There is no Karnataka Bandh in Doddaballapura

ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಂದ್ ಆಚರಣೆ ಇಲ್ಲ

ದೊಡ್ಡಬಳ್ಳಾಪುರ (Doddaballapura): ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಒತ್ತಾಯಿಸಲು, ಮಾರ್ಚ್ 22ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಅಂದು ನಡೆಯುವ ಹೋರಾಟಕ್ಕೆ ದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳಿಂದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಬಂದ್ ಆಚರಿಸದೇ ಇರಲು ನಿರ್ಧರಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿನ ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯದಂತೆ, ಬಂದ್ ಆಚರಿಸದೇ ಪ್ರತಿಭಟನೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪ್ರಸ್ತುತ ಎಸ್‍ಎಸ್‍ಎಲ್‍ಸಿ ಹಾಗೂ ಕಾಲೇಜು ಪರೀಕ್ಷೆಗಳು ನಡೆಯುತ್ತಿವೆ. ಬಂದ್‍ನಿಂದಾಗಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಬೇಡ.

ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ, ಪಂಚಾಯಿತಿ ಅಭಿವೃದ್ಧಿ ಅಕಾರಿ ಮೇಲೆ ಹಲ್ಲೆ ಪ್ರಕರಣಗಳು ಕನ್ನಡಿಗರ ಸ್ವಾಭಿಮಾನ ಕೆಣಕಿವೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಅಪಮಾನವಾಗುತ್ತಿರುವುದು ಖಂಡನೀಯ. ಬೆಳಗಾವಿಯಲ್ಲಿ ಸದಾ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು.

ಹಲ್ಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಿ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ನಾಡಿನ ನೆಲ ಜನ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ನಿಲ್ಲಬೇಕು. ಪರಭಾಷಿಕರ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾ.22ರಂದು ಪ್ರತಿಭಟನೆ

ಸಭೆಯ ನಿರ್ಣಯವನ್ನು ಪ್ರಕಟಿಸಿದ ಮುಖಂಡರು, ಮಾ.22ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು.

ಶನಿವಾರ ಸರ್ಕಾರಿ ರಜೆ ಇರುವ ಕಾರಣ ಮಾ.21ರಂದು ಬೆಳಿಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಸಮಾವೇಶಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಬಂದ್‍ಗೆ ನಮ್ಮ ಬೆಂಬಲವಿಲ್ಲ. ತಾಲೂಕಿನ ಇತರ ಸಂಘಟನೆಗಳು ಬಂದ್ ಮಾಡಲು ಹೊರಟು, ಯಾವುದೇ ತೊಂದರೆಗಳಾದರೆ ನಮ್ಮ ಸಂಘಟನೆಗಳು ಹೊಣೆಯಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡರಾದ ಮುತ್ತೇಗೌಡ, ಸತೀಶ್, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪಾಧ್ಯಕ್ಷ ವಿ.ಪರಮೇಶ್, ತಿಮ್ಮರಾಜು, ಮುಖಂಡರಾದ ನಾಗರಾಜ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]