SSLC Exam From Tomorrow: 14 Exam Centers in Doddaballapura Taluk

ನಾಳೆಯಿಂದ SSLC ಪರೀಕ್ಷೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳ ಮಾಹಿತಿ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ತಾಲೂಕು ಹಂತದಲ್ಲಿ ಮಾ.21 ರಿಂದ ಏ.4 ರವರೆಗೆ ನಡೆಯಲಿರುವ 2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ (SSLC) ಪರೀಕ್ಷೆಗಳನ್ನು ತಾಲೂಕಿನ 14 ಕೇಂದ್ರಗಳಲ್ಲಿ ಶಾಲಾ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳಂತೆ, ತಾಲೂಕು ಆಡಳಿತದ ಮಾರ್ಗದರ್ಶನದಲ್ಲಿ ಪಾರದರ್ಶಕತೆಯಿಂದ ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾಲೂಕಿನ ಪ್ರೌಢಶಾಲೆಗಳಿಂದ ಹೊಸದಾಗಿ ಬಾಲಕರು 1921 ಮತ್ತು ಬಾಲಕಿಯರು 1879 ಸೇರಿ ಒಟ್ಟು 3800 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.

ಖಾಸಗಿಯಾಗಿ ಒಟ್ಟು -44 (ಗಂಡು-24 ಹೆಣ್ಣು-20) ಹಾಗೂ ಪುನಾವರ್ತಿತ ವಿದ್ಯಾರ್ಥಿಗಳು -99 (ಗಂಡು-75 ಹೆಣ್ಣು-24) ಒಟ್ಟಾರೆ ತಾಲೂಕಿನಲ್ಲಿ ಗಂಡು-2020 ಹೆಣ್ಣು- 1923 ಸೇರಿದಂತೆ ಒಟ್ಟು 3943 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ ಬರೆಯಲಿದ್ದಾರೆ.

ತಾಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಪರೀಕ್ಷೆಗೆ ಸಕಲ ಸಿದ್ಧತೆಯನ್ನು ಮಾಡಿ ಕೊಳ್ಳಲಾಗಿದೆ ಇದರಲ್ಲಿ ನಗರ ವ್ಯಾಪ್ತಿ-05 ಗ್ರಾಮೀಣ-09 ಕೇಂದ್ರಗಳಿವೆ.

ಎಲ್ಲಾ 14 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಜಿಲ್ಲಾ ಪಂಚಾಯತ್ ಸಿಇಒ ಕಚೇರಿಯಲ್ಲಿನ ಇಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತಿದೆ.

ಪರೀಕ್ಷೆ ನಡೆಯುವ ಕೇಂದ್ರದ 200ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಮದ್ಯಾಹ್ನ 3 ಗಂಟೆಯವರೆಗೆ ಯಾವುದೇ ರೀತಿಯ ಎಸ್.ಟಿ.ಡಿ, ಜೆರಾಕ್ಸ್ ಟೈಪಿಂಗ್ ಮುಂತಾದವುಗಳನ್ನು ತೆರೆಯಲು ನಿಷೇಸಿದೆ ಪರೀಕ್ಷಾ ಕೇಂದ್ರಗಳಿಗೆ ಅನಕೃತ ವ್ಯಕ್ತಿಗಳ ಆಥವಾ ಗುಂಪು ಸೇರದಂತೆ ಪೊಲೀಸ್ ರಕ್ಷಣೆ ಪಡೆಯಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಬೆಸ್ಕಾಂ, ಪೊಲೀಸ್, ಆರೋಗ್ಯ, ಖಜಾನೆ, ಕಂದಾಯ,ಸಾರಿಗೆ ಸೇರಿದಂತೆ ಇತರ ಇಲಾಖೆಗಳ ಸಹಾಯ ಪಡೆಯಲಾಗಿದೆ.

ಪರೀಕ್ಷಾ ಕಾರ್ಯಕ್ಕಾಗಿ ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು, ಸ್ಥಾನಿಕ ಜಾಗೃತದಳ, ವಿಚಕ್ಷಣ ದಳಗಳಿಗೆ ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ನೇಮಿಸಲಾಗಿದೆ.

ಪರೀಕ್ಷಾ ವೇಳಾಪಟ್ಟಿ

ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ನಡೆಯಲಿವೆ.

ಮಾ.21-ಪ್ರಥಮಭಾಷೆ (ಕನ್ನಡ), ಮಾ.24-ಗಣಿತ, ಮಾ.26-ಇಂಗ್ಲೀಷ್, ಮಾ.29-ಸಮಾಜ ವಿಜ್ಞಾನ, ಏ.2-ವಿಜ್ಞಾನ, ಏ.4-ತೃತೀಯ ಭಾಷೆ (ಹಿಂದಿ)

ಪರೀಕ್ಷಾ ಕೇಂದ್ರಗಳು

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪ್ರೌಢಶಾಲೆ, ದೊಡ್ಡಬೆಳವಂಗಲದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಲಿಕುಂಟೆಯ ಸರ್ಕಾರಿ ಪ್ರೌಢಶಾಲೆ, ತೂಬಗೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆ.

ಚೆನ್ನವೀರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹೊಸಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಶ್ರೀ ದೇವರಾಜ ಅರಸು ಪ್ರೌಢಶಾಲೆ, ಕಾರ್ಮಲ್ ಜ್ಯೋತಿ ಪ್ರೌಢಶಾಲೆ, ಅರಳು ಮಲ್ಲಿಗೆ ಬಾಗಿಲು ಸರ್ಕಾರಿ ಪ್ರೌಢಶಾಲೆ, ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಮೆಳೇಕೋಟೆ ಕ್ರಾಸ್‍ನ ಎಸ್‍ಜೆಸಿಆರ್ ಪ್ರೌಢಶಾಲೆ.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!