ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣರಾಗಿದ್ದಾರೆ ಆರೋಪಿಸಿ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravaty Sulibele) ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಮಾ. 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಭಾಷಣದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಸಲಹೆ ಮಾಡಿದ್ದರು. Chakravaty Sulibele
ಪ್ರಚೋದನಕಾರಿ ಭಾಷಣ ಮಾಡಿ, ಕೋಮುದ್ವೇಷಕ್ಕೆ ಕಾರಣರಾಗಿದ್ದಾರೆ ಆರೋಪಿಸಿ ರಶೀದ್ ಉಳ್ಳಾಲ ನೀಡಿದ್ದ ದೂರಿನ ಹಿನ್ನೆಲೆ ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ದಾಖಲಾಗಿದೆ.
ಸೂಲಿಬೆಲೆ ಹೇಳಿದ್ದು;
ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ತಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ.
ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.