ಹರಿತಲೇಖನಿ ದಿನಕ್ಕೊಂದು ಕಥೆ: ಶಿಕ್ಷೆ

Daily story; punishment

Daily story: ಈ ಪ್ರಪಂಚದಲ್ಲಿ ಅನೇಕ ಜನರು ತಪ್ಪು ಮಾಡಿದಾಗ ಶಿಕ್ಷೆಗೆ ಒಳಗಾಗುವುದುಂಟು. ಶಿಕ್ಷೆಯ ಉದ್ದೇಶ-ಶಿಕ್ಷ ಣವೇ ಆಗಿದೆ. ಒಮ್ಮೆ ತಪ್ಪು ಮಾಡಿದವನು ಮುಂದಕ್ಕೆಂದೂ ಅಂತಹ ತಪ್ಪು ಮಾಡದಿರುವಂತಹ ಶಿಕ್ಷಣ ನೀಡುವುದಕ್ಕಾಗಿ ನಮ್ಮ ಆಡಳಿತ ವ್ಯವಸ್ಥೆಯಲ್ಲಿ

ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಗಳಿವೆ. ಇದರಿಂದ ನಮ್ಮ ಸಮಾಜವನ್ನು, ಜನಜೀವನವನ್ನು ಸರಿ ಮಾರ್ಗದಲ್ಲಿ ಮುನ್ನಡೆಸುವಂತಹ ಕೆಲಸ ಸಾಧ್ಯ. ಈ ಬಗೆಯ ನ್ಯಾಯಾಂಗ ಮಹತ್ವವನ್ನು ನಿರೂಪಿಸುವ ಒಂದು ಪ್ರಸಂಗ ಇಲ್ಲಿದೆ.

ಚೀನಾ ದೇಶದಲ್ಲಿ ಒಬ್ಬ ಚಿಂತಕರ ಪ್ರಸಿದ್ಧಿಯನ್ನು ಕೇಳಿ ಅಲ್ಲಿಯ ಅರಸನು ಅವರನ್ನು ತನ್ನ ರಾಜ್ಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದನು. ಈ ನ್ಯಾಯಾಧೀಶರು ಸೂಕ್ತ ನ್ಯಾಯ ತೀರ್ಪುಗಳಿಂದಾಗಿ ಬಹು ವಿಖ್ಯಾತರಾದರು.

ಅಲ್ಲಿಯ ರಾಜಧಾನಿಯಲ್ಲಿ ಒಬ್ಬ ಶ್ರೀಮಂತ ವ್ಯಾಪಾರಿಯ ಬಳಿ ಸಾಕಷ್ಟು ಸಂಪತ್ತು ಇತ್ತು. ಇದೆಲ್ಲವೂ ಬಡ ಜನರ ಶೋಷಣೆಯಿಂದ ಸಂಗ್ರಹಿಸಿದ್ದು, ಅದರ ರಕ್ಷ ಣೆಗಾಗಿ ಬಲಿಷ್ಠ ರಕ್ಷ ಕರನ್ನೂ ನೇಮಿಸಿಕೊಂಡಿದ್ದ. ಹಾಗಿದ್ದರೂ ಒಮ್ಮೆ ಕಳ್ಳತನ ನಡೆದೇ ಬಿಟ್ಟಿತು ಹಾಗೂ ಕಳ್ಳನನ್ನು ಬಂಧಿಸಲಾಯಿತು.

ಈ ಕಳ್ಳನನ್ನು ಸುಪ್ರಸಿದ್ಧ ನ್ಯಾಯಾಧೀಶರೆದುರು ಹಾಜರುಪಡಿಸಿದಾಗ ಆತನು ತನ್ನ ಕಳ್ಳತನದ ಅಪರಾಧವನ್ನು ಒಪ್ಪಿಕೊಂಡದ್ದಲ್ಲದೆ, ಈ ಹಿಂದೆ ಮಾಡಿದ್ದ ಕಳ್ಳತನಗಳನ್ನೂ ಒಪ್ಪಿಕೊಂಡನು.

