Discussion for promotion of physical teachers to the post of co-teachers; Minister Madhu Bangarappa

ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ಚರ್ಚೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು: ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ (Madhu bangarappa) ಅವರು ತಿಳಿಸಿದರು.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆ ಆಗಿರುತ್ತದೆ.

ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತುತ ಜಾರಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಗ್ರೂಪ್ ಬಿ ಮತ್ತು ಮುಖ್ಯ ಶಿಕ್ಷಕರು / ಉಪ ಪ್ರಾಂಶುಪಾಲರು ವೃಂದದ ಹುದ್ದೆಗೆ ಬಡ್ತಿಗೆ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದವು ಪೋಷಕ ವೃಂದವಾಗಿರುತ್ತದೆ.

ಮುಖ್ಯ ಶಿಕ್ಷಕರ ವೃಂದಕ್ಕೆ, ವೃಂದ ಮತ್ತು ನೇಮಕಾತಿ ನಿಯಮದಂತೆ ನಿಗದಿಪಡಿಸಿರುವ ವಿದ್ಯಾರ್ಹತೆ ಎಂದರೆ ಪದವಿ ಜೊತೆಗೆ ಶೈಕ್ಷಣಿಕ ಆಡಳಿತಕ್ಕೆ ಅಗತ್ಯ ಇರುವ ಬಿ.ಎಡ್ ಪದವಿ. ದೈಹಿಕ ಶಿಕ್ಷಣ ಶಿಕ್ಷಕರು ಬಿ.ಎಡ್. ಪದವಿಯನ್ನು ಹೊಂದಿರುವುದಿಲ್ಲ.

ಮುಖ್ಯ ಶಿಕ್ಷಕರು ಬೋಧನೆಯಲ್ಲಿ ಪ್ರಾವೀಣ್ಯತೆ ಹಾಗೂ ಅನುಭವವನ್ನು ಹೊಂದಿರುತ್ತಾರೆ. ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ಮಾಡುತ್ತಾರೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆ ತರಬೇತಿ ಆಗಿಲ್ಲದೆ ಇರುವುದರಿಂದ ಸಹ ಶಿಕ್ಷಕರ ಅನುಪಸ್ಥಿತಿಯಲ್ಲಿ ವಿಷಯ ಬೋಧನೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ.

ಮುಖ್ಯ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು / ಹಿರಿಯ ಉಪನ್ಯಾಸಕರು ನಿರ್ದೇಶಕರು ಮಧ್ಯಾಹ್ನ ಯೋಜನೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಹುದ್ದೆಗಳಿಗೆ ಭರ್ತಿ ಹೊಂದಲು ಅವಕಾಶವಿರುತ್ತದೆ.

ಈ ಎಲ್ಲಾ ಹುದ್ದೆಗಳು ಶೈಕ್ಷಣಿಕವಾಗಿ ಶಾಲೆಗಳಲ್ಲಿ ವಿಷಯ ಬೋಧನೆ ಅನುಭವವನ್ನು ಹಾಗೂ ಶೈಕ್ಷಣಿಕ ಮಾರ್ಗದರ್ಶನ ನೀಡುವ ಅನುಭವವನ್ನು ಅಪೇಕ್ಷಿಸುತ್ತದೆ. ಆದರೆ ದೈಹಿಕ ಶಿಕ್ಷಕರಿಗೆ ವಿಷಯ ಬೋಧನೆಯ ತರಬೇತಿ ಇರುವುದಿಲ್ಲ. ಬದಲಾಗಿ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾತ್ರ ತರಬೇತಿಯನ್ನು ಪಡೆದಿರುತ್ತಾರೆ.

ದೈಹಿಕ ಶಿಕ್ಷಣದ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿದ್ದು, ಇವರ ಪ್ರಾವೀಣ್ಯತೆ ಹಾಗೂ ಅನುಭವ ಆಧಾರದ ಮೇಲೆ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಸಹಾಯಕ ನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರು (ದೈಹಿಕ ಶಿಕ್ಷಣ) ಹುದ್ದೆಗಳಿಗೆ ಮುಂಬಡ್ತಿ ಕಲ್ಪಿಸಲಾಗಿದೆ.

ಶೈಕ್ಷಣಿಕ ಆಡಳಿತದ ಹಿತದೃಷ್ಠಿಯಿಂದ ಪ್ರಸ್ತುತ ವೃಂದ ಮತ್ತು ನೇಮಕಾತಿ ನಿಯಮದಂತೆ ಪದವಿ ಹಾಗೂ ಶಿಕ್ಷಣದಲ್ಲಿ ಪದವಿ ವಿದ್ಯಾರ್ಹತೆ ಪೋಷಕ ವೃಂದ ಎಂಬುದಾಗಿ ಗುರುತಿಸಿರುವ ವೃಂದದಿಂದ ಮುಖ್ಯ ಶಿಕ್ಷಕರ ವೃಂದಕ್ಕೆ ಬಡ್ತಿಗಳನ್ನು ಪರಿಗಣಿಸಲಾಗುತ್ತಿದೆ.

ಆದಾಗ್ಯೂ ದೈಹಿಕ ಶಿಕ್ಷಕರಿಗೆ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಆದೇಶಗಳನ್ನು ಪರಿಶೀಲಿಸಿ ನಂತರ ಮಾನ್ಯ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಶಾಸಕ ಚಂದ್ರು ಲಮಾಣಿ ಬಂಧನ: ಬಿ.ವೈ. ವಿಜಯೇಂದ್ರ ಹೇಳಿದ್ದು ಹೀಗೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಂಜಾರ ಸಮಾಜವನ್ನೇ ಟಾರ್ಗೆಟ್ ಮಾಡುತ್ತಿರುವುದು ಎಲ್ಲರಿಗು ಗೊತ್ತಿರುವ ವಿಚಾರ; ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="119679"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!