ.ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಹಲವಾರು ಬಾರಿ ವಾಪಸ್ಸು ಪಡೆಯಲು ಅದೇಶ ಮಾಡಿದ್ದರೂ ಸಹ ಅಧಿಕಾರಿಗಳು ಕರ್ನಾಟಕ ಆಡಳಿತ ನ್ಯಾಯಾಲಯದಲ್ಲಿ (ಕೆ.ಎ.ಟಿ) ಮೊಕ್ಕದ್ದಮೆ ಹೂಡಿ, ಸ್ಟೇ ತಂದು ಅಲ್ಲೇ ಮುಂದುವರೆಯುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಅಧಿಕಾರಿ / ನೌಕರರನ್ನು ವಾಪಸ್ಸು ಪಡೆಯಲು ಕ್ರಮ ವಹಿಸಲಾಗುವುದು.

ಕೆಲ ಅಧಿಕಾರಿಗಳು ನಕಲಿ ಅಂಕಪಟ್ಟಿ ಸಲ್ಲಿಸಿರುವ ದೂರಿನನ್ವಯ ಇಲಾಖೆಗೆ ಬಂದಂತಹ ದೂರಿನ ಆಧಾರದ ಮೇರೆಗೆ ಮುಖ್ಯ ಜಾಗೃತಾಧಿಕಾರಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ತನಿಖೆ ನಡೆಸಿ 2016ನೇ ಫೆಬ್ರವರಿ 23 ರಂದು ತನಿಖಾ ವರದಿ ಸಲ್ಲಿಸಿದ್ದು, ಸಿಬ್ಬಂದಿಗಳ ವಿದ್ಯಾರ್ಹತೆ ನೈಜತೆ ಬಗ್ಗೆ ಖಾತರಿಪಡಿಸಿಕೊಳ್ಳಳು ಸೂಚಿಸಿದ್ದು, ಅದರಂತೆ ನಿರ್ದೇಶನಾಲಯವು 2017ನೇ ಮಾರ್ಚ್ 31ರ ಪತ್ರದಲ್ಲಿ ಮೈಸೂರಿನ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಇವರಿಗೆ ಕೋರಲಾಗಿತ್ತು.

ಅಂಕಪಟ್ಟಿ ಪರಿಶೀಲಿಸಿದ ವಿಶ್ವವಿದ್ಯಾಲಯ 6 ಕಿರಿಯ ಆರೋಗ್ಯ ಸಹಾಯಕರುಗಳ ದಾಖಲಾತಿಗಳು ನೈಜತೆಯಿಂದ ಕೂಡಿರುವುದಿಲ್ಲ ಎಂದು ವರದಿ ನೀಡಿರುತ್ತಾರೆ.

ಇದರ ಆಧಾರದ ಮೇಲೆ ಸುಳ್ಳು ಅಂಕಪಟ್ಟಿ ಪತ್ತು ಪ್ರಮಾಣ ಪತ್ರಗಳನ್ನು ನೀಡಿದ್ದ 6 ಕಿರಿಯ ಸಹಾಯಕರುಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ 2018ನೇ ಜನವರಿ 10 ರಂದು ಅಮಾನತ್ತುಗೊಳಿಸಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!