ಆ ಕಳ್ಳನಿಗೆ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದ ನ್ಯಾಯಾಧೀಶರು ಶ್ರೀಮಂತ ವ್ಯಾಪಾರಿಯನ್ನು ಕರೆಸಿ, ಆತನು ಧನ ಸಂಗ್ರಹ ಮಾಡಿದ ವಿಧಾನದ ಬಗ್ಗೆ ಪ್ರಶ್ನಿಸತೊಡಗಿದರು. ಆದರೆ ತನ್ನ ಗುಟ್ಟು ಬಿಡಲೊಪ್ಪದ ಆ ವ್ಯಾಪಾರಿ ‘ಎಲ್ಲವೂ ನನ್ನ ವ್ಯಾಪಾರದ ಫಲವಾಗಿದೆ’ ಎಂದು ವಾದಿಸಿದನು. ಬಡವರ ಶೋಷಣೆಯ ತಪ್ಪನ್ನು ಒಪ್ಪಿಕೊಳ್ಳಲೇ ಇಲ್ಲ.

ನ್ಯಾಯಾಧೀಶರು ವ್ಯಾಪಾರಿಗೆ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದರು. ಸಿಟ್ಟುಗೊಂಡ ವ್ಯಾಪಾರಿ ಪ್ರಶ್ನಿಸಿದ- ‘ನೀವು ಕಳ್ಳನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದರೆ, ನನಗೇಕೆ ಎರಡು ವರ್ಷ ವಿಧಿಸುತ್ತೀರಿ?’. ನ್ಯಾಯಾಧೀಶರು ಸಮಾಧಾನದಿಂದ ಉತ್ತರಿಸಿದರು- ‘ಆ ಕಳ್ಳನು ತಪ್ಪನ್ನು ಒಪ್ಪಿಕೊಂಡನು. ಆದ್ದರಿಂದ ಅವನಲ್ಲಿ ಹೃದಯ ಪರಿವರ್ತನೆ ಸಾಧ್ಯತೆ ಇದೆ. ಆದರೆ ನೀವು ಒಪ್ಪಿಕೊಳ್ಳಲೇ ಇಲ್ಲ. ಆದ್ದರಿಂದ ಈ ಶಿಕ್ಷೆಯಿಂದ ನಿಮಗಾವ ಶಿಕ್ಷ ಣವೂ ಸಿಗಲಾರದು’ ಎಂದಾಗ ವ್ಯಾಪಾರಿ ತಲೆ ತಗ್ಗಿಸಿದ.

ಈ ಪ್ರಪಂಚದಲ್ಲಿ ಮಾನವನು ಶಾಲಾ-ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಪಡೆಯುವ ಶಿಕ್ಷ ಣಕ್ಕಿಂತ ಬದುಕೆಂಬ ವಿದ್ಯಾಲಯದಲ್ಲಿ ಪಡೆಯುವ ಶಿಕ್ಷ ಣವು ಹೆಚ್ಚು ಮೌಲ್ಯಯುತವಾದುದೇ ಆಗಿದೆ.

ಕಾನೂನು ಕಟ್ಟಳೆ, ರೀತಿ-ರಿವಾಜು, ನೀತಿ- ನಿಯಮಗಳನ್ನು ಮೀರಿದವರಿಗೆ ಸರಕಾರ ಇಲ್ಲವೇ ಸಮಾಜವು ನೀಡುವ ಶಿಕ್ಷೆಯೆಂದರೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟು, ಭವಿಷ್ಯದಲ್ಲೆಂದೂ ಅಂತಹ ತಪ್ಪು ಮಾಡದೆ ಸಭ್ಯ ನಾಗರಿಕರಾಗಿ ಬದುಕೆಂಬ ಪ್ರೇರಣೆ ನೀಡುವ ಹಾಗೆ ಪರಿವರ್ತನೆ ಮಾಡುವ ಉಜ್ವಲ ಶಿಕ್ಷ ಣವೇ ಆಗಿದೆ.

ಇಂತಹ ವ್ಯಕ್ತಿತ್ವ ಪರಿವರ್ತನೆಯ ಬಗ್ಗೆ ಅಭಿಮಾನ ಪಡಬೇಕಾಗಿದೆ.

ಕೃಪೆ: ಡಾ.ಡಿ.ವೀರೇಂದ್ರ ಹೆಗ್ಗಡೆ. (ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]