Discussion for promotion of physical teachers to the post of co-teachers; Minister Madhu Bangarappa

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ಚರ್ಚೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ (Madhu bangarappa) ಅವರು ತಿಳಿಸಿದರು.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ.

ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.

ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ.

ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.

ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ.

ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ.

ಆದಾಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!