100 acre terraforma waste unit revived..!

100 ಎಕರೆಯಲ್ಲಿ ಟೆರ್ರಾಫಾರ್ಮ ತ್ಯಾಜ್ಯ ಘಟಕಕ್ಕೆ ಮರು ಜೀವ..!: ದೊಡ್ಡಬಳ್ಳಾಪುರಕ್ಕೆ ಮತ್ತೊಂದು BBMP ಕಸದ ಕಂಟಕ..

ದೊಡ್ಡಬಳ್ಳಾಪುರ (terraforma): ಬಿಬಿಎಂಪಿ ಕಸ ವಿಲೇವಾರಿ ಘಟಕದಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳಲ್ಲಿ, ಹಲವರ ಪಾಪದ ಕೂಸಾಗಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಒಕ್ಕರಿಸಿರುವ ಬಿಬಿಎಂಪಿ ತಾಲೂಕಿನ ಜನರ ಆಶಯದ ವಿರುದ್ಧ ಮತ್ತೊಂದು ಆತಂಕಕಾರಿ ನಿರ್ಣಯ ಕೈಗೊಂಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಒಂದು ಸಾವಿರ ಟನ್ ತ್ಯಾಜ್ಯ ಸಂಸ್ಕರಣೆಯಾಗುತ್ತಿದ್ದು, ಪ್ರತಿದಿನ ಸುಮಾರು 2,500 ಟನ್ ಮಿಶ್ರತ್ಯಾಜ್ಯ ಭೂಭರ್ತಿಯಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಆಘಾತಕಾರಿಯಾಗಿ 100 ಎಕರೆ ಜಾಗವನ್ನು ದೊಡ್ಡಬಳ್ಳಾಪುರದ ಟೆರ್ರಾಫಾರ್ಮ್ ಬಳಿ ಅಂತಿಮಗೊಳಿಸಲಾಗಿದೆ. ಈಗಾಗಲೇ ಸರ್ಕಾರದ 50 ಎಕರೆ ಭೂಮಿ ಇದ್ದು, ಖಾಸಗಿಯವರಿಂದ ಸುಮಾರು 65 ಎಕರೆ ಖರೀದಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟೆರ್ರಾಫಾರ್ಮಗೆ ಮರು ಜೀವ..!

2006ರಲ್ಲಿ ಈ ಭಾಗದ ರಿಯಲ್‌ ಎಸ್ಟೇಟ್‌ ಏಜನ್ಸಿಗಳು ಪ್ರಥಮ ಬಾರಿಗೆ ಗುಂಡ್ಲಹಳ್ಳಿ ಸಮೀಪ ರೈತರಿಗೆ ಉತ್ತಮ ಬೆಲೆ ಕೊಡಿಸುವ ಮೂಲಕ ಭೂಮಿ ಖರೀದಿಸಿ ಟೆರ್ರಾಫಾರ್ಮ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟರು. ಆದರೆ ಕಸವಿಲೇವಾರಿ ಘಟಕ ದಿನ ಕಳೆದಂತೆ ಈ ಭಾಗದ ಜನರ ಪಾಲಿನ ಮೃತ್ಯು ಕೂಪವಾಗಿ ಕಾಡಲಾರಂಭಿಸಿತ್ತು.

ಇದರ ವಿರುದ್ಧ ಸಿಡಿದೆದ್ದ ಸ್ಥಳೀಯ ಜನ 2014ರಲ್ಲಿ ಟೆರ್ರಾ ಫಾರ್ಮ ಬಂದ್‌ ಮಾಡಿಸುವಲ್ಲಿ ಸಫಲರಾಗಿದ್ದರು.

ಆದರೆ ಈಗ ದೊಡ್ಡಬಳ್ಳಾಪುರಕ್ಕೆ ಮತ್ತೆ ಬಿಬಿಎಂಪಿ ಕಸ ಕಂಟಕ ಎದುರಾಗಿದ್ದು, ತಾಲೂಕಿನ ಜನರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ, ಟೆರ್ರಾಫಾರ್ಮ್ವನ್ನು ಮತ್ತೆ ಆರಂಭಿಸಲು ಬಿಬಿಎಂಪಿ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

ಈಗಾಗಲೇ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿ ಘಟಕದಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳಲ್ಲಿ ಇಲ್ಲಿಯವರೆಗೂ ಹಲವಾರು ಸುತ್ತಿನ ಹೋರಾಟಗಳು ನಡೆದಿವೆ. ಆದರೆ ಅಧಿಕಾರಿಗಳ ಹಾಗೂ ಜನ ಪ್ರತಿನಿಧಿಗಳ ಭರವಸೆಗಳನ್ನು ನಂಬಿ ಇಲ್ಲಿನ ಜನ ತೊಂದರೆಗಳನ್ನು ಅನುಭವಿಸುವಂತಾಗಿದೆ.

ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಎಲ್ಲಾ ಜನರ ಅಭಿಪ್ರಾಯದಂತೆ ಹೋರಾಟ ರೂಪಿಸುವ ಮೂಲಕ ಇಲ್ಲಿಗೆ ಮತ್ತೆ ಕಸ ಬಾರದಂತೆ ತಡೆಯಲು ಹೋರಾಟ ನಡೆದಿದೆ.

ಗ್ರಾಮಸಭೆಗಳು ನಡೆದು ನಂತರ ಎಲ್ಲಾ ಸಂಘಟನೆಗಳು, ರಾಜಕೀಯ ಪಕ್ಷಗಳನ್ನು ಒಳಗೊಂಡ ಹೋರಾಟ ಸಮಿತಿ ರಚಿಸಿಕೊಂಡು ಮುಂದಿನ ಹೋರಾಟವನ್ನು ವ್ಯವಸ್ಥಿತವಾಗಿ ನಡೆಸಬೇಕೆಂಬ ಹೋರಾಟ ಏಕಾಏಕಿ ತಣ್ಣಗಾಗಿ ಹೋಯಿತು.

ಹಲವರ ಪಾಪದ ಕೂಸಾಗಿ ತಾಲ್ಲೂಕಿಗೆ ಒಕ್ಕರಿಸಿರುವ ಬಿಬಿಎಂಪಿ ಕಸದ ವಿರುದ್ಧ ಮತ್ತೆ ಜನ ಜಾಗೃತಿ ಮೂಡಿಸಿ ಎಲ್ಲರನ್ನು ಒಳಗೊಂಡಂತೆ ಹೋರಾಟ ಮಾಡುವ ತುರ್ತು ಪರಿಸ್ಥಿತಿ ಎದುರಾಗಿದೆ.

ಈಗಾಗಲೇ ಬಿಬಿಎಂಪಿ ಕಸ ವಿಲೇವಾರಿ ಘಟಕದ ಸುತ್ತ ಮುತ್ತಲಿನ ಸಕ್ಕರೆಗೊಳ್ಳಹಳ್ಳಿ, ಭಕ್ತರಹಳ್ಳಿ, ಸಾಸಲು ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಿಂದ ದನ, ಕರು, ಮೇಕೆ, ಕುರಿಗಳಂತಹ ಸಾಕುಪ್ರಾಣಿ, ಹಣ್ಣು, ತರಕಾರಿಗಳನ್ನು ಖರೀದಿ ಮಾಡಲು ಜನ ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದಿಷ್ಟೇ ಅಲ್ಲದೆ ಈ ಗ್ರಾಮಗಳಿಗೆ ಹೆಣ್ಣುಗಳನ್ನು ಕೊಡಲು, ಹೆಣ್ಣುಗಳನ್ನು ಪಡೆಯಲು ಯೋಚಿಸುವಂತಾಗಿದೆ. ಈ ಸ್ಥಿತಿ ಕಸ ವಿಲೇವಾರಿ ಘಟಕದ ಗ್ರಾಮಗಳಿಗೆ ಮಾತ್ರ ಸೀಮಿತ ಎನ್ನುತ್ತ ಕಸ ವಿಲೇವಾರಿ ಘಟಕದಿಂದ ದೂರದ ಗ್ರಾಮಗಳ ಜನರು ಮೈ ಮರೆತು ಸುಮ್ಮನೆ ಕೂರುವಂತಿಲ್ಲ.

ಬಿಬಿಎಂಪಿ ಕಸದಿಂದ ರೋಗ ಭಾದೆಗಳಿಗೆ ತುತ್ತಾದ ಜನ, ಜಾನುವಾರುಗಳಿಂದ ಹರಡುವ ಖಾಯಿಲೆಗಳು ಊಹೆಗೂ ನಿಲುಕುವುದಿಲ್ಲ.

ಈ ಹಿಂದಿನ ಹೋರಾಟಗಳ ಏಳು ಬೀಳು, ಸ್ವಾರ್ಥಗಳನ್ನು ಬದಿಗಿಟ್ಟು ಟೆರ್ರಾಫಾರ್ಮ ಆರಂಭಿಸಲು ಸಿದ್ದತೆ ನಡೆಸಿರುವ ಬಿಬಿಎಂಪಿ ಕಸದ ವಿರುದ್ಧ ತಾಲೂಕಿನ ಜನತೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂಬುದು ಪ್ರಜ್ಞಾವಂತರ ಒತ್ತಾಯವಾಗಿದೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!