There is no Karnataka Bandh in Doddaballapura

ದೊಡ್ಡಬಳ್ಳಾಪುರದಲ್ಲಿ ಕರ್ನಾಟಕ ಬಂದ್ ಆಚರಣೆ ಇಲ್ಲ

ದೊಡ್ಡಬಳ್ಳಾಪುರ (Doddaballapura): ಬೆಳಗಾವಿಯಲ್ಲಿ ಮರಾಠಿಗರ ದಬ್ಬಾಳಿಕೆ ಖಂಡಿಸಿ ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರವನ್ನು ಒತ್ತಾಯಿಸಲು, ಮಾರ್ಚ್ 22ರಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳಿಂದ ಅಖಂಡ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ಅಂದು ನಡೆಯುವ ಹೋರಾಟಕ್ಕೆ ದೊಡ್ಡಬಳ್ಳಾಪುರದ ಕನ್ನಡಪರ ಸಂಘಟನೆಗಳಿಂದ ಬೆಂಬಲ ಸೂಚಿಸುತ್ತಿದ್ದು, ದೊಡ್ಡಬಳ್ಳಾಪುರದಲ್ಲಿ ಬಂದ್ ಆಚರಿಸದೇ ಇರಲು ನಿರ್ಧರಿಸಲಾಗಿದೆ ಎಂದು ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್ ಹೇಳಿದ್ದಾರೆ.

ಕರ್ನಾಟಕ ಬಂದ್ ಕುರಿತಂತೆ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಸಭೆಯಲ್ಲಿ ಮಾತನಾಡಿದ ಅವರು, ಸಭೆಯಲ್ಲಿನ ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯದಂತೆ, ಬಂದ್ ಆಚರಿಸದೇ ಪ್ರತಿಭಟನೆ ಮಾತ್ರ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ವಿವಿಧ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳ ಮುಖಂಡರು, ಪ್ರಸ್ತುತ ಎಸ್‍ಎಸ್‍ಎಲ್‍ಸಿ ಹಾಗೂ ಕಾಲೇಜು ಪರೀಕ್ಷೆಗಳು ನಡೆಯುತ್ತಿವೆ. ಬಂದ್‍ನಿಂದಾಗಿ ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಬೇಡ.

ಬೆಳಗಾವಿಯಲ್ಲಿ ಕನ್ನಡ ಮಾತನಾಡಿ ಎಂದ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ, ಪಂಚಾಯಿತಿ ಅಭಿವೃದ್ಧಿ ಅಕಾರಿ ಮೇಲೆ ಹಲ್ಲೆ ಪ್ರಕರಣಗಳು ಕನ್ನಡಿಗರ ಸ್ವಾಭಿಮಾನ ಕೆಣಕಿವೆ. ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಅಪಮಾನವಾಗುತ್ತಿರುವುದು ಖಂಡನೀಯ. ಬೆಳಗಾವಿಯಲ್ಲಿ ಸದಾ ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿರುವ ಎಂ.ಇ.ಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧಿಸಬೇಕು.

ಹಲ್ಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಿ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ನಾಡಿನ ನೆಲ ಜನ ವಿಚಾರದಲ್ಲಿ ಕೇಂದ್ರದ ಮಲತಾಯಿ ಧೋರಣೆ ನಿಲ್ಲಬೇಕು. ಪರಭಾಷಿಕರ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರಾಗಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸಲು ಹೋರಾಟ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಮಾ.22ರಂದು ಪ್ರತಿಭಟನೆ

ಸಭೆಯ ನಿರ್ಣಯವನ್ನು ಪ್ರಕಟಿಸಿದ ಮುಖಂಡರು, ಮಾ.22ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕನ್ನಡಪರ ಹಾಗೂ ರೈತ ಪರ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿರುವ ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಗುವುದು.

ಶನಿವಾರ ಸರ್ಕಾರಿ ರಜೆ ಇರುವ ಕಾರಣ ಮಾ.21ರಂದು ಬೆಳಿಗ್ಗೆ 10.30ಕ್ಕೆ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಸಮಾವೇಶಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು.

ಬಂದ್‍ಗೆ ನಮ್ಮ ಬೆಂಬಲವಿಲ್ಲ. ತಾಲೂಕಿನ ಇತರ ಸಂಘಟನೆಗಳು ಬಂದ್ ಮಾಡಲು ಹೊರಟು, ಯಾವುದೇ ತೊಂದರೆಗಳಾದರೆ ನಮ್ಮ ಸಂಘಟನೆಗಳು ಹೊಣೆಯಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಮುಖಂಡರಾದ ಮುತ್ತೇಗೌಡ, ಸತೀಶ್, ಕನ್ನಡ ಪಕ್ಷದ ವೆಂಕಟೇಶ್, ಮುನಿಪಾಪಯ್ಯ, ಡಾ,ರಾಜ್‍ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ಉಪಾಧ್ಯಕ್ಷ ವಿ.ಪರಮೇಶ್, ತಿಮ್ಮರಾಜು, ಮುಖಂಡರಾದ ನಾಗರಾಜ್, ನವೀನ್ ಮತ್ತಿತರರು ಪಾಲ್ಗೊಂಡಿದ್ದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!